ಸಿದ್ದರಬೆಟ್ಟದ ಶ್ರೀ ಸಿದ್ದೇಶ್ವರ ಸ್ವಾಮಿ ರಥೋತ್ಸವ
Team Udayavani, Apr 12, 2022, 4:42 PM IST
ಕೊರಟಗೆರೆ: ಸಂಜೀವಿನಿ ತಾಣವಾದ ಸಿದ್ದರಬೆಟ್ಟದ ಶ್ರೀ ಸಿದ್ದೇಶ್ವರಸ ಸ್ವಾಮಿ ರಥೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿದ್ದು, ವಿಶ್ವಕ್ಕೆ ಯಾವುದೇ ಮಾರಕ ಖಾಯಿಲೆ ಹರಡದಂತೆ ಸಿದ್ದೇಶ್ವರ ಸ್ವಾಮಿಯ ಕೃಪೆ ನಮ್ಮ ಮೇಲಿರಲಿ ಎಂದು ಸಿದ್ದರಬೆಟ್ಟದ ಶ್ರೀ ಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮಿಜಿ ತಿಳಿಸಿದರು.
ತಾಲ್ಲೂಕಿನ ಸುಪ್ರಸಿದ್ದ ಪುಣ್ಯ ಕ್ಷೇತ್ರ ಸಂಜೀವಿನಿ ಕ್ಷೇತ್ರವೆಂದೇ ಪ್ರಸಿದ್ದಿ ಪಡೆದಿರುವ ಸಿದ್ದರಬೆಟ್ಟದಲ್ಲಿ ನಡೆದ ಶ್ರೀ ಸಿದ್ದೇಶ್ವರ ಸ್ವಾಮಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವದ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.
ಸಿದ್ದೇಶ್ವರ ಸ್ವಾಮಿಯ ಕೃಪೆಯಿಂದ ಸಕಾಲಕ್ಕೆ ಮಳೆ ಬೆಳೆಯಾಗಿ, ಗ್ರಾಮೀಣ ಪ್ರದೇಶದ ರೈತಾಪಿ ವರ್ಗ ನೆಮ್ಮದಿಯ ಜೀವನ ಸಾಗಿಸಲಿ. ಮುಜರಾಯಿ ಇಲಾಖೆಯಿಂದ ರಥೋತ್ಸವ ಕಾರ್ಯಕ್ರಮ ನಡೆದರೆ ಭಕ್ತರಿಂದ ಮೂರು ದಿನ ಅನ್ನ ಸಂತರ್ಪಣೆ ನಡೆಯಲಿದೆ. ಸಿದ್ದರಬೆಟ್ಟ ಕ್ಷೇತ್ರದಲ್ಲಿ ಮೂರು ದಿನಗಳ ಕಾಲ ಜಾತ್ರಾ ಮಹೋತ್ಸವವು ಭಕ್ತರ ಸಹಕಾರದಿಂದ ವಿಜೃಂಭಣೆಯಿಂದ ನೆರವೇರಲಿದೆ ಎಂದು ಹೇಳಿದರು.
ತಹಶೀಲ್ದಾರ್ ನಹೀದಾ ಜಮ್ ಜಮ್ ಮಾತನಾಡಿ, ಇತಿಹಾಸ ಪ್ರಸಿದ್ದ ಪುಣ್ಯ ಕ್ಷೇತ್ರವಾದ ಸಿದ್ದರಬೆಟ್ಟದ ಶ್ರೀ ಸಿದ್ದೇಶ್ವರ ಸ್ವಾಮಿಯ ರಥೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿದೆ. ಸ್ವಾಮಿಯ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಮುಜರಾಯಿ ಇಲಾಖೆಯಿಂದ ದಾಸೋಹ ವ್ಯವಸ್ಥೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಶ್ರೀ ಸಿದ್ದೇಶ್ವರ ದೇವಾಲಯ ಆರ್ಚಕ ಮಹೇಶ್ ಮಾತನಾಡಿ, ರಾಮ ನವಮಿ ಹಬ್ಬದ ಮಾರನೇ ದಿನ ಸಿದ್ದರಬೆಟ್ಟದ ಕ್ಷೇತ್ರದ ಶ್ರೀ ಸಿದ್ದೇಶ್ವರ ಸ್ವಾಮಿಯ ರಥೋತ್ಸವ ಕಾರ್ಯಕ್ರಮ ನೆರವೇರಿದೆ. ಗ್ರಾಮಸ್ಥರಿಂದ ದಾಸೋಹ, ಹೆಸರು ಬೇಳೆ ಮತ್ತು ಪಾನಕದ ವ್ಯವಸ್ಥೆ ನಡೆಯಲಿದೆ. ಸಂಜೆ ಸಿದ್ದೇಶ್ವರ ಸ್ವಾಮಿಯ ಉತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ. ಬೂದಗವಿ, ಕುರಂಕೋಟೆ, ಮತ್ತು ತೋವಿನಕೆರೆ ಗ್ರಾಪಂ ನೇತೃತ್ವದಲ್ಲಿ ಮೂರು ದಿನ ಜಾತ್ರೆ ನಡೆಯಲಿದೆ ಎಂದು ತಿಳಿಸಿದರು.
ಇನ್ನೂಓದಿ : ಈಶ್ವರಪ್ಪ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ಬಂಧಿಸಬೇಕು: ಸುರ್ಜೇವಾಲ
ಕಾರ್ಯಕ್ರಮದಲ್ಲಿ ಬೂದಗವಿ ಗ್ರಾಪಂ ಅದ್ಯಕ್ಷೆ ವಿನೋದಾ, ಉಪಾಧ್ಯಕ್ಷ ಅಖಂಡರಾಧ್ಯ, ಪಿಡಿಒ ವಿಜಯಲಕ್ಷ್ಮಿ, ಉಪ ತಹಶಿಲ್ದಾರ್ ರಾಜು.ಎ.ಜೆ, ನರಸಿಂಹಮೂರ್ತಿ,ಮುಖಂಡರಾದ ನಂಜಾರಾಧ್ಯ, ವಿಜಯ್ ಶಂಕರ್,ಶಿವಕುಮಾರ್, ಮರಿ ಸಿದ್ದಪ್ಪ, ಗಿರೀಶ್, ಸಿದ್ದನಂಜಯ್ಯ, ಬಸವರಾಜು, ಸಿಬ್ಬಂದಿ ಕಲ್ಪನಾ, ಸೌಭಾಗ್ಯಮ್ಮ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತೆಯರು
2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್