ನೈಋತ್ಯ ರೈಲ್ವೆ ವಲಯಕ್ಕೆ ಸೂರ್ಯ ಶಕ್ತಿಯೇ ಸೋಪಾನ!


Team Udayavani, May 9, 2022, 10:02 AM IST

2

ಹುಬ್ಬಳ್ಳಿ: ರೈಲುಗಳು ವಿದ್ಯುತೀಕರಣಕ್ಕೆ ಹೆಚ್ಚು ಆದ್ಯತೆ ನೀಡುವ ಜೊತೆಗೆ ಅಗತ್ಯ ಸ್ಥಳಗಳಲ್ಲಿ ವಿದ್ಯುತ್‌ ಬದಲಾಗಿ ಸೌರಶಕ್ತಿ ಬಳಕೆಗೆ ನೈಋತ್ಯ ರೈಲ್ವೆ ಮುಂದಾಗಿದೆ. ಗರಿಷ್ಠ ಪ್ರಮಾಣದಲ್ಲಿ ಸೌರಶಕ್ತಿ ಬಳಸಿಕೊಳ್ಳಲು ಯೋಜನೆ ರೂಪಿಸಿದ್ದು, ವಲಯದಾದ್ಯಂತ ನಿಲ್ದಾಣಗಳು, ಸೇವಾ ಕಟ್ಟಡಗಳು, ಲೆವಲ್‌ ಕ್ರಾಸಿಂಗ್‌ ಗೇಟ್‌ ಗಳು ಮತ್ತಿತರ ಕಡೆಗಳಲ್ಲಿ ಸೌರಫಲಕಗಳನ್ನು ಅಳವಡಿಸುತ್ತಿದೆ. ವಿದ್ಯುತ್‌ ಮೇಲಿನ ಅವಲಂಬನೆ ಕಡಿಮೆಗೊಳಿಸಿ, ಉಳಿತಾಯಕ್ಕೆ ಮುಂದಾಗಿದೆ.

ಕಳೆದ ಆರ್ಥಿಕ ವರ್ಷದಲ್ಲಿ ಸೌರಶಕ್ತಿಯ ಮೂಲಕ ಒಟ್ಟಾರೆ 46.11 ಲಕ್ಷ ಯುನಿಟ್‌ ವಿದ್ಯುತ್‌ ಉತ್ಪಾದನೆಯಾಗಿದ್ದು, ವಿದ್ಯುತ್‌ ಬಿಲ್‌ನಲ್ಲಿ 1.96 ಕೋಟಿ ರೂ. ಉಳಿತಾಯವಾಗಿದೆ. 2021-22ನೇ ಆರ್ಥಿಕ ವರ್ಷದಲ್ಲಿ ಹುಬ್ಬಳ್ಳಿ ನಿಲ್ದಾಣದ ಒಟ್ಟಾರೆ ವಿದ್ಯುತ್‌ ಅಗತ್ಯತೆಯ ಸುಮಾರು ಶೇ.70 ಸೌರಶಕ್ತಿಯಿಂದಲೇ ಪೂರೈಕೆಯಾಗಿದೆ. ಹುಬ್ಬಳ್ಳಿ ವರ್ಕ್‌ ಶಾಪ್‌ನ ಶೇ. 83 ವಿದ್ಯುತ್‌ ಅಗತ್ಯವನ್ನು (ಒಟ್ಟು ವಿದ್ಯುತ್‌ ಅಗತ್ಯ 13.51 ಲಕ್ಷ ಯುನಿಟ್‌) ಸೌರಶಕ್ತಿಯ ಮೂಲಕ ಪೂರೈಸಲಾಗಿದೆ. ಹುಬ್ಬಳ್ಳಿ ಇಎಂಡಿ ಶೆಡ್‌ ನ ವಾರ್ಷಿಕ 1.13 ಲಕ್ಷ ಯುನಿಟ್‌ಗಳ ವಿದ್ಯುತ್‌ ಬಳಕೆಯ ಪೈಕಿ ಶೇ. 60 ವಿದ್ಯುತ್ತನ್ನು ಸೌರಶಕ್ತಿ ಮೂಲಕ ಪಡೆದುಕೊಳ್ಳಲಾಗಿದೆ.

ಪ್ರಸಕ್ತ ಆರ್ಥಿಕ ವರ್ಷದಲ್ಲಿ ವಲಯ ವ್ಯಾಪ್ತಿಯ ಇನ್ನೂ 26 ನಿಲ್ದಾಣಗಳಲ್ಲಿ ಸೌರಫಲಕಗಳನ್ನು ಅಳವಡಿಸುವ ಯೋಜನೆ ಹೊಂದಲಾಗಿದೆ. ವಲಯವು ಪರಿಸರಸ್ನೇಹಿ ಸೌರಶಕ್ತಿ ಬಳಸಿಕೊಳ್ಳುತ್ತಿದ್ದು, 2030 ರೊಳಗೆ ನಿವ್ವಳ ಶೂನ್ಯ ಇಂಗಾಲ ಹೊರಸೂಸುವ ರೈಲ್ವೆಯಾಗಿ ಹೊರಹೊಮ್ಮುವ ರೈಲ್ವೆಯ ಗುರಿಗೆ ಇದು ಸಹಕಾರಿಯಾಗಲಿದೆ. –ಸಂಜೀವ ಕಿಶೋರ, ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ

ನಿಲ್ದಾಣಗಳ ಉಳಿತಾಯ ಬರೋಬ್ಬರಿ 21.42 ಲಕ್ಷ !

2021-22ನೇ ಆರ್ಥಿಕ ವರ್ಷದಲ್ಲಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಸೌರಫಲಕಗಳಿಂದ 3.38 ಲಕ್ಷ ಯುನಿಟ್‌ ವಿದ್ಯುತ್‌ ಉತ್ಪಾದನೆಯಾಗಿದೆ. ಯಶವಂತಪುರ ರೈಲು ನಿಲ್ದಾಣದ 80 ಕೆಡಬ್ಲ್ಯುಪಿ ಸೌರ ಫಲಕಗಳಿಂದ 0.95 ಲಕ್ಷ ಯುನಿಟ್‌, ಮೈಸೂರು ರೈಲ್ವೆ ನಿಲ್ದಾಣದ 110 ಕೆಡಬ್ಲ್ಯುಪಿ ಸೌರಫಲಕಗಳಿಂದ 1.42 ಲಕ್ಷ ಯುನಿಟ್‌ ವಿದ್ಯುತ್‌ ಉತ್ಪಾದನೆಯಾಗಿದೆ. ಈ ಎಲ್ಲ ನಿಲ್ದಾಣಗಳಿಂದ ಒಟ್ಟಾರೆ 21.42 ಲಕ್ಷ ರೂ. ಉಳಿತಾಯವಾಗಿದೆ.

ಯಾರ್ಯಾರ ನೇತೃತ್ವ? ಪ್ರಧಾನ ಮುಖ್ಯ ವಿದ್ಯುತ್‌ ಎಂಜಿನಿಯರ್‌ ಜೈಪಾಲ ಸಿಂಗ್‌ ನೇತೃತ್ವದಲ್ಲಿ ಹುಬ್ಬಳ್ಳಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅರವಿಂದ ಮಾಲಖೇಡೆ, ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶ್ಯಾಮ್‌ ಸಿಂಗ್‌ ಮತ್ತು ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ರಾಹುಲ್‌ ಅಗರ್ವಾಲರ ಮಾರ್ಗದರ್ಶನದಲ್ಲಿ ಮೂರು ರೈಲ್ವೆ ವಿಭಾಗಗಳಲ್ಲಿ ಸೌರಶಕ್ತಿ ಬಳಕೆಯ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗುತ್ತಿದೆ.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.