ಕೋವಿಡ್ ನಿಯಮದಿಂದ ತಪ್ಪಿಸಿಕೊಳ್ಳಲು ವಿಮಾನದಲ್ಲಿ ಮದುವೆ; ವೈರಲ್ ವಿಡಿಯೋದಿಂದ ತನಿಖೆಯ ಬಿಸಿ!
ದೂರು ದಾಖಲಿಸುವಂತೆ ಸ್ಪೈಸ್ ಜೆಟ್ ಗೆ ಸೂಚಿಸಲಾಗಿದೆ ಎಂದು ಡಿಜಿಸಿಎ ತಿಳಿಸಿರುವುದಾಗಿ ವರದಿ ಹೇಳಿದೆ.
Team Udayavani, May 24, 2021, 4:53 PM IST
ಮದುರೈ: ಕೋವಿಡ್ 19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ ಡೌನ್ ಹಾಗೂ ಕಠಿಣ ಮಾರ್ಗಸೂಚಿ ಜಾರಿಯಲ್ಲಿದೆ. ಈ ಸಂದರ್ಭದಲ್ಲಿ ವಿವಾಹ ಸೇರಿದಂತೆ ಜಾತ್ರೆ, ಸಮಾರಂಭಗಳಿಗೆ ನಿರ್ಬಂಧ ವಿಧಿಸಲಾಗಿದೆ. ಆದರೆ ತಮಿಳುನಾಡಿನ ಮದುರೈಯಲ್ಲಿ ಜೋಡಿಯೊಂದು ಕೋವಿಡ್ ನಿಯಮ ತಪ್ಪಿಸಿಕೊಳ್ಳಲು ವಿಮಾನದಲ್ಲಿ ವಿವಾಹವಾಗಿದ್ದರು. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭರ್ಜರಿಯಾಗಿ ವೈರಲ್ ಆದ ಬೆನ್ನಲ್ಲೇ ಅವರಿಗೆ ತನಿಖೆಯ ಬಿಸಿ ಮುಟ್ಟಿದೆ!
ಕೋವಿಡ್ ನಿಯಮದಿಂದ ತಪ್ಪಿಸಿಕೊಳ್ಳಲು ಮದುರೈಯ ಯುವಜೋಡಿಯೊಂದು ಬೆಂಗಳೂರಿಗೆ ತಲುಪುವ ವಿಮಾನವನ್ನು ಬಾಡಿಗೆ ಪಡೆದು ಮಾರ್ಗಮಧ್ಯೆದಲ್ಲಿಯೇ ವಿವಾಹವಾಗಿದ್ದರು. ಈ ಸಂದರ್ಭದಲ್ಲಿ ವಧು, ವರನ ಸಂಬಂಧಿಕರು, ಆಪ್ತರು ಎಲ್ಲರೂ ಹಾಜರಿದ್ದರು ಎಂದು ವರದಿ ತಿಳಿಸಿದೆ.
A couple tied the knot on-board a chartered flight from Madurai, Tamil Nadu. Their relatives & guests were on the same flight.
“A SpiceJet chartered flight was booked y’day from Madurai. Airport Authority officials unaware of the mid-air marriage ceremony,” says Airport Director pic.twitter.com/wzMCyMKt5m
— ANI (@ANI) May 24, 2021
ಬೋಯಿಂಗ್ 737 ವಿಮಾನದಲ್ಲಿ ಅತಿಥಿಗಳು, ಸಂಬಂಧಿಕರು ಇದ್ದಿರುವುದು ವೈರಲ್ ಆದ ವಿಡಿಯೋ ಮತ್ತು ಫೋಟೊಗಳಿಂದ ಬಹಿರಂಗವಾಗಿತ್ತು. ಒಂದು ವಿಡಿಯೋದಲ್ಲಿ ವರ ವಧುವಿನ ಮಂಗಳಸೂತ್ರ ಕಟ್ಟುವ ವೇಳೆ ಜನರ ಗುಂಪು ಕೂಡಾ ಸೆರೆಯಾಗಿತ್ತು. ವಿಮಾನದಲ್ಲಿ ಕುಳಿತಿರುವ ಜನರು ಯಾರೂ ಮಾಸ್ಕ್ ಧರಿಸಿಲ್ಲ, ಸಾಮಾಜಿಕ ಅಂತರವನ್ನೂ ಕಾಪಾಡಿಲ್ಲ ಎಂಬುದು ವೈರಲ್ ಆದ ವಿಡಿಯೋದಿಂದ ಬಹಿರಂಗವಾಗಿದೆ.
ವಿಮಾನದಲ್ಲಿ ವಿವಾಹವಾದ ಜೋಡಿ ಹಾಗೂ ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ಸಂಬಂಧಿಸಿದಂತೆ ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ ತನಿಖೆಯನ್ನು ಆರಂಭಿಸಿದೆ. ಕೋವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ದೂರು ದಾಖಲಿಸುವಂತೆ ಸ್ಪೈಸ್ ಜೆಟ್ ಗೆ ಸೂಚಿಸಲಾಗಿದೆ ಎಂದು ಡಿಜಿಸಿಎ ತಿಳಿಸಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
MUST WATCH
ಹೊಸ ಸೇರ್ಪಡೆ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ