ಸ್ಪೀಕರ್‌ ನಡೆ ಸೋಜಿಗ: ಕಾನೂನು ತಜ್ಞರು

ರಾಜೀನಾಮೆ ಕ್ರಮಬದ್ಧವಾಗಿಲ್ಲ ಎಂದರೆ ಹೇಗೆ ಎಂಬ ವಿವರಣೆ ಬೇಕಿತ್ತು

Team Udayavani, Jul 10, 2019, 5:06 AM IST

ramesh-k

ಬೆಂಗಳೂರು: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಕೂಟದ 14 ಮಂದಿ ಅತೃಪ್ತ ಶಾಸಕರು ರಾಜೀನಾಮೆ ಸಲ್ಲಿಸಿದ ವಿಚಾರದಲ್ಲಿ ‘ಸ್ಪೀಕರ್‌ ಅವರ ನಡೆ ಸೋಜಿಗ’ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಶಾಸಕರ ರಾಜೀನಾಮೆಗೆ ಸಂಬಂಧಿಸಿದಂತೆ ಮಂಗಳವಾರ ಸ್ಪೀಕರ್‌ ಅವರು ಆಡಿದ ಮಾತುಗಳು ಹಾಗೂ ನಡೆದುಕೊಂಡ ರೀತಿ ‘ಅನಗತ್ಯ, ಅನಾವಶ್ಯಕ ಮತ್ತು ಅವರ ಅಧಿಕಾರ ಪರಿಧಿಗೆ’ ಮೀರಿದ್ದು ಎಂದು ಮಾಜಿ ಅಡ್ವೋಕೇಟ್ ಜನರಲ್ ಅಶೋಕ್‌ ಹಾರನಹಳ್ಳಿ ವಿಶ್ಲೇಷಿಸಿದ್ದಾರೆ.

ಎಂಟು ಮಂದಿಯ ರಾಜೀನಾಮೆ ಪತ್ರ ಕ್ರಮಬದ್ಧವಾಗಿಲ್ಲ ಎಂದು ಹೇಳಿರುವ ಸ್ಪೀಕರ್‌ ಅವರು, ಯಾವ ರೀತಿ ಮತ್ತು ಹೇಗೆ ಕ್ರಮಬದ್ಧವಾಗಿಲ್ಲ ಎಂದು ಹೇಳಿಲ್ಲ. ಅಲ್ಲದೆ ಕ್ರಮಬದ್ಧವಾಗಿರುವ 5 ಮಂದಿ ಶಾಸಕರಿಗೆ ಒಂದೊಂದು ದಿನ ಪ್ರತ್ಯೇಕವಾಗಿ ವಿಚಾರಣೆಗೆ ಕರೆದಿರುವ ಮರ್ಮವೇನು ಅನ್ನುವುದು ಅರ್ಥವಾಗಿಲ್ಲ. ನಾನು ತುಂಬಾ ಪಾರದರ್ಶಕ, ಶಾಸಕರು ಕೊಟ್ಟಿರುವ ದಾಖಲೆಗಳು ಮತ್ತು ಅದಕ್ಕೆ ಸಂಬಂಧಿಸಿದಂತೆ ಬಂದಿರುವ ಪೂರಕ ದೂರು, ಮನವಿಗಳು ಸಾರ್ವಜನಿಕ ದಾಖಲೆ ಎಂದು ಹೇಳಿರುವ ಸ್ಪೀಕರ್‌ ಅವುಗಳನ್ನು ಬಹಿರಂಗಪಡಿಸಬಹುದಿತ್ತು ಎಂದು ಮತ್ತೂಬ್ಬ ಮಾಜಿ ಅಡ್ವೋಕೇಟ್ ಜನರಲ್ ಬಿ.ವಿ.ಆಚಾರ್ಯ ತಿಳಿಸಿದ್ದಾರೆ.

ಯಾವುದೇ ಒಬ್ಬ ಶಾಸಕ ತನ್ನ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದಾಗ ಕಾನೂನು ಮತ್ತು ಸಂವಿಧಾನ ರೀತಿ ಆ ರಾಜೀನಾಮೆ ಸ್ವಇಚ್ಛೆಯಿಂದ ಕೊಡಲಾಗಿದೆಯೇ ಅಥವಾ ಯಾರದಾದರೂ ಬಲವಂತ, ಒತ್ತಡ ಅಥವಾ ಆಮಿಷ ಇದೆಯೇ, ಇಲ್ಲವೇ ರಾಜೀನಾಮೆ ಪತ್ರ ಖೊಟ್ಟಿಯಾಗಿದೆಯೇ ಎಂದಷ್ಟೇ ಪರಿಶೀಲಿಸಿ ಅದನ್ನು ಅಂಗೀಕರಿಸುವುದು ಸ್ಪೀಕರ್‌ ಕೆಲಸ. ಅದು ಬಿಟ್ಟು, ವಿಚಾರಣೆ ನಡೆಸುವುದು, ಸಾರ್ವಜನಿಕರ ಅಹವಾಲುಗಳನ್ನು ಆಲಿಸುವುದು ಕಾನೂನು ರೀತಿ ಸಮಂಜಸವಲ್ಲ ಅನ್ನುವುದು ಕಾನೂನು ತಜ್ಞರ ವಾದ.

ಮುಂದಿರುವ ಸಾಧ್ಯತೆಗಳು

ಮೇಲ್ನೋಟಕ್ಕೆ ಪಕ್ಷಪಾತಿಯಾಗಿ ಕಂಡು ಬರುತ್ತಿರುವ ಸ್ಪೀಕರ್‌ ಅವರ ನಡೆ ಗಮನಿಸಿ ವಿಪಕ್ಷದವರು ಸ್ಪೀಕರ್‌, ಡೆಪ್ಯೂಟಿ ಸ್ಪೀಕರ್‌ ವಿರುದ್ಧವೇ ಅವಿಶ್ವಾಸ ನಿರ್ಣಯ ಮಂಡಿಸಬಹುದು. ಸರಕಾರ ಅಲ್ಪಮತಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರು ಸಿಎಂಗೆ ಹೇಳಬಹುದು. ನಾಮಪತ್ರಗಳು ಕ್ರಮಬದ್ಧವಲ್ಲದವರು ಸ್ಪೀಕರ್‌ ವಿಚಾರಣೆಗೆ ಬರದೇ ಹೋದರೆ ವಿಪಕ್ಷದವರು ರಾಜ್ಯಪಾಲರಿಗೆ ದೂರು ಕೊಟ್ಟು ಸರಕಾರ ವಜಾಗೊಳಿಸುವಂತೆ ಕೋರಬಹುದು. ಈ ಹಂತದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಿದೆ ಎಂದು ಹೇಳಿ ರಾಜ್ಯಪಾಲರು ಸರಕಾರ ವಜಾಗೊಳಿಸಲು ಕೇಂದ್ರಕ್ಕೆ ಶಿಫಾರಸು ಮಾಡಬಹುದು ಎಂದು ತಿಳಿಸುತ್ತಾರೆ.

ಟಾಪ್ ನ್ಯೂಸ್

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.