Smart Phone: ಅತಿಯಾದ ಸ್ಮಾರ್ಟ್‌ಫೋನ್‌ ಬಳಕ ; ಪೋಷಕರು-ಮಕ್ಕಳು ದೂರ ದೂರ !


Team Udayavani, Dec 27, 2023, 12:11 AM IST

smart phone

ಸ್ಮಾರ್ಟ್‌ಫೋನ್‌ ಇದೀಗ ಪ್ರತಿಯೊಬ್ಬರ ಜೀವನದಲ್ಲೂ ಹಾಸುಹೊಕ್ಕಾಗಿರುವ ವಸ್ತು. ಉಸಿರು ನಿಂತರೂ ಮೊಬೈಲ್‌ ಬಿಡೇವು ಎನ್ನುವಂತಹ ಸ್ಥಿತಿಯಲ್ಲಿದ್ದೇವೆ. ಹಿರಿಯರಿಂದ ಹಿಡಿದು ಚಿಕ್ಕ ಮಕ್ಕಳವರೆಗೂ ಎಲ್ಲರೂ ಫೋನ್‌ನೊಳಗೆ ಸ್ಮಾರ್ಟ್‌ ಲೋಕವನ್ನು ದಿನಂಪ್ರತಿ ಕಣ್ತುಂಬಿಕೊಳ್ಳುವವರೇ. ಅತಿಯಾದ ಮೊಬೈಲ್‌ ಬಳಕೆ ಮಾನವರ ನಡುವಿನ ಸಂಬಂಧವನ್ನು ಹಾಳುಮಾಡುತ್ತಿದೆ ಎಂಬುದು ಸ್ಮಾರ್ಟ್‌ಫೋನ್‌ನ ಪ್ರಸಿದ್ಧಿಯ ಜತೆಜತೆಗೆ ಕೇಳಿಕೊಂಡು ಬಂದಿರುವ ಆರೋಪ. ಸ್ಮಾರ್ಟ್‌ಫೋನ್‌ನ ಬಳಕೆ ಪೋಷಕರ ಹಾಗೂ ಮಕ್ಕಳ ನಡುವಿನ ಬಾಂಧವ್ಯವನ್ನು ಹದಗೆಡಿಸುತ್ತಿದೆ ಎಂದು ಇತ್ತೀಚಿನ ಸಮೀಕ್ಷೆ ತಿಳಿಸಿದೆ. ಹಾಗಾದರೆ ಏನಿದು ಸಮೀಕ್ಷೆ ? ಸಮೀಕ್ಷಾ ವರದಿಯಲ್ಲಿ ಯಾವೆಲ್ಲ ಅಂಶಗಳನ್ನು ಪ್ರಸ್ತಾವಿಸಲಾಗಿದೆ ಎಂಬ ಕುರಿತಂತೆ ಇಲ್ಲಿದೆ ಮಾಹಿತಿ.

ಏನಿದು ಸಮೀಕ್ಷೆ?
“ಪೋಷಕರ ಹಾಗೂ ಮಕ್ಕಳ ಸಂಬಂಧದ ಮೇಲೆ ಸ್ಮಾರ್ಟ್‌ ಫೋನ್‌ಗಳ ಪರಿಣಾಮ’ ಎಂಬ ವಿಷಯದ ಮೇಲೆ ಸೈಬರ್‌ ಮೀಡಿಯಾ ರಿಸರ್ಚ್‌ (ಸಿಎಂಆರ್‌) ಹಾಗೂ ವಿವೊ ಮೊಬೈಲ್‌ ಕಂಪೆನಿ ಜಂಟಿಯಾಗಿ ಸಮೀಕ್ಷೆ ನಡೆಸಿ ವರದಿಯನ್ನು ಬಿಡುಗಡೆ ಮಾಡಿದೆ. ಈ ಸಮೀಕ್ಷೆಯಲ್ಲಿ ದೇಶದ 1,500 ಜನರಿಂದ ಅಭಿಪ್ರಾಯವನ್ನು ಸಂಗ್ರಹಿಸಿ ವರದಿಯನ್ನು ಸಿದ್ಧಪಡಿಸಲಾಗಿದೆ.

ಕೀಳರಿಮೆ, ಭಯದ ಭಾವನೆ
 ಈಗೀಗ ಸ್ಮಾರ್ಟ್‌ಫೋನ್‌ಗಳು ಶಿಕ್ಷಣದ ಮಾಹಿತಿಗಳನ್ನು ಪೂರೈಸುವ ಅಗತ್ಯಗಳಲ್ಲಿ ಒಂದಾಗಿದೆ. ಪೋಷಕರು 12-14 ವಯಸ್ಸಿನಲ್ಲೇ ತಮ್ಮ ಮಕ್ಕಳಿಗೆ ಸ್ಮಾರ್ಟ್‌ಫೋನ್‌ಗಳನ್ನು ನೀಡುತ್ತಿದ್ದು, ಮಕ್ಕಳು ದಿನಕ್ಕೆ ಅಂದಾಜು 6.5 ಗಂಟೆ ಮೊಬೈಲ್‌ನಲ್ಲಿ ಸಮಯ ಕಳೆಯುತ್ತಾರೆ, ಅದರಲ್ಲೂ ಗೇಮಿಂಗ್‌ ಆ್ಯಪ್‌ಗ್ಳನ್ನು ಹೆಚ್ಚು ಬಳಸುತ್ತಾರೆ. ಇದರಲ್ಲಿ ಶೇ.90ರಷ್ಟು ಮಕ್ಕಳು ಸ್ಮಾಟ್‌ಫೋನ್‌ನಿಂದ ದೂರವಿದ್ದರೆ ಭಯವೆನಿಸುತ್ತದೆ ಹಾಗೂ ಶೇ.87ರಷ್ಟು ಮಕ್ಕಳು ಕೀಳರಿಮೆಯ ಭಾವ ನೀಡುತ್ತದೆ ಎಂದು ಹೇಳಿದ್ದಾರೆ. ಶೇ.87ರಷ್ಟು ಮಕ್ಕಳು ಸ್ಮಾರ್ಟ್‌ ಫೋನ್‌ ಬಳಕೆಯ ವೇಳೆ ಪೋಷಕರೊಂದಿಗೆ ಒರಟಾಗಿ ವರ್ತಿಸುವುದನ್ನು ಒಪ್ಪಿಕೊಂಡಿದ್ದಾರೆ.
 ಸಾಮಾಜಿಕ ಜಾಲತಾಣದಲ್ಲಿ ಸ್ನೇಹಿತರಿದ್ದರೂ ಶೇ.90ರಷ್ಟು ಮಂದಿ ಏಕಾಂಗಿತನದ ಭಾವ ಕಾಡುತ್ತಿರುವುದಾಗಿ ಹೇಳಿದ್ದಾರೆ.
 ಶೇ.90ರಷ್ಟು ಜನರು ಅತಿಯಾದ ಮೊಬೈಲ್‌ ಬಳಕೆಯು ಅವರ ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ ಎಂದು ಹೇಳಿಕೊಂಡಿದ್ದಾರೆ.

ಸಮೀಕ್ಷಾ ವರದಿಯ ಮುಖ್ಯಾಂಶಗಳು
 ಸಮೀಕ್ಷೆಯ ಪ್ರಕಾರ ಪೋಷಕರು ದಿನಕ್ಕೆ ಸರಾಸರಿ 7.7ರಷ್ಟು ಗಂಟೆ ಸ್ಮಾರ್ಟ್‌ಫೋನ್‌ನಲ್ಲಿ ಕಾಲ ಕಳೆಯುತ್ತಾರೆ. ಅದರಲ್ಲೂ ಸಾಮಾಜಿಕ ಜಾಲತಾಣವನ್ನು ಹೆಚ್ಚಾಗಿ ಬಳಸುತ್ತಾರೆ.
 ಶೇ.70ರಷ್ಟು ಪೋಷಕರು ಇದನ್ನು ಮಾಹಿತಿ ತಾಣ ಹಾಗೂ ಸಾಮಾಜಿಕ ಬಾಂಧವ್ಯದ ಸಂಕೇತವಾಗಿ ನೋಡಿದರೆ, ಶೇ.60ರಷ್ಟು ಮಕ್ಕಳು ಮಾಹಿತಿಗಾಗಿ ಹಾಗೂ ಪ್ರೀತಿಪಾತ್ರರ ಜತೆ ಸಂಪರ್ಕದಲ್ಲಿರಲು ಸಹಕಾರಿ ಎಂದು ಹೇಳಿದ್ದಾರೆ.
 ಸ್ಮಾರ್ಟ್‌ಫೋನ್‌ಗಳಲ್ಲೇ ಅತೀ ಹೆಚ್ಚು ಸಮಯ ವ್ಯಯಿಸುವುದರಿಂದ ಮಕ್ಕಳೊಂದಿಗಿನ ಉತ್ತಮ ಸಂಬಂಧ ಹಾಳಾಗುತ್ತಿದೆ ಎಂದು ಶೇ.93ರಷ್ಟು ಮಂದಿ ಬೇಸರ ವ್ಯಕ್ತಪಡಿಸಿದ್ದಾರೆ.
 ಸ್ಮಾರ್ಟ್‌ಫೋನ್‌ನಲ್ಲಿ ವ್ಯಸ್ತವಾಗಿರುವಾಗ ಮಕ್ಕಳು ಬಂದು ಮಾತನಾಡಿದರೆ ಅಥವಾ ಪ್ರಶ್ನೆ ಕೇಳಿದರೆ ಕಿರಿಕಿರಿಯ ಭಾವನೆಯನ್ನು ಅನುಭವಿಸುತ್ತೇವೆ ಎಂದು ಶೇ.90ರಷ್ಟು ಪೋಷಕರು ಅಭಿಪ್ರಾಯಪಟ್ಟಿದ್ದಾರೆ.
 ಮಕ್ಕಳೊಂದಿಗೆ ಕಳೆಯುವ 2 ಗಂಟೆಯ ಅವಧಿಯಲ್ಲಿಯೂ ಶೇ.75ರಷ್ಟು ಪೋಷಕರು ಮೊಬೈಲ್‌ ಅನ್ನು ನೋಡುತ್ತಾರೆ ಎಂದು ವರದಿಯಲ್ಲಿ ಬೆಟ್ಟು ಮಾಡಲಾಗಿದೆ.

ಸೋಶಿಯಲ್‌ ಮೀಡಿಯಾ 2 ವರ್ಷಗಳಲ್ಲಿ ಶೇ.50ರಷ್ಟು ಮಂದಿ ವಿಮುಖ!

 10ರಲ್ಲಿ 7 ಬಳಕೆದಾರರು ಸಾಮಾಜಿಕ ಜಾಲತಾಣದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯು ಋಣಾತ್ಮಕವಾಗಿ ಪರಿಣಾಮ ಬೀರಲಿದೆ. ಜತೆಗೆ ಇದು ಬಳಕೆದಾರರ ಪ್ರಕ್ರಿಯೆಗೂ ಧಕ್ಕೆ ತರಲಿದೆ ಎಂದು ಹೇಳಿದ್ದಾರೆ.
 ಹೂಡಿಕೆಯ ನೆಲೆಯಲ್ಲಿ ಡಿಜಿಟಲ್‌ ಮಾರ್ಕೆಟಿಂಗ್‌ ಕ್ಷೇತ್ರವು ಅಗ್ರಸ್ಥಾನದಲ್ಲಿ ನಿಲ್ಲಲಿದೆ. ಆದರೆ ಬಳಕೆದಾರರು ಸಾಮಾಜಿಕ ಜಾಲತಾಣದ ಬಳಕೆಯಲ್ಲಿ ಮಿತಿಯನ್ನು ಹಾಕಿಕೊಂಡಿದ್ದಾರೆ ಎಂಬುದು ಅಧ್ಯಯನಕಾರರ ಅಭಿಪ್ರಾಯ.
 ಸಾಮಾಜಿಕ ಜಾಲತಾಣದ ಬಳಕೆಯ ಲಕ್ಷಣವು ಆಗಾಗ್ಗೆ ಬದಲಾಗುತ್ತಿರುತ್ತದೆ, ಕಳೆದ ಕೆಲವು ವರ್ಷಗಳನ್ನು ಗಮನಿಸಿದಾಗ ಬಳಕೆದಾರರು ತಮ್ಮ ವೈಯಕ್ತಿಕ ವಿಷಯಗಳನ್ನು ಹಂಚಿಕೊಳ್ಳುವುದು ಕಡಿಮೆ ಮಾಡಿದ್ದಾರೆ ಎಂದು ಹೇಳಿದ್ದಾರೆ.
 ಕೃತಕ ಬುದ್ಧಿಮತ್ತೆ ಆಧಾರಿತ ತಂತ್ರಜ್ಞಾನದ ಮೇಲೆ ನಂಬಿಕೆ ಇಲ್ಲದೇ ಇರುವುದು ಹಾಗೂ ಅದರ ಬಳಕೆಯಲ್ಲಿ ವಿಶ್ವಾಸವಿಲ್ಲದಿರುವುದೇ ಎಐ ಮುಕ್ತ ಬ್ರ್ಯಾಂಡ್‌ಗಳ ಬಳಕೆಯನ್ನು ಕಡಿಮೆಗೊಳಿಸಲಿದೆ ಎಂದು ವರದಿ ಹೇಳಿದೆ.
 2028ರ ವೇಳೆಗೆ ಸಾಮಾಜಿಕ ಜಾಲತಾಣದಲ್ಲಿ ಮಾನವ ಆಧಾರಿತ ಹುಡುಕಾಟವು ಶೇ.50ರಷ್ಟು ಕಡಿಮೆಯಾಗಲಿದೆ. ಹೆಚ್ಚಿನ ಸರ್ಚ್‌ ಎಂಜಿನ್‌ಗಳು ಎಐ ತಂತ್ರಜ್ಞಾನವನ್ನು ಹೊಂದಲಿದೆ. ಬಳಕೆದಾರರು ಈ ಬದಲಾವಣೆಗೆ ಸಿದ್ಧರಾಗಿರಬೇಕು ಎಂದು ಅಧ್ಯಯನಕಾರರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.