ಚಟುವಟಿಕೆಗಳ ಕೇಂದ್ರವಾದ ಸ್ಪೀಕರ್ ಕಚೇರಿ
Team Udayavani, Jul 12, 2019, 5:19 AM IST
ಬೆಂಗಳೂರು: ರಾಜೀನಾಮೆ ಸಲ್ಲಿಸಿರುವ ಹತ್ತು ಶಾಸಕರಿಗೆ ಸ್ಪೀಕರ್ ಮುಂದೆ ಹಾಜರಾಗಿ ಪುನರ್ ರಾಜೀನಾಮೆ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದ ಹಿನ್ನೆಲೆಯಲ್ಲಿ ಸಭಾಧ್ಯಕ್ಷ ರಮೇಶ್ ಕುಮಾರ್ ಕಚೇರಿ ಗುರುವಾರ ಇಡೀ ದಿನ ರಾಜಕೀಯ ವಿದ್ಯಮಾನಗಳ ಕೇಂದ್ರಬಿಂದುವಾಯಿತು.
ಸ್ಪೀಕರ್ ರಮೇಶ್ ಕುಮಾರ್ ಬೆಳಗ್ಗೆ 11 ಗಂಟೆಗೆ ತಮ್ಮ ಕಚೇರಿಗೆ ಆಗಮಿಸಿದರು. ಗುರುವಾರವೂ ಕೆಲ ಶಾಸಕರು ರಾಜೀನಾಮೆ ಸಲ್ಲಿಸುತ್ತಾರೆಂಬ ವದಂತಿ ಇತ್ತು. ಆದರೆ, ಯಾವ ಶಾಸಕರೂ ರಾಜೀನಾಮೆ ಸಲ್ಲಿಸಲಿಲ್ಲ. ಆದರೆ, ಮಧ್ಯಾಹ್ನ ಸ್ಪೀಕರ್ ಭೋಜನಕ್ಕೆಮನೆಗೆ ತೆರಳಿದ ಸಂದರ್ಭದಲ್ಲಿ ರೋಷನ್ ಬೇಗ್ ಸ್ಪೀಕರ್ ಕಚೇರಿಗೆ ಆಗಮಿಸಿದ್ದರು.
ವಿಡಿಯೋ ಮಾಡಲು ಸೂಚನೆ: ಮಧ್ಯಾಹ್ನ ಕಚೇರಿಗೆ ಆಗಮಿಸಿದ ಸ್ಪೀಕರ್, ಮಧ್ಯಾಹ್ನದ ನಂತರ ತಮ್ಮ ಕಚೇರಿ ವ್ಯಾಪ್ತಿಯಲ್ಲಿ ನಡೆಯುವ ಎಲ್ಲ ವಿದ್ಯಮಾನಗಳನ್ನು ಚಿತ್ರೀಕರಣ ಮಾಡುವಂತೆ ಸೂಚಿಸಿದರು. ಈ ಮಧ್ಯೆ ಜೆಡಿಎಸ್ನ ರಮೇಶ್ ಬಾಬು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಎಚ್.ಕೋನರೆಡ್ಡಿ ರಾಜೀನಾಮೆ ಸಲ್ಲಿಸಿರುವ ಜೆಡಿಎಸ್ನ ಮೂವರು ಶಾಸಕರನ್ನು ಅನರ್ಹಗೊಳಿಸುವಂತೆ ಸ್ಪೀಕರ್ಗೆ ದೂರು ಸಲ್ಲಿಸಿದರು.
ಬಿಜೆಪಿ ಗಲಾಟೆ: ಇದೇ ಸಂದರ್ಭದಲ್ಲಿ ತಮ್ಮನ್ನು ಸ್ಪೀಕರ್ ಕಚೇರಿಗೆ ಬಿಡುವಂತೆ ಬಿಜೆಪಿ ಶಾಸಕರ ನಿಯೋಗ ವಿಧಾನಸೌಧದ ದಕ್ಷಿಣ ದ್ವಾರದ ಮೂಲಕ ಆಗಮಿಸಿ ಮನವಿ ಮಾಡಿದರು. ಆದರೆ,ಪೋಲಿಸರು ಅವರನ್ನು ಸ್ಪೀಕರ್ ಕಚೇರಿಗೆ ಬಿಡಲು ನಿರಾಕರಿಸಿದರು.
ಇದರಿಂದಾಗಿ ಬಸವರಾಜ ಬೊಮ್ಮಾಯಿ, ಪಿ.ರಾಜೀವ್, ಸುನಿಲ್ ಕುಮಾರ್,ಉಮೇಶ್ ಕತ್ತಿ, ರವಿಕುಮಾರ್ ಪೊಲಿಸರೊಂದಿಗೆ ವಾಗ್ವಾದ ನಡೆಸಿದರು.
ನಾವು ವಿಧಾನಸಭಾ ಕಾರ್ಯದರ್ಶಿ ಕಚೇರಿಗೆ ಆಗಮಿಸಿದ್ದೇವೆ ಎಂದು ವಾದ ಮಾಡಿದರೂ ಪೊಲಿಸರು ಒಳಗೆ ಬಿಡಲು ನಿರಾಕರಿಸಿದರು. ಈ ಸಂದರ್ಭದಲ್ಲಿ ಪೋಲೀಸರ ವಿರುದ್ಧ ಮಾಜಿ ಸಚಿವ ಸೋಮಣ್ಣ ವಾಗಾœಳಿ ನಡೆಸಿದರು. ವಿಧಾನಸೌಧ ಈಗ ಸ್ಪೀಕರ್ ವ್ಯಾಪ್ತಿಗೆ ಬರುವುದಿಲ್ಲ. ಶಾಸಕರಿಗೆ ರಕ್ಷಣೆ ನೀಡುವುದು ಪೋಲೀಸರ ಕೆಲಸ. ಸ್ಪೀಕರ್ ಅವರ ಕೂಪ ಮಂಡೂಕದ ಅಧಿಕಾರ ಬಹಳ ದಿನ ನಡೆಯುವುದಿಲ್ಲ’ ಎಂದು ಸ್ಪೀಕರ್ ವಿರುದಟಛಿ ಸೋಮಣ್ಣ ವಾಗ್ಧಾಳಿ ನಡೆಸಿದರು.
ಪೊಲೀಸ್ ಭದ್ರತೆ: ವಿಧಾನಸೌಧಕ್ಕೆ ಆಗಮಿಸುವ ಶಾಸಕರಿಗೆ ಭದ್ರತೆ ಒದಗಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರು ವಿಧಾನಸೌಧದ ಮೊದಲನೆ ಮಹಡಿಯಲ್ಲಿ ಪೊಲೀಸ್ ಭದ್ರತೆ ಪರಿಶೀಲನೆ ನಡೆಸಿದರು.
ಪತ್ರಕರ್ತರು ಹಾಗೂ ಹತ್ತು ಜನ ಶಾಸಕರನ್ನು ಬಿಟ್ಟು ಸ್ಪೀಕರ್ ಕಚೇರಿ ಇರುವ ವಿಧಾನಸೌಧದ ದಕ್ಷಿಣ ಭಾಗದಲ್ಲಿ ಯಾವುದೇ ವ್ಯಕ್ತಿಯನ್ನು ಬಿಡದಂತೆ ಸೂಚನೆ ನೀಡಿದರು.
ಓಡೋಡಿ ಬಂದ ಶಾಸಕರು
ಸಂಜೆ ಆರು ಗಂಟೆಯೊಳಗೆ ಸ್ಪೀಕರ್ ಅವರನ್ನು ಭೇಟಿ ಮಾಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಎಚ್ಎಎಲ್ ವಿಮಾನ ನಿಲ್ದಾಣದಿಂದ ಅತೃಪ್ತ 11 ಶಾಸಕರು ಪೋಲೀಸರ ಭದ್ರತೆಯಲ್ಲಿ ವಿಶೇಷ ವಾಹನದಲ್ಲಿ ವಿಧಾನಸೌಧಕ್ಕೆ
ಆಗಮಿಸಿದರು. ವಿಧಾನಸೌಧಕ್ಕೆ ಆಗಮಿಸಿ ಸ್ಪೀಕರ್ ಕಚೇರಿ ತಲುಪುವ ಹೊತ್ತಿಗೆ ಆರು ಗಂಟೆಯಾಗಿತ್ತು. ಹೀಗಾಗಿ ಅತೃಪ್ತ ಶಾಸಕರು ತರಾತುರಿಯಲ್ಲಿ ಬಸ್ ಇಳಿದು ಕೆಂಗಲ್
ಹನುಮಂತಯ್ಯ ಗೇಟ್ನಿಂದ ಸ್ಪೀಕರ್ ಕಚೇರಿವರೆಗೆ ಓಡಿಬಂದರು. ಸ್ಪೀಕರ್ ಕಚೇರಿ ಪ್ರವೇಶಿಸುವ ಹೊತ್ತಿಗೆ 6 ಗಂಟೆ 5 ನಿಮಿಷವಾಗಿತ್ತು. ಆದರೂ ಸ್ಪೀಕರ್ ಕಚೇರಿಗೆ 11
ಶಾಸಕರು ಪ್ರವೇಶ ಪಡೆದು ರಾಜೀನಾಮೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು