Healthcare: ಮಳೆಗಾಲದಲ್ಲಿ ತ್ವಚೆಯ ಆರೋಗ್ಯ ಕಾಯ್ದುಕೊಳ್ಳಲು ಈ ಕ್ರಮಗಳನ್ನು ಅನುಸರಿಸಿ…


Team Udayavani, Jun 13, 2023, 5:25 PM IST

web

ಮಳೆಗಾಲ ಆರಂಭವಾಗುತ್ತಿದೆ. ಕಾಲಕ್ಕೆ ತಕ್ಕಂತೆ ತ್ವಚೆಯ ಆರೈಕೆಯೂ ಮುಖ್ಯ. ಬೇಸಿಗೆಯಲ್ಲಿ ಸೂರ್ಯನ ಶಾಖಕ್ಕೆ, ಬಿಸಿಲಿಗೆ ಟ್ಯಾನ್‌ ಆಗುವಂತೆ ಮಳೆಗಾಲದಲ್ಲಿ ಬ್ಯಾಕ್ಟೀರಿಯಾಗಳು ಹೆಚ್ಚಾಗಿ ಹರಡುವುದರಿಂದ ತ್ವಚೆ ಸಮಸ್ಯೆ, ಅಲರ್ಜಿ ಉಂಟಾಗುತ್ತದೆ.

ನಾವು ಸುಂದರವಾಗಿ ಕಾಣುವುದೇ ತ್ವಚೆ ಅಥವಾ ದೇಹದ ಚರ್ಮದಿಂದ. ನಮ್ಮ ಸೌಂದರ್ಯವನ್ನು ಎದ್ದು ಕಾಣುವಂತೆ ಮಾಡುವುದೇ ನಮ್ಮ ಸುಂದರವಾದ ಚರ್ಮ. ಹೀಗಾಗಿ ಯಾವಾಗಲೂ ಸುಂದರವಾದ ಚರ್ಮ ಹೊಂದಬೇಕೆಂಬುದು ಎಲ್ಲರೂ ಅಂದುಕೊಳ್ಳುವುದು ಸಾಮಾನ್ಯ ಸಂಗತಿಗಳಲ್ಲಿ ಒಂದು.

ನಮ್ಮ ಸೌಂದರ್ಯದ ಪ್ರತೀಕ ಎಂದರೆ ಅದು ನಮ್ಮ ತ್ವಚೆ. ಇದು ನಮ್ಮ ದೇಹಕ್ಕೆ ಸಂಪೂರ್ಣವಾಗಿ ರಕ್ಷಣೆ ನೀಡುತ್ತದೆ. ಬೇಸಿಗೆಯಲ್ಲಿ ಸೂರ್ಯನ ವಿಕಿರಣದಿಂದ ಹಾನಿಯಾಗದಂತೆ ಚರ್ಮ ರಕ್ಷಿಸುತ್ತದೆ. ಕೇವಲ ಸೂರ್ಯನ ವಿಕಿರಣಗಳಿಂದ ಮಾತ್ರ ಅಲ್ಲ ಚಳಿ ಹಾಗೂ ಮಳೆಗಾಲದಲ್ಲೂ ಚರ್ಮದ ರಕ್ಷಣೆ ಬಗ್ಗೆ ಗಮನ ಹರಿಸುವುದು ಮುಖ್ಯ.

ಮಳೆ ಚರ್ಮದ ಮೇಲೆ ಹಾನಿಯನ್ನುಂಟು ಮಾಡುತ್ತದೆ. ಮಳೆಗಾಲ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ತರುತ್ತದೆ. ಇದನ್ನು ನಿರ್ಲಕ್ಷ್ಯಿಸುವಂತಿಲ್ಲ. ಈ ಮಳೆಗಾಲದ ಸಮಯದಲ್ಲಿ ಚರ್ಮದ ಬಗ್ಗೆ ವಿಶೇಷ ಗಮನ ಹರಿಸಬೇಕಾಗುತ್ತದೆ.

ಚರ್ಮದ ಮೇಲಿರುವ ಸಣ್ಣ ಸಣ್ಣ ರಂದ್ರಗಳು ಸಾಕಷ್ಟು ಸೋಂಕುಕಾರಕ ರೋಗಾಣುಗಳನ್ನು ನಮ್ಮ ದೇಹ ಪ್ರವೇಶ ಮಾಡುವಂತೆ ಮಾಡುತ್ತದೆ. ಹಾಗಾಗಿ ಚರ್ಮದ ಶುಚಿತ್ವ ನಮಗೆ ತುಂಬಾ ಮುಖ್ಯ.

ನಮ್ಮ ದೇಹದ ಚರ್ಮದ ಯಾವುದೇ ಭಾಗದಲ್ಲಿ ತೇವಾಂಶ ಹೆಚ್ಚು ಇರದಂತೆ ನೋಡಿಕೊಳ್ಳಬೇಕು. ಆರೋಗ್ಯಕರವಾದ ಚರ್ಮವನ್ನು ಹೊಂದುವುದರ ಜೊತೆಗೆ ಚರ್ಮದ ಸೌಂದರ್ಯವನ್ನು ಹೆಚ್ಚು ಮಾಡುವಂತಹ ಅಂಶಗಳನ್ನು ಮತ್ತು ಮಳೆಗಾಲದಲ್ಲಿ ತ್ವಚೆಗೆ ಯಾವುದೇ ಹಾನಿಯಾಗದಂತಹ ವಿಚಾರಗಳ ಕಡೆಗೆ ಗಮನ ಹರಿಸಿದರೆ ಒಳ್ಳೆಯದು.

ಮಳೆಗಾಲದಲ್ಲಿ ಅಲರ್ಜಿ ಸಮಸ್ಯೆ ಹೆಚ್ಚಾಗಿರುತ್ತದೆ. ಅಲರ್ಜಿ ತಡೆಗಟ್ಟಲು ವಾರದಲ್ಲಿ ಎರಡು ಬಾರಿ ಸ್ಕ್ರಬ್‌ ಮಾಡಬೇಕು. ಒಂದು ಚಮಚ ಆಲೀವ್ ಅಥವಾ ಕೊಬ್ಬರಿ ಎಣ್ಣೆಗೆ 1 ಚಮಚ ಸಕ್ಕರೆ ಹಾಕಿ, ಮುಖ ಹಾಗೂ ತುಟಿಗೆ ಹಚ್ಚಿ ನಿಧಾನವಾಗಿ 5 ನಿಮಿಷ ಸ್ಕ್ರಬ್ ಮಾಡಿ. ಹೀಗೆ ಮಾಡಿದರೆ ತ್ವಚೆ ತುಂಬಾ ಮೃದುವಾಗುತ್ತದೆ.

ಮುಖ ಕಾಂತಿಯುತವಾಗಲು ಮುಲ್ತಾನಿ ಮಿಟ್ಟಿ ಅಥವಾ ಯಾವುದೇ ಹಣ್ಣಿನಿಂದ ತಯಾರಿಸಿದ ಫೇಸ್‌ ಮಾಸ್ಕ್‌ ಉಪಯೋಗಿಸಬಹುದು.

ಮಳೆಗಾಲದಲ್ಲಿ ಸಾಧ್ಯವಾದಷ್ಟು ರೋಗ – ನಿರೋಧಕ ಶಕ್ತಿ ಹೆಚ್ಚಿಸುವ ಆಹಾರಗಳ ಕಡೆಗೆ ಗಮನವಿಡಿ. ಮಾಂಸಹಾರಕ್ಕಿಂತ ಹಣ್ಣು – ತರಕಾರಿಗಳನ್ನು ಹೆಚ್ಚಾಗಿ ಸೇವಿಸಿ. ಬಳಸಿಕೊಳ್ಳಿ.

ಮಳೆಗಾಲದಲ್ಲಿ ಹೆಚ್ಚು ನೀರು ಕುಡಿಯುವುದರಿಂದ ನಮ್ಮ ದೇಹದಿಂದ ವಿಷಕಾರಿ ಅಂಶಗಳು ದೂರವಾಗಿ ಸದಾ ಆರೋಗ್ಯದಿಂದ ಇರಬಹುದು. ತ್ವಚೆ ರಕ್ಷಣೆಗೂ ಹೆಚ್ಚೆಚ್ಚು ನೀರು ಕುಡಿಯುವುದು ಮುಖ್ಯ.

ದೇಹಕ್ಕೆ ನೀರಿನ ಅಂಶವನ್ನು ಒದಗಿಸುವ ಸೀಸನಲ್ ಹಣ್ಣುಗಳಾದ ನೇರಳೆ ಹಣ್ಣು, ಸೇಬು ಹಣ್ಣು, ಕಿತ್ತಳೆ ಹಣ್ಣು, ಮೋಸಂಬಿ ಹಣ್ಣು, ದಾಳಿಂಬೆ ಹಣ್ಣು, ಚೆರ್ರಿ ಹಣ್ಣು ಮತ್ತು ಪೈನಾಪಲ್ ಹಣ್ಣುಗಳನ್ನು ಅತ್ಯಧಿಕವಾಗಿ ಸೇವನೆ ಮಾಡಿ.

ಗ್ರೀನ್ ಟೀ ಮತ್ತು ಹಾಟ್ ವೆಜಿಟೇಬಲ್ ಸೂಪ್ ಆಗಾಗ ಸೇವಿಸಿ ದೇಹದ ರೋಗ – ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ.

ರೆಫ್ರಿಜಿರೇಟರ್ ನಲ್ಲಿಟ್ಟ ಪಾನೀಯಗಳನ್ನು ಮತ್ತು ಜ್ಯೂಸ್ ಸೇವನೆ ಮಾಡಬೇಡಿ. ಇದರಿಂದ ಎದೆಯಲ್ಲಿ ಕಫ ಕಟ್ಟುವ ಸಾಧ್ಯತೆ ಹೆಚ್ಚು.

ಮಲಗುವ ಮುನ್ನ ಮೇಕಪ್ ತೆಗೆಯಿರಿ:

ಮಲಗುವ ಮುನ್ನ ಮೇಕಪ್ ತೆಗೆದುಹಾಕುವುದು ಅತ್ಯಂತ ಅವಶ್ಯಕ. ಮೇಕಪ್ ರಾತ್ರಿ ಸಮಯದಲ್ಲಿ ಚರ್ಮಕ್ಕೆ ವ್ಯಾಪಕ ಹಾನಿಯನ್ನುಂಟು ಮಾಡುತ್ತದೆ. ‌

*ಕಾವ್ಯಶ್ರೀ

ಟಾಪ್ ನ್ಯೂಸ್

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.