ಟ್ಯಾಂಕರ್ನಲ್ಲಿ ನೀರು ಪೂರೈಕೆ ಸಮಸ್ಯೆ ನಿವಾರಣೆ: ಕಾರಜೋಳ
Team Udayavani, Sep 29, 2022, 9:20 PM IST
ಬೆಂಗಳೂರು: ವ್ಯಾಪಕ ಮಳೆ ಮತ್ತು ಜಲಾಶಯಗಳಿಂದ ಕೆರೆಗಳಿಗೆ ನೀರು ತುಂಬಿಸಿದ ಹಿನ್ನೆಲೆಯಲ್ಲಿ ರಾಜ್ಯದ ಯಾವುದೇ ಭಾಗದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುವ ಪರಿಸ್ಥಿತಿ ಎದುರಾಗಿಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮಳೆಯಿಂದಾಗಿ ಶುದ್ಧ ಕುಡಿಯುವ ನೀರು ಲಭ್ಯವಾಗುತ್ತಿರುವುದರಿಂದ ರಾಜ್ಯದ ಕೆಲವೆಡೆ ಇದ್ದ ಫ್ಲೊರೈಡ್ ಸಮಸ್ಯೆಯೂ ನಿವಾರಣೆಯಾಗಿ ಆ ಭಾಗಗಳು ಫ್ಲೊರೈಡ್ ಮುಕ್ತವಾಗಿವೆ ಎಂದು ಹೇಳಿದರು.
ಕಳೆದ ಮೂರು ವರ್ಷಗಳಿಂದ ಬಿದ್ದ ವ್ಯಾಪಕ ಮಳೆಯಿಂದಾಗಿ ಜಲಾಶಯ ಮತ್ತು ಕೆರೆಗಳು ಭರ್ತಿಯಾಗಿದೆ. ಇದರಿಂದಾಗಿ ಅಂತರ್ಜಲ ಮಟ್ಟ ಶೇ. 48 ರಿಂದ 50 ಹೆಚ್ಚಿದೆ. ನದಿ ಪಾತ್ರದಿಂದ ಎಲ್ಲ 17 ಸಾವಿರ ಕೆರೆಗಳನ್ನು ಭರ್ತಿ ಮಾಡುವ ಕೆಲಸ ಆರಂಭವಾಗಿದೆ ಎಂದು ತಿಳಿಸಿದರು.
ಸಣ್ಣ ನೀರಾವರಿ ಇಲಾಖೆ ಹೊರತುಪಡಿಸಿ ಬೃಹತ್ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ ಈ ಪ್ರಮಾಣದ ಕೆರೆಗಳಿದ್ದು, ಈ ಪೈಕಿ 1298 ಕೆರೆಗಳು ಭರ್ತಿಯಾಗಿವೆ. 3204 ಕೆರೆಗಳನ್ನು ಭರ್ತಿ ಮಾಡುವ ಕೆಲಸ ನಡೆಯುತ್ತಿದೆ. ಇದಕ್ಕಾಗಿ 11 ಸಾವಿರ ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದ್ದು ಮುಂದಿನ ದಿನಗಳಲ್ಲಿ ಕೆರೆಗಳನ್ನು ಭರ್ತಿ ಮಾಡಲು ಆದ್ಯತೆ ನೀಡಲಾಗುತ್ತಿದೆ ಎಂದರು.
ರಾಜ್ಯದ ವಿವಿಧ ಜಲಾನಯನ ಪಾತ್ರದಲ್ಲಿ 12 ಲಕ್ಷ ಹೆಕ್ಟೇರ್ ನಷ್ಟು ಭೂಮಿಗೆ ನೀರು ಹರಿಸಬೇಕಾಗಿದೆ. ಮುಂದಿನ ಹತ್ತು ವರ್ಷಗಳಲ್ಲಿ ಸಂಪೂರ್ಣವಾಗಿ ನೀರಾವರಿ ಸೌಲಭ್ಯ ಒದಗಿಸುವ ಕೆಲಸವಾಗಲಿದೆ. ಇತ್ತೀಚೆಗೆ ಬಿದ್ದ ಮಳೆಯಿಂದ ಹಾನಿಗೀಡಾದ ಕೆರೆಗಳ ದುರಸ್ತಿಗೆ ಕಾವೇರಿ ನೀರಾವರಿ ನಿಗಮದ ಮೂಲಕ 50 ಕೋಟಿ ರೂ. ನೀಡಲಾಗಿದೆ ಎಂದು ತಿಳಿಸಿದರು.
ಕಾವೇರಿ ನದಿ ಪಾತ್ರದಿಂದ ಈ ಬಾರಿ 273 ಟಿಎಂಸಿ ನೀರು ಸಮುದ್ರಕ್ಕೆ ಹರಿದು ಹೋಗಿದೆ. ನ್ಯಾಯಾಧಿಕರಣದ ತೀರ್ಪಿನ ಪ್ರಕಾರ ನಾವು ತಮಿಳುನಾಡಿಗೆ 177 ಟಿಎಂಸಿ ನೀರು ಹರಿಸಬೇಕಿತ್ತು. ಆದರೆ ಕಳೆದ ಜೂನ್ ಒಂದರಿಂದ ನಿನ್ನೆಯವರೆಗೆ 450.53 ಟಿಎಂಸಿಯಷ್ಟು ನೀರು ಹರಿದು ಹೋಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ