ಕೋಲ್ಡ್‌ ನೀರನ್ನು ಕುಡಿಯುವುದರಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳೇನು?

ಫ್ರಿಡ್ಜ್ ನಲ್ಲಿರಿಸಿದ ನೀರು ಕುಡಿಯುವುದು ಮೆದುಳಿನ ಮೇಲೆ ಕೂಡಾ ಪರಿಣಾಮ ಬೀರುವ ಸಾಧ್ಯತೆ ಇದೆ

Team Udayavani, Mar 14, 2023, 5:40 PM IST

Web-cold-water

ಫ್ರಿಡ್ಜ್ ನಲ್ಲಿರಿಸಿದ ತಂಪಾದ ನೀರು ಕುಡಿಯುವುದು ಹಿತವೆನಿಸುತ್ತದೆ. ಬೇಸಿಗೆ ಕಾಲದಲ್ಲಿ ಹಲವರಿಗೆ ಬಿಸಿಲಿನಿಂದ ಬಂದ ತಕ್ಷಣ ಫ್ರಿಡ್ಜ್ ನೀರು ಕುಡಿಯುವ ಅಭ್ಯಾಸವಿರುತ್ತದೆ. ಕೆಲವರಿಗಂತೂ ಬಿಸಿಲು ಜಾಸ್ತಿಯಾಗುತ್ತಿದ್ದಂತೆಯೇ ಕೋಲ್ಡ್ ನೀರು ಬೇಕೇ ಬೇಕು ಎನಿಸುತ್ತದೆ. ಆದರೆ ಫ್ರಿಡ್ಜ್ ನಲ್ಲಿರುವ ನೀರು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

ನೀರು ನಮ್ಮ ದೇಹಕ್ಕೆ ಬಹಳ ಮುಖ್ಯ. ಉತ್ತಮ ಆರೋಗ್ಯಕ್ಕಾಗಿ ವೈದ್ಯರು ಸಾಧ್ಯವಾದಷ್ಟು ನೀರು ಕುಡಿಯುವಂತೆ ಸಲಹೆ ನೀಡುತ್ತಾರೆ. ಕೆಲವರು ತಣ್ಣೀರು ಹೆಚ್ಚು ಕುಡಿಯುತ್ತಾರೆ. ಬಿಸಿಲ ಬೇಗೆಯಲ್ಲಿ ಕೋಲ್ಡ್ ನೀರು ಕುಡಿಯುವುದು ಒಂದು ಕ್ಷಣಕ್ಕೆ ಹಿತ ಎನಿಸಬಹುದು. ಆದರೆ ಅದು ನಮ್ಮ ಆರೋಗ್ಯದ ಮೇಲೆ ಕೆಟ್ಟ ಪ್ರಭಾವ ಬೀರುತ್ತದೆ ಎಂಬುದು ಹಲವರಿಗೆ ತಿಳಿದಿಲ್ಲ.

ಶ್ರಮದಾಯಕ ಕೆಲಸದ ನಂತರ, ವ್ಯಾಯಾಮದ ಬಳಿಕ ಕೋಲ್ಡ್‌ ನೀರು ಕುಡಿಯುವುದು ಅಪಾಯಕಾರಿ. ಕೋಲ್ಡ್ ನೀರು ಕುಡಿಯುವುದರಿಂದ ಗಂಟಲು ಮತ್ತು ಮೂಗು ನೋವು ಹೆಚ್ಚಾಗುತ್ತದೆ. ವಿಶೇಷವಾಗಿ ಊಟದ ನಂತರ ನೀರು ಕುಡಿಯುವುದು, ಹೆಚ್ಚುವರಿ ಲೋಳೆಯು ಸಂಗ್ರಹಗೊಳ್ಳಲು ಕಾರಣವಾಗಬಹುದು. ಆಗ ಅನೇಕ ಉರಿಯೂತದ ಸೋಂಕುಗಳು ಉಂಟಾಗುವ ಸಾಧ್ಯತೆ ಇರುತ್ತದೆ.

ಫ್ರಿಡ್ಜ್ ನಲ್ಲಿರಿಸಿದ ನೀರು ಕುಡಿಯುವುದರಿಂದಾಗುವ ಇತರ ಆರೋಗ್ಯ ತೊಂದರೆಗಳು ಏನೆಂಬುದರ ಬಗ್ಗೆ ಗಮನ ಹರಿಸೋಣ..

ರೋಗನಿರೋಧಕ ಶಕ್ತಿ ದುರ್ಬಲ:

ಫ್ರಿಡ್ಜ್ ನಲ್ಲಿರಿಸಿದ ನೀರು ಕುಡಿಯುವುದರಿಂದ ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುವ ಸಾಧ್ಯತೆಯಿದೆ. ಹಾಗಾಗಿ, ಬೇಸಿಗೆಯಲ್ಲಿಯೂ ಸಾಮಾನ್ಯ ನೀರನ್ನು (ಫ್ರಿಜ್‌ ನಲ್ಲಿರಿಸದ) ಕುಡಿಯಲು ಪ್ರಯತ್ನಿಸಿ. ಹೀಗೆ ಮಾಡಿದಾಗ ಕೆಲವು ಕಾಯಿಲೆಗಳನ್ನು ಕೂಡಾ ನಾವು ದೂರವಿರಿಸಬಹುದು.

ತಲೆನೋವು ಮತ್ತು ಸೈನಸ್ ಸಾಧ್ಯತೆ:

ಫ್ರಿಡ್ಜ್ ನಲ್ಲಿರಿಸಿದ ನೀರು ಕುಡಿದ ತಕ್ಷಣ ಅದು ಮೆದುಳಿನ ಮೇಲೆ ಪರಿಣಾಮ ಬೀರುತ್ತದೆ. ಹೀಗಾದಾಗ ತಲೆ ನೋವು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಅತಿಯಾಗಿ ತಂಪಾದ ನೀರು ಕುಡಿಯುವುದರಿಂದ ‘ಮೆದುಳು ಫ್ರೀಜ್’ ಸಮಸ್ಯೆ ಉಂಟಾಗುತ್ತದೆ. ಫ್ರಿಡ್ಜ್ ನಲ್ಲಿರಿಸಿದ ನೀರು ಬೆನ್ನುಮೂಳೆಯ ಸೂಕ್ಷ್ಮ ನರಗಳನ್ನು ತಂಪಾಗಿಸುತ್ತದೆ, ಇದರಿಂದಾಗಿ ಅದು ಮೆದುಳಿನ ಮೇಲೆ ಪರಿಣಾಮ ಬೀರುತ್ತದೆ. ಈ ಕಾರಣಕ್ಕಾಗಿ ತಲೆನೋವು, ಸೈನಸ್ ಸಮಸ್ಯೆ ಸಂಭವಿಸಬಹುದು.

ಹೃದಯ ಬಡಿತ ನಿಧಾನವಾಗಿಸುತ್ತದೆ:

ಫ್ರಿಜ್ ನೀರು ಕುಡಿಯುವುದರಿಂದ ಹೃದಯ ಬಡಿತದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಸಾಮಾನ್ಯ ನೀರನ್ನು ಕುಡಿಯಲು ಪ್ರಯತ್ನಿಸಿ. ತಂಪಾದ ನೀರು ಹೃದಯ ಬಡಿತವನ್ನು ಕಡಿಮೆ ಮಾಡುತ್ತದೆ. ಹೀಗಾದಾಗ ಹೃದ್ರೋಗದ ಅಪಾಯ ಕೂಡಾ ಹೆಚ್ಚುತ್ತದೆ. ಫ್ರಿಡ್ಜ್ ನಲ್ಲಿರಿಸಿದ ನೀರು ಕುಡಿಯುವುದು ಮೆದುಳಿನ ಮೇಲೆ ಕೂಡಾ ಪರಿಣಾಮ ಬೀರುವ ಸಾಧ್ಯತೆ ಇದೆ.

ಜೀರ್ಣಕ್ರಿಯೆ ಸಮಸ್ಯೆಗೆ ಕಾರಣ:

ದೇಹದ ಉಷ್ಣತೆ ಮತ್ತು ತೇವಾಂಶವನ್ನು ನಿಯಂತ್ರಿಸಲು ಪ್ರಯತ್ನಿಸುವುದರಿಂದ ಜೀರ್ಣಕ್ರಿಯೆ ಸಮಸ್ಯೆ ಉಂಟಾಗುತ್ತದೆ. ಫ್ರಿಡ್ಜ್ ನಲ್ಲಿರಿಸಿದ ನೀರು ಕುಡಿದರೆ ನಾವು ಸೇವಿಸುವ ಆಹಾರ ಸುಲಭವಾಗಿ ಜೀರ್ಣವಾಗುವುದಿಲ್ಲ. ಹೊಟ್ಟೆ ನೋವು, ವಾಕರಿಕೆ, ಮಲಬದ್ಧತೆ ಮತ್ತು ವಾಯು ಮುಂತಾದ ಸಮಸ್ಯೆಗಳನ್ನು ಉಂಟುಮಾಡುತ್ತದೆ.

ದೇಹದ ಕೊಬ್ಬನ್ನು ಹೆಚ್ಚಿಸಿಸುತ್ತದೆ:

ಫ್ರಿಡ್ಜ್ ನಲ್ಲಿರಿಸಿದ ನೀರು ನಿಮ್ಮ ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಗಟ್ಟಿಯಾಗಿಸುತ್ತದೆ ಮತ್ತು ದೇಹಕ್ಕೆ ಅನಗತ್ಯ ಕೊಬ್ಬನ್ನು ಒಡೆಯಲು ಕಷ್ಟವಾಗುತ್ತದೆ. ಅಲ್ಲದೆ ಊಟವಾದ ತಕ್ಷಣ ಅಥವಾ ಊಟಕ್ಕಿಂತ ಮುಂಚೆ ನೀರು ಕುಡಿಯುವುದು ಸೂಕ್ತವಲ್ಲ. ಊಟ ಮಾಡುವ ಅರ್ಧ ಗಂಟೆ ಮುಂಚಿತವಾಗಿ ಅಥವಾ ಊಟವಾದ ಅರ್ಧ ಗಂಟೆ ಬಳಿಕ ನೀರು ಕುಡಿಯುವುದು ಸೂಕ್ತ ಸಮಯ.

ವ್ಯಾಯಾಮ ಮಾಡಿದ ನಂತರ ಐಸ್ ನೀರನ್ನು ಕುಡಿಯುವುದು ಒಳ್ಳೆಯದಲ್ಲ. ವ್ಯಾಯಾಮದ ನಂತರ ಉಗುರುಬೆಚ್ಚನೆಯ ನೀರನ್ನು ಕುಡಿಯುವುದು ಉತ್ತಮ. ವ್ಯಾಯಾಮ ಮಾಡುವುದರಿಂದ ದೇಹದ ಉಷ್ಣತೆ ಹೆಚ್ಚುತ್ತದೆ. ತಕ್ಷಣ ಐಸ್ ವಾಟರ್ ಕುಡಿಯುವುದರಿಂದ ಹೊಟ್ಟೆಯಲ್ಲಿ ಕಿರಿಕಿರಿ ಉಂಟು ಮಾಡುತ್ತದೆ. ಅಲ್ಲದೆ ಫ್ರಿಡ್ಜ್ ನಲ್ಲಿರಿಸಿದ ನೀರನ್ನು ದೇಹವು ಹೀರಿಕೊಳ್ಳುವುದಿಲ್ಲ ಆದ್ದರಿಂದ ಅದನ್ನು ಕುಡಿಯುವುದರಿಂದ ಯಾವುದೇ ಪ್ರಯೋಜನವಿಲ್ಲ ಎನ್ನುತ್ತಾರೆ ತಜ್ಞರು.

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.