ಕಾಂಗರೂಗಳಿಗೆ ಶಾಕ್ ನೀಡಿದ ಹರಿಣಗಳು

ತಾಹೀರ್, ಡ್ಯುಮಿನಿಗೆ ಗೆಲುವಿನ ವಿದಾಯ ಹೇಳಿದ ದ.ಆಫ್ರಿಕಾ

Team Udayavani, Jul 7, 2019, 9:37 AM IST

tahir-d

ಮ್ಯಾಂಚೆಸ್ಟರ್: ವಿಶ್ವಕಪ್ ಕೂಟದ ಕೊನೆಯಲ್ಲಿ ಮೈಕೊಡವಿ ಮೇಲೆದ್ದ ದಕ್ಷಿಣ ಆಫ್ರಿಕಾ ಅಂತಿಮ ಪಂದ್ಯದಲ್ಲಿ ಬಲಿಷ್ಟ ಆಸೀಸ್ ವಿರುದ್ಧ 10 ರನ್ ಗಳ ಅಂತರದ ಜಯ ದಾಖಲಿಸಿದೆ. ಈ ಗೆಲುವಿನ ಮೂಲಕ ಇಮ್ರಾನ್ ತಾಹೀರ್ ಮತ್ತು ಜೀನ್ ಪಾಲ್ ಡ್ಯುಮಿನಿ ಗೆ ಗೆಲುವಿನ ವಿದಾಯ ಹೇಳಿದೆ.

ಇಲ್ಲಿನ ಓಲ್ಡ್ ಟ್ರಾಫೋರ್ಡ್ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಹರಿಣಗಳ ನಾಯಕ ಫಾಫ್ ಡುಪ್ಲೆಸ್ ಮೊದಲು ಬ್ಯಾಟಿಂಗ್ ನಡೆಸುವ ನಿರ್ಧಾರ ಮಾಡಿದರು. ಅದರಂತೆ ಬ್ಯಾಟಿಂಗ್ ಮಾಡಿದ ಆರಂಭಿಕ ಜೋಡಿ ಆಡೆನ್ ಮಾಕ್ರಮ್ ಮತ್ತು ಕ್ವಿಂಟನ್ ಡಿ ಕಾಕ್ ಸರಣಿಯಲ್ಲಿ ಮೊದಲ ಬಾರಿಗೆ ಉತ್ತಮ ಆರಂಭ ನೀಡಿದರು. ಮೊದಲ ವಿಕೆಟ್ ಗೆ 79 ರನ್ ಈ ಜೋಡಿ ಪೇರಿಸಿತ್ತು. ಡಿಕಾಕ್ ಅರ್ಧಶತಕ ಬಾರಿಸಿ ಮಿಂಚಿದರು. ಮೂರನೇ ವಿಕೆಟ್ ಗೆ ಜೊತೆಗೂಡಿದ ನಾಯಕ ಫಾಫ್ ಮತ್ತು ವ್ಯಾನ್ ಡರ್ ಡ್ಯೂಸೆನ್ ಅದ್ಭುತ ಜೊತೆಯಾಟ ನಡೆಸಿದರು. ಫಾಫ್ ಭರ್ಜರಿ ಶತಕ ಬಾರಿಸಿದರು. 94  ಎಸೆತಗಳಿಂದ 100 ಬಾರಿಸಿದ ಫಾಫ್, ವೇಗಿ ಬೆಹ್ರಾಂಡಫ್ ಗೆ ವಿಕೆಟ್ ನೀಡಿದರು. ಡ್ಯೂಸೆನ್ 95 ರನ್ ಗೆ ಔಟಾಗಿ ಶತಕದಿಂದ ವಂಚಿತರಾದರು. ಅಂತಿಮವಾಗಿ ಆರು ವಿಕೆಟ್ ನಷ್ಟಕ್ಕೆ 325 ರನ್ ಗಳಿಸಿತು.

ಆಫ್ರಿಕಾ ನೀಡಿದ ದೊಡ್ಡ ಮೊತ್ತವನ್ನು ಬೆನ್ನಟ್ಟಿದ ಆಸೀಸ್ ಗೆ ಆರಂಭಿಕ ಆಘಾತ ಎದುರಾಯಿತು. 32 ರನ್ ಗೆ ಎರಡು ವಿಕೆಟ್ ಕಳೆದುಕೊಂಡ ಕಾಂಗರೂಗಳನ್ನು ಮೇಲಕ್ಕೆತ್ತಿದ್ದು ಡೇವಿಡ್ ವಾರ್ನರ್. ವಾರ್ನರ್ 122 ರನ್ ಗಳಿಸಿದರು. ಅಂತಿಮವಾಗಿ ಕೀಪರ್ ಅಲೆಕ್ಸ್ ಕ್ಯಾರಿ 85 ರನ್ ಗಳಿಸಿ ಹೋರಾಟ ನಡೆಸಿದರು. ಆದರೆ ಅಂತಿಮವಾಗಿ ಆಸೀಸ್ 49.5 ಓವರ್ ಗಳಲ್ಲಿ 2015 ರನ್ ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಹರಿಣಗಳಿಗೆ 10 ರನ್ ಗಳಿಂದ ಶರಣಾಯಿತು.

ಶತಕ ಬಾರಿಸಿದ ಫಾಫ್ ಡು ಪ್ಲೆಸಿಸ್ ಪಂದ್ಯಪುರುಷ ಪ್ರಶಸ್ತಿ ಪಡೆದರು. ಈ ಸೋಲಿನಿಂದ ಆಸೀಸ್ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಾರಿತು.

ತಾಹೀರ್, ಡ್ಯುಮಿನಿ ನಿವೃತ್ತಿ: ದಕ್ಷಿಣ ಆಫ್ರಿಕಾದ ಸ್ಪಿನ್ನರ್ ಇಮ್ರಾನ್ ತಾಹೀರ್ ಮತ್ತು ಆಲ್ ರೌಂಡರ್ ಜೀನ್ ಪಾಲ್ ಡ್ಯುಮಿನಿ ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಿಗೆ ವಿದಾಯ ಹೇಳಿದರು. ಇವರಿಬ್ಬರು ಮುಂದೆ ಫ್ರಾಂಚೈಸಿ ಕೂಟಗಳಲ್ಲಿ ಪಾಲ್ಗೊಳ್ಳುವ ಅಭಿಲಾಷೆ ಹೊಂದಿದ್ದಾರೆ. ಆಪ್ರಿಕಾ ಜಯದೊಂದಿಗೆ ಅವರಿಬ್ಬರಿಗೂ ವಿದಾಯ ಹೇಳಿತು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.