ಅನ್ಯಾಯವನ್ನು ತಪ್ಪಿಸಿ ಶಾಶ್ವತ ನೆಲೆ ಕಲ್ಪಿಸುವಂತೆ ಬಸವನಪೇಟೆ ಜನರ ಮನವಿ
Team Udayavani, Jan 19, 2022, 7:12 PM IST
ಕುರುಗೋಡು : ಸಮೀಪದ ಸಿರಿಗೇರಿ ಗ್ರಾಮದ ಬಸವನ ಪೇಟೆಯಯಲ್ಲಿ ವಾಸ ಮಾಡುತ್ತಿರುವ 130 ಕುಟುಂಬಗಳಿಗೆ ಆಗುತ್ತಿರುವ ಕಿರುಕುಳವನ್ನು ತಪ್ಪಿಸಿ ಶಾಶ್ವತ ನೆಲೆ ಕಲ್ಪಿಸುವಂತೆ ಗ್ರಾಪಂ ಕಾರ್ಯದರ್ಶಿ ವೀರೇಶ್ ಅವರಿಗೆ ಸ್ಥಳೀಯರು ಮನವಿ ಪತ್ರ ಸಲ್ಲಿಸಿದರು.
ಇದೆ ವೇಳೆ ವಾರ್ಡಿನ ಗ್ರಾಮಸ್ಥರು ಮಾತನಾಡಿ, ಸಿರಿಗೇರಿ ಗ್ರಾಮದ ಒಂದನೇ ವಾರ್ಡಿನ ಬಸವಪೇಟೆಯಲ್ಲಿ ಸುಮಾರು ಮೂವತ್ತು ವರ್ಷಕ್ಕೂ ಹೆಚ್ಚುಕಾಲ ವಾಸವಾಗಿರುವ ಸುಮಾರು 130 ಜನರು ತಮ್ಮ ವೃತ್ತಿಯಿಂದ ಕೂಲಿಯನ್ನೇ ಅವಲಂಬಿಸಿ ವಾಸಮಾಡುತ್ತಿದ್ದಾರೆ.
ಇವರುಗಳು ವಾಸಮಾಡುತ್ತಿರುವ ಜಾಗದಲ್ಲಿ ಸ್ಥಳೀಯ ಗ್ರಾಮ ಆಡಳಿತವು ಸರ್ಕಾರದ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿದೆ. ಆಶ್ರಯ ಮನೆ, ವೈಯಕ್ತಿಕ ಶೌಚಾಲಯ, ಕುಡಿಯುವ ನೀರು,ವಿದ್ಯುತ್ ಸಂಪರ್ಕ,ಮಣ್ಣಿನ ರಸ್ತೆ ಈ ಜಾಗವನ್ನು ಭೋವಿ ಜನಾಂಗದ ದಿವಂಗತ ಸಣ್ಣಹುಲುಗಪ್ಪ ಮತ್ತು ಧರ್ಮಪತ್ನಿ ತಿಮ್ಮಕ್ಕ ಒಪ್ಪಂದವನ್ನು ಮಾಡಿಸಿಕೊಂಡಿದ್ದಾರೆ. ಆದರೆ ಈ ಜಾಗ ನೋಂದಣಿಯಾಗಿಲ್ಲ ಎಂಬ ಒಂದೇ ಕಾರಣಕ್ಕೆ ಇಲ್ಲಿ ವಾಸಿಸುವ ಜನರು ಮನೆ ಖಾಲಿ ಮಾಡುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಇದರಿಂದ ಒಂದು ವೇಳೆ ಈ ಜನ ತಮ್ಮ ಮನೆಗಳನ್ನು ತೆರವುಗೊಳಿಸಿದರೆ ಇಲ್ಲಿರುವ ಕುಟುಂಬದ ಮಕ್ಕಳು, ವೃದ್ಧರು, ಬೀದಿಪಾಲಾಗುವ ಸಂಭವವಿದೆ. ಆದಕಾರಣ ಸಂಬಂದಿಸಿದ ಅಧಿಕಾರಿಗಳು ಇದರ ಬಗ್ಗೆ ಸೂಕ್ತ ಮಾಹಿತಿ ಪಡೆದುಕೊಂಡು ತೀರ್ಮಾನ ಕೈಗೊಳ್ಳಬೇಕು ಜೊತೆಗೆ ನೊಂದ ಕುಟುಂಬಗಳಿಗೆ ಆಶ್ರಯ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಹಾಗೂ ವಾರ್ಡಿನ ಗ್ರಾಮಸ್ಥರು ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ