ಗ್ರಾ.ಪಂ.ಗಳಿಗೆ ಸೋಲಾರ್ ವ್ಯವಸ್ಥೆ; ಈಶ್ವರಪ್ಪ
Team Udayavani, Mar 13, 2020, 11:17 PM IST
ಬೆಂಗಳೂರು: ಕೆಲವೇ ದಿನಗಳಲ್ಲಿ ರಾಜ್ಯದ ಎಲ್ಲ ಗ್ರಾಮ ಪಂಚಾಯತ್ಗಳಿಗೆ ಸೋಲಾರ್ ವ್ಯವಸ್ಥೆ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಮೇಲ್ಮನೆಯಲ್ಲಿ ಶುಕ್ರವಾರ ಎಸ್. ರವಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಗ್ರಾ.ಪಂ.ಗಳಲ್ಲಿ ವಿದ್ಯುತ್ ಸಮಸ್ಯೆಯಿಂದ ಸಾಕಷ್ಟು ಕೆಲಸಗಳು ಬಾಕಿ ಉಳಿಯುತ್ತಿವೆ. ಈ ಹಿನ್ನೆಲೆಯಲ್ಲಿ ಸೌರವಿದ್ಯುತ್ ವ್ಯವಸ್ಥೆ ಕಲ್ಪಿಸಲು ಉದ್ದೇಶಿಸಲಾಗಿದೆ. ಈ ಸಂಬಂಧ ಈಗಾಗಲೇ ಅನುಭವಿ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಟೆಂಡರ್ ಕರೆಯುವ ಮೂಲಕ ಅಥವಾ ನೇರವಾಗಿ ಆಯಾ ಸಂಸ್ಥೆಗಳಿಗೆ ಜವಾಬ್ದಾರಿ ವಹಿಸಲಾಗುವುದು ಎಂದರು.
ಗ್ರಾ.ಪಂ.ಗಳಲ್ಲಿ ಈಗಾಗಲೇ ಇರುವ ಕಂಪ್ಯೂಟರ್ ಆಪರೇಟರ್ಗಳಿಂದ ಎಲ್ಲ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಸದನದ ಗಮನಕ್ಕೆ ತಂದ ಸಚಿವರು, ಸದ್ಯ ಕಂಪ್ಯೂಟರ್ ಆಪರೇಟರ್ಗಳ ನೇಮಕಾತಿಯಲ್ಲಿ ಮೀಸಲಾತಿ ಸಂಬಂಧ ತೆಗೆದುಕೊಳ್ಳಬೇಕಾದ ಕ್ರಮದ ಬಗ್ಗೆ ಚರ್ಚೆ ನಡೆಯುತ್ತಿದೆ. ಬಳಿಕ ನೇಮಕ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ವಿವರಿಸಿದರು.
ರಾಜ್ಯದ ಒಂದು ಸಾವಿರಕ್ಕೂ ಅಧಿಕ ಗ್ರಾ.ಪಂ.ಗಳಲ್ಲಿ ಇಂಟರ್ನೆಟ್ ಸೌಲಭ್ಯ ಸಮರ್ಪಕವಾಗಿಲ್ಲ. ಪರ್ಯಾಯ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಏರ್ಟೆಲ್ ಅಥವಾ ಜಿಯೋ ಸಂಸ್ಥೆಗಳಿಂದ ಡಾಟಾ ಪಡೆಯಲು ಚಿಂತನೆ ನಡೆದಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್