ಟ್ರಾಫಿಕ್ ಸಮಸ್ಯೆಗೆ ಪರಿಹಾರ ಮರೀಚಿಕೆ

ನವಲಗುಂದ ಪಟ್ಟಣದಲ್ಲಿ ಹಾದುಹೋದ ಎರಡೂ ರಾಷ್ಟ್ರೀಯ ಹೆದ್ದಾರಿಯಲ್ಲಿ ತಪ್ಪದ ಸಂಚಾರ ತಾಪತ್ರಯ

Team Udayavani, Apr 25, 2022, 10:32 AM IST

6

ನವಲಗುಂದ: ಹುಬ್ಬಳ್ಳಿಯಿಂದ ಪಟ್ಟಣದ ಮಾರ್ಗವಾಗಿ ನರಗುಂದ, ಬಾಗಲಕೋಟೆ, ವಿಜಯಪುರ, ಸೊಲ್ಲಾಪುರ ಕಡೆ ಪ್ರಯಾಣಿಸುವವರು ಟ್ರಾಫಿಕ್ ಸಮಸ್ಯೆಯಿಂದ ಬೇಸತ್ತು ಹೋಗಿದ್ದಾರೆ. ಪಟ್ಟಣದಲ್ಲಿ ಹಲವು ವರ್ಷಗಳ ಹಿಂದೆಯೇ ಹುಬ್ಬಳ್ಳಿ-ಸೊಲ್ಲಾಪುರ ಹಾಗೂ ಗೋವಾ-ಹೈದರಾಬಾದ್‌ ರಾಷ್ಟ್ರೀಯ ಹೆದ್ದಾರಿ ಯಾಗಿದ್ದು, ದಿನನಿತ್ಯ ಸಾವಿರಾರು ವಾಹನಗಳ ಸಂಚಾರ ಇದೆ. ಇದರಿಂದ ವಾಹನ ದಟ್ಟಣೆ ಉಂಟಾಗುತ್ತಿದ್ದು, ಸಂಚಾರ ತಾಪತ್ರಯ ಉಂಟಾಗುತ್ತಿದೆ.

ಹುಬ್ಬಳ್ಳಿ ರಸ್ತೆಯಿಂದ ನರಗುಂದ ಮಾರ್ಗದುದ್ದಕ್ಕೂ ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ಇದೆ ಎಂಬುದೇ ತಿಳಿಯದಂತೆ ಅತೀ ಇಕ್ಕಟ್ಟಾದ ರಸ್ತೆ ಇದೆ. ರಾಜ್ಯದ ಎಲ್ಲ ರಾಷ್ಟ್ರೀಯ ಹೆದ್ದಾರಿಗಳು ಅಭಿವೃದ್ಧಿಯಾದರೂ ಹುಬ್ಬಳ್ಳಿ-ಸೊಲ್ಲಾಪುರ ಹಾಗೂ ಗೋವಾ-ಹೈದರಾಬಾದ್‌ ರಸ್ತೆಗೆ ಇನ್ನೂ ಮುಹೂರ್ತ ಕೂಡಿಬಂದಿಲ್ಲ. ಇದರಿಂದ ರಾಜ್ಯ-ಕೇಂದ್ರ ಸರ್ಕಾರಕ್ಕೆ ಜನ ಹಿಡಿಶಾಪ ಹಾಕುವಂತಾಗಿದೆ.

ಜಿಲ್ಲೆಯವರೇ ಕೇಂದ್ರ-ರಾಜ್ಯ ಮಂತ್ರಿಗಳಾಗಿದ್ದರೂ ನವಲಗುಂದ ಪಟ್ಟಣದಲ್ಲಿ ಹಾದುಹೋದ ಹುಬ್ಬಳ್ಳಿ-ಸೊಲ್ಲಾಪುರ, ಗೋವಾ-ಹೈದರಾಬಾದ್‌ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಣದೇ ಇರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಪಟ್ಟಣದಲ್ಲಿ ಹೆದ್ದಾರಿ ಅಗಲೀಕರಣ ಮಾಡುತ್ತಾರೆಯೋ ಅಥವಾ ಬೈಪಾಸ್‌ ಮಾಡುತ್ತಾರೋ ಎಂಬ ಗೊಂದಲದಲ್ಲಿಯೇ ಜನರು ನಿತ್ಯ ಗಂಟೆಗಟ್ಟಲೇ ಟ್ರಾಫಿಕ್ ಸಮಸ್ಯೆ ಎದುರಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು, ಶಾಸಕರು ಸಹ ಟ್ರಾಫಿಕ್ ಸಮಸ್ಯೆಯ ಅನುಭವ ಪಡೆದಿದ್ದಾರೆ. ಆದರೂ ಸಹ ರಾಷ್ಟ್ರೀಯ ಹೆದ್ದಾರಿಗೆ ಮಾತ್ರ ಶಾಶ್ವತ ಪರಿಹಾರ ಸಿಗುತ್ತಿಲ್ಲ. ಸರಕಾರ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ತೊರುತ್ತಿರುವ ಕಾಳಜಿ ಈ ಭಾಗದ ರಾಷ್ಟ್ರೀಯ ಹೆದ್ದಾರಿ ರಸ್ತೆಗಳಿಗೂ ನೀಡಬೇಕಾಗಿದೆ.

ತಾಲೂಕಿನ ಜನತೆ ಜಿಲ್ಲಾ ಕೇಂದ್ರ ಧಾರವಾಡಕ್ಕೆ ತೆರಳಬೇಕೆಂದರೆ ಈ ರಸ್ತೆ ತೀರಾ ಹದಗೆಟ್ಟಿದೆ. ಹೆಚ್ಚು ಹಣ ವ್ಯಯಿಸಿ ಹುಬ್ಬಳ್ಳಿ ಮಾರ್ಗವಾಗಿಯೇ ತೆರಳಬೇಕಿದೆ. ಇನ್ನು ಹುಬ್ಬಳ್ಳಿಯಿಂದಲೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಪೂರ್ಣ ಇದ್ದರೂ ಕಾಲವಾಡ ಹತ್ತಿರ ಟೋಲ್‌ ನಾಕಾ ಸುಂಕ ವಸೂಲಿಗೆ ತಯಾರಾಗಿ ನಿಂತಿದೆ.

ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಬಹಳವಾಗಿದ್ದು, ರಸ್ತೆ ದಾಟಿ ಹೋಗುವುದು ದುಸ್ತರವಾಗಿದೆ. ರಾಷ್ಟ್ರೀಯ ಹೆದ್ದಾರಿಯಾಗಿದ್ದರಿಂದ ಹುಬ್ಬಳ್ಳಿ-ಸೊಲ್ಲಾಪುರ ರಸ್ತೆ ಅಗಲೀಕರಣ ಅಥವಾ ಬೈಪಾಸ್‌ ಮಾಡಿ ಸಂಚಾರ ಸುಗಮವಾಗುವಂತೆ ನೋಡಿಕೊಳ್ಳಬೇಕಾಗಿದೆ. ಧಾರವಾಡ ರಸ್ತೆಯೂ ಬಹಳ ಹದಗೆಟ್ಟಿರುವುದರಿಂದ ಸಂಬಂಧ ಪಟ್ಟ ಅಧಿ ಕಾರಿಗಳು, ಜನಪ್ರತಿನಿಧಿಗಳು ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ. –ಗಿರಿಯಪ್ಪ ಗಾಣಿಗೇರ, ತುಪ್ಪದಕುರಹಟ್ಟಿ ಗ್ರಾಮದ ರೈತ

ರಾಷ್ಟ್ರೀಯ ಹೆದ್ದಾರಿ ಸಮಸ್ಯೆ ಆಗಬಾರದೆಂದು 1985-86ರಲ್ಲಿ ಪಿಒಟಿ (ಪಿಟ್‌ ಆಪರೇಟಿಂಗ್‌ ಟ್ರಾನ್ಸ್‌ಪೋರ್ಟ್) ಕಾಮಗಾರಿ ಮೂಲಕ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ ಆಗಬೇಕೆಂಬುದನ್ನು ಸರಕಾರಕ್ಕೆ ಮನವಿ ಮೂಲಕ ಒತ್ತಾಯಿಸಿದ್ದೆವು. ಆದರೂ ಇಲ್ಲಿಯವರೆಗೂ ಆಗದೇ ಇರುವುದು ವಿಪರ್ಯಾಸವಾಗಿದೆ.ಆನಂದ ಹೊಸಗೌಡರ, ಹೋರಾಟಗಾರ

ರಾಷ್ಟ್ರೀಯ ಹೆದ್ದಾರಿಯಲ್ಲಿ 50 ಅಡಿಗಿಂತ ದೊಡ್ಡ ಮಶಿನರಿಗಳು ವಾಹನದಲ್ಲಿ ಹೋಗುತ್ತವೆ. ರಾಜ್ಯ-ಹೊರರಾಜ್ಯದಿಂದ ವಾಹನಗಳ ಸಂಚಾರ ಅತೀ ಹೆಚ್ಚಾಗಿದೆ. 1990ರಲ್ಲಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ಗಾಗಿ ಹೋರಾಟ ನಡೆಸಿ ಸರಕಾರದ ಗಮನಕ್ಕೆ ತಂದರೂ ಏಕೆ ನನೆಗುದಿಗೆ ಬಿದ್ದಿದೆ ಗೊತ್ತಾಗುತ್ತಿಲ್ಲ. ಈಗ ನಿತ್ಯ ಟ್ರಾಫಿಕ್ ನಿಂದ ಸಾರ್ವಜನಿಕರು, ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಅಶೋಕ ಮಜ್ಜಿಗುಡ್ಡ            

-ಪುಂಡಲೀಕ ಮುಧೋಳೆ

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.