ಬುಡಕಟ್ಟು ಸಿದ್ದಿ ಸಮುದಾಯದ ಮುಖಂಡ ಡಿಯೋಗ ಸಿದ್ದಿ ಇನ್ನಿಲ್ಲ


Team Udayavani, Aug 13, 2021, 7:22 PM IST

ಬುಡಕಟ್ಟು ಸಿದ್ದಿ ಸಮುದಾಯದ ಮುಖಂಡ ಡಿಯೋಗ ಸಿದ್ದಿ ಇನ್ನಿಲ್ಲ

ಕಾರವಾರ: ಬುಡಕಟ್ಟು ಸಿದ್ದಿ ಸಮುದಾಯದ ಧ್ವನಿಯಾಗಿದ್ದ ಡಿಯೋಗ ಸಿದ್ದಿ ಇಹಲೋಕ ತ್ಯಜಿಸಿದ್ದಾರೆ.

75 ವರ್ಷ ವಯಸ್ಸಿನ ಡಿಯೋಗ ಸಿದ್ದಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಮ್ಮ ತಂದೆ ಬಸ್ತ್ಯಾಂವ ರಿಂದ ಸಿದ್ದಿ ಸಮುದಾಯದ ಏಳಿಗೆಯ ದೀಕ್ಷೆ ಪಡೆದ ಡಿಯೋಗ ಸಿದ್ದಿ ಕಳೆದ ಐದು ದಶಕಗಳಿಂದ ತಮ್ಮ ಸಮುದಾಯದ ಸರ್ವಾಂಗೀಣ ಏಳಿಗೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು.

ಕೆಡಿಡಿಸಿ ಸಂಸ್ಥೆಯಲ್ಲಿ ಸಮಾಜ ಸೇವಾ ಕಾರ್ಯಕರ್ತ ತರಬೇತಿ ಪಡೆದು‌ ಕಾರ್ಯಕ್ಕಿಳಿದಿದ್ದು‌. ಗ್ರೀನ್ ಇಂಡಿಯಾ ಸಂಸ್ಥೆಯ ಕಾರ್ಯಕರ್ತರೂ ಸಹ ಆಗಿದ್ದರು. ವನಶ್ರೀ ಗಿರಿಜನರ ವಿವಿದೋದ್ದೇಶಗಳ ಸಹಕಾರಿ ಸಂಘವನ್ನು ಸಂಸ್ಥಾಪನೆ ಮಾಡಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ರಾಜ್ಯ ಮಟ್ಟದಲ್ಲಿ ಬುಡಕಟ್ಟು ಸಂಘಟನೆಯ ಉಪಾಧ್ಯಕ್ಷರಾಗಿದ್ದವರು.ಜಿಲ್ಲಾ ದೌರ್ಜನ್ಯ ಸಮಿತಿ ಸದಸ್ಯರಾಗಿದ್ದವರು.

ಇದನ್ನೂ ಓದಿ:ಆಗಸ್ಟ್ 15ರ ನಂತರ ರಾಜ್ಯದಲ್ಲಿ ಕಠಿಣ ನಿಯಮಗಳು ಜಾರಿ ಸಾಧ್ಯತೆ : ಸಚಿವ ಅಶೋಕ

ಬುಡಕಟ್ಟು ಸಮುದಾಯದ ಏಳಿಗೆಗಾಗಿ ಡಿಯೋಗ ಸಿದ್ದಿ ರವರ ಸೇವಾ ಕಾರ್ಯ ಗುರುತಿಸಿದ್ದ ಕರ್ನಾಟಕ ಸರ್ಕಾರವು ಇವರನ್ನು ವಾಲ್ಮೀಕಿ ಪ್ರಶಸ್ತಿ ನೀಡಿ ಪುರಸ್ಕರಿಸಿತ್ತು. ಸಮಾಜ ಕಲ್ಯಾಣ ಇಲಾಖಾ ಸಚಿವ ಹೆಚ್ ಆಂಜನೇಯ ರವರಿಗೆ ಹಳಿಯಾಳ ತಾಲೂಕಿನಲ್ಲಿ ಗ್ರಾಮ ವಾಸ್ತವ್ಯ ಮಾಡಿಸಿ ಸಿದ್ದಿ ಸಮುದಾಯದವರಿಗೆ ವೈಯಕ್ತಿಕ ಮತ್ತು ಸಾಮುದಾಯಿಕ ಪ್ರಗತಿಗೆ ಕೊಟ್ಯಾಂತರ ಮೊತ್ತದ ಪ್ಯಾಕೆಜ್ ಮಂಜೂರಿ ಮಾಡಿಸಿದ್ದರು.ದೇಶದ ಹಲವಾರು ಕಡೆಗಳಲ್ಲಿ ಆಯೋಜಿಸಲಾಗುತ್ತಿದ್ದ ಕಾರ್ಯಾಗಾರಗಳಲ್ಲಿ ಭಾಗವಹಿಸಿ ವ್ಯವಸ್ಥಿತವಾಗಿ ಬುಡಕಟ್ಟು ಜನಾಂಗದ ಅಭಿವೃದ್ಧಿ ವಿಷಯ ಮಂಡನೆ ಮಾಡುತ್ತಿದ್ದರು. ಹಳಿಯಾಳ ತಾಲೂಕಿನಲ್ಲಿ ಕಾಳನದಿ ನೀರಾವರಿ ಯೋಜನೆ ಜಾರಿಯಾಗಬೇಕು ಎಂದು ಬಹುಹಿಂದೆಯೇ ಪರಿಕಲ್ಪನೆ ಮೂಡಿಸಿದ್ದ ಮಹಾನುಭಾವರಾಗಿದ್ದರು.

ಹಳಿಯಾಳ ತಾಲೂಕು ಮಾತ್ರವಲ್ಲದೇ ಉತ್ತರ ಕನ್ನಡ ಜಿಲ್ಲೆ, ರಾಜ್ಯ , ರಾಷ್ಟ್ರಾದ್ಯಂತ ಅನೇಕ ಜನರೊಂದಿಗೆ ಒಡನಾಡ ಹೊಂದಿದ್ದ ಡಿಯೋಗ ಸಿದ್ದಿ ಎಂಬ ಶ್ರೇಷ್ಠ ವ್ಯಕ್ತಿ ನಿಧನರಾಗಿದ್ದು. ಬುಡಕಟ್ಟು ಜನಾಂಗದ ಗಟ್ಟಿ ಧ್ವನಿ ಇನ್ನಿಲ್ಲವಾದಂತಾಗಿದೆ.

ಮೃತ ಡಿಯೋಗ ಸಿದ್ದಿ ರವರು ಸಹೋದರ, ಸಹೋದರಿ, ಪತ್ನಿ , ಇಬ್ಬರು ಪುತ್ರಿಯರು, ಇಬ್ಬರು ಪುತ್ರರು, ಸಮಾಜಬಾಂಧವರು , ಅಭಿಮಾನಿಗಳು, ಆಪ್ತರನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.