SIM Card: ನಾಳೆಯಿಂದ ನೂತನ ನಿರ್ಬಂಧ 

ಹೊಸ ನಿಯಮಗಳಿವು...

Team Udayavani, Nov 30, 2023, 7:20 AM IST

SIM CARD

ದೇಶದಲ್ಲಿ ಸಿಮ್‌ ಕಾರ್ಡ್‌ಗಳನ್ನು ಬಳಸಿ ನಡೆಸುತ್ತಿರುವ ವಂಚನೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಿಮ್‌ಗಳ ಖರೀದಿ ಮತ್ತು ಮಾರಾಟಕ್ಕೆ ಸರ್ಕಾರ ಕೆಲ ನಿರ್ಬಂಧಗಳನ್ನು ವಿಧಿಸಿದೆ. ಅಲ್ಲದೇ, ನಿಯಮಗಳನ್ನೂ ಕಠಿಣಗೊಳಿಸಿದೆ. ದೂರಸಂಪರ್ಕ ಇಲಾಖೆಯು ಈ ಸಂಬಂಧಿಸಿದಂತೆ ರೂಪಿಸಿರುವ ನಿಯಮಗಳನ್ನು ಡಿಸೆಂಬರ್‌ 1 ರಿಂದ ಜಾರಿಗೊಳಿಸಲಾಗುತ್ತಿದೆ. ಸಿಮ್‌ ಮಾರಾಟಗಾರರು ಮತ್ತು ಖರೀದಿದಾರರು ಇನ್ನುಮುಂದೆ ಈ ನಿಯಮಗಳನ್ನು ಅನುಸರಿಸುವುದು ಅಗತ್ಯವಾಗಿದೆ.

ಹೊಸ ನಿಯಮಗಳಿವು

ಸಮಗ್ರ ಪರಿಶೀಲನೆ ಕಡ್ಡಾಯ: ಸಿಮ್‌ ಕಾರ್ಡ್‌ಗಳನ್ನು ಮಾರಾಟ ಮಾಡುವವರು ಸಮಗ್ರ ಪರಿಶೀಲನೆಗೆ ಒಳಪಡುವ ಅಗತ್ಯವಿದೆ. ಪೊಲೀಸ್‌ ಪರಿಶೀಲನೆ ಜವಾಬ್ದಾರಿಯನ್ನು ಆಯಾ ಟೆಲಿಕಾಮ್‌ ಸಂಸ್ಥೆಗಳು ವಹಿಸಿಕೊಳ್ಳಬೇಕಿದೆ. ಅಲ್ಲದೇ, ಸಿಮ್‌ ಮಾರಾಟ ಮಾಡಿದ ಕ್ಷಣವೇ ನೋಂದಣಿಯನ್ನೂ ಮಾಡಬೇಕಿದ್ದು ಈ ನಿಯಮ ಪಾಲನೆಯಲ್ಲಿ ವಿಫ‌ಲರಾದರೆ 10 ಲಕ್ಷ ರೂ.ಗಳ ದಂಡ ಪಾವತಿಸಬೇಕಾಗುತ್ತದೆ.

ಆಧಾರ್‌ ಸಲ್ಲಿಕೆ: ಅಸ್ತಿತ್ವದಲ್ಲಿರುವ ಮೊಬೈಲ್‌ ಸಂಖ್ಯೆಗೆ ನೂತನ ಸಿಮ್‌ ಕಾರ್ಡ್‌ ಪಡೆಯುವ ಗ್ರಾಹಕರು ಕೂಡ ಆಧಾರ್‌ ಕಾರ್ಡ್‌ ಮತ್ತು ಬಯೋಮೆಟ್ರಿಕ್‌ ಸಲ್ಲಿಸುವುದು ಕಡ್ಡಾಯವಾಗಿದೆ.

ಖರೀದಿಗೆ ಮಿತಿ: ವಾಣಿಜ್ಯ ಉದ್ದೇಶಕ್ಕಾಗಿ ವ್ಯವಹಾರ ಸಂಪರ್ಕದ ಮೂಲಕ ಮಾತ್ರವೇ ವ್ಯಕ್ತಿಗಳು ದೊಡ್ಡ ಪ್ರಮಾಣದಲ್ಲಿ ಸಿಮ್‌ ಕಾರ್ಡ್‌ಗಳನ್ನು ಖರೀದಿಸಬಹುದು. ಅದರ ಹೊರತಾಗಿ ಒಬ್ಬ ವ್ಯಕ್ತಿಯು ತನ್ನ ಐಡಿ ಕಾರ್ಡ್‌ ಆಧಾರದ ಮೇಲೆ ಕೇವಲ 9 ಸಿಮ್‌ಗಳನ್ನು ಮಾತ್ರ ಖರೀದಿಸಬಹುದೆಂಬ ಮಿತಿಯನ್ನು ವಿಧಿಸಲಾಗಿದೆ.

90 ದಿನದ ಅವಧಿ: ಸಿಮ್‌ ಕಾರ್ಡ್‌ ಒಂದು ನಿಷ್ಕ್ರಿಯಗೊಂಡ ತಕ್ಷಣ ಅದೇ ನಂಬರ್‌ ಅನ್ನು ಬೇರೆ ಯಾರಿಗೋ ಹಂಚಿಕೆ ಮಾಡುವಂತಿಲ್ಲ. ಸಿಮ್‌ ನಿಷ್ಕ್ರಿಯಗೊಂಡ 90 ದಿನಗಳ ಒಳಗೆ ಅದೇ ವ್ಯಕ್ತಿ ಬೇಕಿದ್ದರೆ ನವೀಕರಣ ಮಾಡಿಕೊಳ್ಳುವ ಅವಕಾಶವಿದೆ. ಅವಧಿ ಮೀರಿದ ಬಳಿಕ ಬೇಕಿದ್ದರೆ ಮತ್ತದೇ ಸಂಖ್ಯೆಯ ಹಂಚಿಕೆಗೆ ಅವಕಾಶವಿದೆ.

ಇಂದೇ ಕೊನೆ ಅವಕಾಶ: ಸಿಮ್‌ ಕಾರ್ಡ್‌ಗಳನ್ನು ಮಾರಾಟ ಮಾಡುವವರು ಮಾರಾಟಗಾರರ ಸಾಲಿನಲ್ಲಿ ನೋಂದಾಯಿಸಿಕೊಂಡಿರಬೇಕಾಗುತ್ತದೆ. ನವೆಂಬರ್‌ 30 ನೋಂದಣಿಗೆ ಕಡೆಯ ದಿನವಾಗಿದ್ದು ಆ ಬಳಿಕವೂ ನೋಂದಣಿ ಮಾಡಿಕೊಳ್ಳದೇ ಸಿಮ್‌ ಮಾರಾಟ ಮಾಡಿದರೆ ಅಂಥವರು 10 ಲಕ್ಷ ರೂ. ದಂಡಕ್ಕೆ ಗುರಿಯಾಗಲಿದ್ದಾರೆ.

 

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.