ಮಣ್ಣು-ಮನುಷ್ಯ ಅವಿನಾಭಾವ ಸಂಬಂಧ: ಸಿಎಂ
Team Udayavani, Apr 13, 2022, 6:25 AM IST
ಮಣಿಪಾಲ: ತಾಯಿ ಗರ್ಭದಿಂದ ಭೂಗರ್ಭದ ವರೆಗೂ ಮನುಷ್ಯ ಮತ್ತು ಮಣ್ಣಿನ ನಡುವೆ ಅವಿನಾಭಾವ ಸಂಬಂಧವಿದೆ. ಅದನ್ನು ಉಳಿಸಿಕೊಂಡು ಹೋಗುವ ನೈತಿಕ ಜವಾಬ್ದಾರಿ ಪ್ರತಿಯೊಬ್ಬರ ಮೇಲೂ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸದ್ಗುರು ಜಗ್ಗಿ ವಾಸುದೇವ ಅವರ ಇಶಾ ಫೌಂಡೇಶನ್ನಿಂದ ಹಮ್ಮಿಕೊಂಡಿರುವ ಮಣ್ಣು ಉಳಿಸಿ ಅಭಿಯಾನದ ಅಂಗವಾಗಿ ಮಂಗಳವಾರ ಮಣಿಪಾಲದ ಕಾಯಿನ್ ವೃತ್ತದಲ್ಲಿ ನಡೆದ ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸದ್ಗುರು ಅವರು ನಿಸರ್ಗದ ರಕ್ಷಣೆಗೆ ಬಹಳ ದೊಡ್ಡ ಅಭಿಯಾನ ಮಾಡುತ್ತಿದ್ದಾರೆ. ನದಿಗಳ ರಕ್ಷಣೆಗಾಗಿ ಕಾವೇರಿ ಉಳಿಸಿ ಎಂಬ ಬೃಹತ್ ಅಭಿಯಾನ ನಡೆಸಿದ್ದರು. ಈಗ “ಮಣ್ಣು ಉಳಿಸಿ’ ಅಭಿಯಾನ ಕೈಗೆತ್ತಿಕೊಂಡಿದ್ದಾರೆ. ಮಣ್ಣು ಉಳಿದರ ಮಾತ್ರ ಮನುಷ್ಯ ಉಳಿಯಲು ಸಾಧ್ಯ. ಮಣ್ಣಿನ ರಕ್ಷಣೆ ಮಾಡಬೇಕು ಮತ್ತು ಇದು ಎಲ್ಲ ಕರ್ತವ್ಯವೂ ಆಗಿದೆ. ನಮ್ಮ ಜೀವನದ ಅವಿಭಾಜ್ಯ ಅಂಗವಾಗಿರುವ ಮಣ್ಣಿನ ಫಲವತ್ತತೆಯನ್ನು ಕಾಪಾಡಿ ಕೊಳ್ಳಬೇಕು ಎಂದರು.
ಇಂಧನ ಸಚಿವ ವಿ. ಸುನಿಲ್ ಕುಮಾರ್, ಶಾಸಕ ಕೆ. ರಘುಪತಿ ಭಟ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರು ಮಣ್ಣು ಉಳಿಸಿ ಅಭಿಯಾನದ ಪೋಸ್ಟರ್ಗಳನ್ನು ಹಿಡಿದು, ಅಭಿಯಾನಕ್ಕೆ ಬೆಂಬಲ ಸೂಚಿಸಿದರು. ಇಶಾ ಫೌಂಡೇಶನ್ ಸದಸ್ಯರು, ಸ್ವಯಂಸೇವಕರು ಉಪಸ್ಥಿತರಿದ್ದರು.
ಕಾಯಿನ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ಮಾರ್ಗದಲ್ಲಿ ಹಸುರು ಟಿ-ಶರ್ಟ್ ಧರಿಸಿರುವ ಸ್ವಯಂಸೇವಕರು ಸಾಲಾಗಿ ನಿಂತು ಮಣ್ಣು ಉಳಿಸಿ ಅಭಿಯಾನದ ಪೋಸ್ಟರ್ ಪ್ರದರ್ಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್
Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ
Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ
Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್
Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ