ಮಹಿಳಾ ಉದ್ಯಮಿಗಳಿಗೆ ವಿಶೇಷ ರಿಯಾಯಿತಿ: ಯಡಿಯೂರಪ್ಪ
Team Udayavani, Nov 20, 2019, 5:54 AM IST
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಮಂಗಳವಾರ ಹಮ್ಮಿಕೊಂಡಿದ್ದ ಮಹಿಳಾ ಉದ್ಯಮಿ ಗಳ ದಿನಾಚರಣೆಯನ್ನು ಸಿಎಂ ಯಡಿಯೂರಪ್ಪ ಉದ್ಘಾಟಿಸಿದರು.
ಬೆಂಗಳೂರು: ಹೊಸ ಕೈಗಾರಿಕಾ ನೀತಿಯಲ್ಲಿ ಸರಕಾರ ಮಹಿಳಾ ಉದ್ಯಮಿಗಳಿಗೆ ವಿಶೇಷ ರಿಯಾಯಿತಿ ನೀಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭರವಸೆ ನೀಡಿದರು.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಮಂಗಳವಾರ ಹಮ್ಮಿಕೊಂಡಿದ್ದ ಮಹಿಳಾ ಉದ್ಯಮಿ ಗಳ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲೀಗ ಕೈಗಾರಿಕಾ ಸ್ನೇಹಿ ವಾತಾವರಣವಿದೆ. ಸರಕಾರ ಶೀಘ್ರ ದಲ್ಲಿಯೇ ಹೊಸ ಕೈಗಾರಿಕಾ ನೀತಿ ಯನ್ನು ಜಾರಿಗೆ ತರಲಿದ್ದು, ಮಹಿಳಾ ಉದ್ಯಮಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಹಲವು ರಿಯಾಯಿತಿಗಳನ್ನು ನೀಡಲಾಗುವುದು ಎಂದು ತಿಳಿಸಿದರು.
ಹೊಸ ಕೈಗಾರಿಕಾ ನೀತಿಗೆ ಸಂಬಂಧಿಸಿದಂತೆ ಈಗಾಗಲೇ ಎಫ್ಕೆಸಿಸಿಐ, ಅವೇಕ್ ಸಹಿತ ಹಲವು ಸಂಸ್ಥೆಗಳು ಸಲಹೆಗಳನ್ನು ನೀಡಿದ್ದು ಸರಕಾರ ಅವುಗಳಿಗೆ ಮನ್ನಣೆ ನೀಡ ಲಿದೆ. ಮಹಿಳಾ ಉದ್ಯಮಿಗಳಿಗೆ ಪೂರಕ ವಾತಾವರಣ ನಿರ್ಮಿಸಲು ಸರಕಾರ ಹಲವು ರೀತಿಯ ಯೋಜನೆಗಳನ್ನು ರೂಪಿಸಲಿದೆ ಎಂದು ಹೇಳಿದರು.
ಸಹಕಾರ ಸಂಘ ಮತ್ತು ರಾಷ್ಟ್ರೀಯ ಬ್ಯಾಂಕ್ಗಳಲ್ಲಿ ಮಹಿಳೆಯರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ಸಿಗುವಂತಾಗಲು ಸರಕಾರ ಕ್ರಮ ಕೈಗೊಳ್ಳಲಿದೆ. ಆ ಹಿನ್ನೆಲೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯಮ ಸ್ಥಾಪಿಸಲು ಮುಂದೆ ಬರಬೇಕು ಎಂದು ತಿಳಿಸಿದರು.
3 ಕೋ. ರೂ.ಅನುದಾನ
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ ಎಪ್ರಿಲ್ನಲ್ಲಿ ಕೃಷಿ ಮೇಳ ಹಮ್ಮಿಕೊಳ್ಳಲು ನಿರ್ಧರಿಸಿದೆ. ಇದಕ್ಕಾಗಿ ಸರಕಾರ 3 ಕೋ.ರೂ. ಅನುದಾನ ನೀಡಲಿದೆ ಎಂದು ತಿಳಿಸಿದರು. ರಾಜ್ಯದ ವಿವಿಧ ಭಾಗಗಳಲ್ಲಿ ಮಹಿಳಾ ಉದ್ಯಮಿಗಳಿಗೆ ಅನುಕೂಲವಾಗಲು ಪ್ರತ್ಯೇಕ ಟೆಕ್ಪಾರ್ಕ್ ಸ್ಥಾಪಿಸುವುದು ಸಹಿತ ಹಲವು ಬೇಡಿಕೆಗಳನ್ನು ಎಫ್ಕೆಸಿಸಿಐ ಸಲ್ಲಿಸಿದ್ದು, ಅವುಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸಿಎಂ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
ದಳಪತಿ ಅಭಿಮಾನಿಗಳ ಟ್ರೋಲ್ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?
RCB: ಈ ಸಲ ಕಪ್ ನಮ್ಮದು…