Speaker: ಸ್ಪೀಕರ್ ನ್ಯಾಯಾಲಯದ ಆದೇಶ ಮೀರಲಾಗದು: ಸುಪ್ರೀಂ
Team Udayavani, Oct 13, 2023, 9:35 PM IST
ನವದೆಹಲಿ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಸೇರಿದಂತೆ ಶಿವಸೇನೆಯ ಅವರ ಬಣದ ಶಾಸಕರ ಅನರ್ಹತೆ ವಿಚಾರಣೆಗೆ ಸಂಬಂಧಸಿದಂತೆ ಮಹಾರಾಷ್ಟ್ರ ಸ್ಪೀಕರ್ ನ್ಯಾಯಾಲಯದ ಆದೇಶವನ್ನು ಮೀರಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಲ್ಲದೇ ಶಾಸಕರ ಅನರ್ಹತೆ ಪ್ರಕರಣದ ಕುರಿತು ನಿರ್ಧಾರ ವಿಳಂಬಕ್ಕೆ ಅಸಮಾಧಾನ ವ್ಯಕ್ತಪಡಿಸಿದೆ.
ಶಿಂಧೆ ಬಣದ ಶಾಸಕರ ಅನರ್ಹತೆ ಪ್ರಕರಣವನ್ನು ತುರ್ತಾಗಿ ನಿರ್ಧರಿಸುವಂತೆ ಕೋರಿ ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಶಾಸಕ ಸುನೀಲ್ ಪ್ರಭು ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ಸಿಜೆಐ ಡಿ.ವೈ.ಚಂದ್ರಚೂಡ್ ಅವರಿದ್ದ ನ್ಯಾಯಪೀಠ, “ಸುಪ್ರೀಂ ಕೋರ್ಟ್ನ ಆದೇಶವನ್ನು ಮೀರಲಾಗದು ಎಂದು ಯಾರಾದರೂ ಮಹಾರಾಷ್ಟ್ರ ಸ್ಪೀಕರ್ ಅವರಿಗೆ ಸಲಹೆ ನೀಡಿ” ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಹೇಳಿತು. “ಮುಂದಿನ ವಿಧಾನಸಭೆ ಚುನಾವಣೆಗೂ ಮುನ್ನ ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದರೆ, ಇಡೀ ಪ್ರಕ್ರಿಯೆ ನಿರುಪಯುಕ್ತವಾಗಲಿದೆ” ಎಂದು ಅಭಿಪ್ರಾಯಪಟ್ಟಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್