ಬೊಮ್ಮಾಯಿ ಸರ್ಕಾರ ಜನಪರ ಆಡಳಿತ ನಡೆಸುತ್ತಿದೆ : ಶಾಸಕ ಸೋಮಲಿಂಗಪ್ಪ
Team Udayavani, Sep 18, 2021, 1:21 PM IST
ಕುರುಗೋಡು : ಬಸವರಾಜ ಬೊಮ್ಮಾಯಿ ಸರಕಾರ ಜನಪರ ಆಡಳಿತ ನಡೆಸುತ್ತಿದ್ದೂ, ಕೆಲವೇ ತಿಂಗಳಲ್ಲಿ ರಾಜ್ಯದ ಜನತೆಯಿಂದ ಉತ್ತಮ ಪ್ರತಿಕ್ರಿಯೆ ಕಂಡು ಬರುತ್ತಿದೆ ಎಂದು ಶಾಸಕ ಎಂ. ಎಸ್. ಸೋಮಲಿಂಗಪ್ಪ ಹೇಳಿದರು.
ಸಮೀಪದ ಗುಂಡಿಗನೂರು ಗ್ರಾಮದಿಂದ ಎಚ್. ವಿರಾಪುರ ಗ್ರಾಮದ ವರೆಗೆ 2020-21 ಸಾಲಿನ ರಸ್ತೆ ಅಭಿವೃದ್ಧಿ ಕಾಮಗಾರಿ ಯೋಜನೆ ಅಡಿಯಲ್ಲಿ ಮಂಜೂರಾದ ಡಾಂಬರೀಕರಣ ರಸ್ತೆಗೆ ಭೂಮಿ ಪೂಜೆ ನೇರೆವೆರೆಸಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರಕಾರ ಜನರ ಹಿತದೃಷ್ಟಿಯಿಂದ ಜನಪರ ಆಡಳಿತ ನಡೆಸುತ್ತಿದೆ ಆದ್ದರಿಂದ ಮತ್ತೊಮ್ಮೆ ಕೇಂದ್ರ ಮತ್ತು ರಾಜ್ಯ ದಲ್ಲಿ ಬಿಜೆಪಿ ಸರಕಾರ ಆಡಳಿತಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಲ್ಲದೆ ತಾಪಂ ಮತ್ತು ಜಿಪಂ ಚುನಾವಣೆಯಲ್ಲಿ 6 ಜಿಪಂ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಶೀಲರಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಎಲ್ಲ ಕಡೆ ಕಾರ್ಯಕರ್ತರು ರಕ್ತದಾನ ಶಿಬಿರ ಮತ್ತು ಲಸಿಕಾ ಅಭಿಯಾನ ಮೇಳದ ಬದಲು ಎಲ್ಲ ಕಡೆ ಗಿಡ ಸಸಿಗಳನ್ನು ನೆಟ್ಟಿದ್ದಾರೆ ಪರಿಸರ ಕಾಪಾಡುವುದರ ಜೊತೆಗೆ ಜನರ ಉತ್ತಮ ಆರೋಗ್ಯ ಕೂಡ ಕಾಪಾಡಬಹುದಿತ್ತು ಎಂದು ಅಭಿಪ್ರಾಯ ಹೊರ ಹಾಕಿದರು.
ಇದನ್ನೂ ಓದಿ :ಧರ್ಮ ಮನೆಯಲ್ಲಿ ಆಚರಣೆಯಾಗಬೇಕು, ಅದನ್ನು ರಾಜಕಾರಣಕ್ಕೆ ತರಬಾರದು: ಧ್ರುವನಾರಾಯಣ್
ನಂತರ ಸ್ಥಳದಲ್ಲಿ ಗುಂಡಿಗನೂರು ಮತ್ತು ಎಚ್. ವಿರಾಪುರ ರಸ್ತೆ ಬಹಳ ದಿನಗಳಿಂದ ಹದೆಗೆಟ್ಟಿದ್ದು, ಸಾರ್ವಜನಿಕ ರಿಗೆ ತುಂಬಾ ತೊಂದರೆ ಆಗುತಿತ್ತು, ಆದ್ದರಿಂದ ಕೂಡಲೇ ಗುತ್ತಿಗೆದಾರರು ಗುಣ ಮಟ್ಟದ ಕಾಮಗಾರಿ ನಡೆಸಬೇಕು, ಅವಧಿ ಒಳಗಡೆ ಮುಗಿಸಿ ಜನರಿಗೆ ಅನುಕೂಲ ಪಡಿಸಬೇಕು ಎಂದು ತಿಳಿಸಿದರು. ಇದೆ ಸಂದರ್ಭದಲ್ಲಿ ಗುಂಡಿಗನೂರು ಸೇರಿದಂತೆ ಸುತ್ತ ಮುತ್ತ ಗ್ರಾಮದ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಇಲ್ಲದ ಕಾರಣ ದೂರವಾಣಿ ಮೂಲಕ ಶಾಸಕರು ಬಸ್ ಘಟಕದ ವ್ಯವಸ್ಥಾಪಕರಿಗೆ ಕರೆ ಮಾಡಿ ಸರಿಯಾದ ಸಮಯಕ್ಕೆ ಬಸ್ ಬಿಡುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಅಡಿವೆಯ್ಯ ಸ್ವಾಮಿ, ಬಕ್ಕಾಟೆ ಈರಯ್ಯ, ಉತ್ತನೂರು ರಂಗಪ್ಪ, ಆಗಲೂರು ಮಲ್ಲನಗೌಡ, ಪ್ರಕಾಶ್ ಗೌಡ, ಗುಂಡಿಗನೂರು ಪಂಪನಗೌಡ, ಸುರಿಬಾಬು, ಹುಲುಗಪ್ಪ, ಕೋಮಾರಿ, ಗುತ್ತಿದಾರ ಬಸವರಾಜ್ ಸೇರಿದಂತೆ ಗ್ರಾಮದ ಮುಖಂಡರು ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ