ಸರ್ಕಾರಿ ಶಾಲೆಯಲ್ಲೂ ಸ್ಪೋಕನ್ ಇಂಗ್ಲಿಷ್‌ ಕ್ಲಾಸ್‌: ಶಿಕ್ಷಣ ಇಲಾಖೆಯಿಂದ ಹೊಸ ಪ್ರಯತ್ನ


Team Udayavani, May 23, 2022, 5:58 PM IST

22

ದಾವಣಗೆರೆ: ರಾಜ್ಯದ ಸರ್ಕಾರಿ ಶಾಲೆ ಮಕ್ಕಳಲ್ಲಿ ಇಂಗ್ಲಿಷ್‌ ಭಾಷಾ ಸಂವಹನ ಕೌಶಲ್ಯ ಬೆಳೆಸಲು ಇದೇ ಮೊದಲ ಬಾರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವಾರದಲ್ಲಿ ಒಂದು ದಿನ ಸ್ಪೋಕನ್ ಇಂಗ್ಲಿಷ್‌ ತರಗತಿ ನಡೆಸಲು ನಿರ್ಧರಿಸಿದೆ.

ಪ್ರಸಕ್ತ ಸಾಲಿನ ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ಶಾಲಾ ವಿಶೇಷ ಕಾರ್ಯಕ್ರಮಗಳ ಪಟ್ಟಿಯಲ್ಲಿ ಸ್ಪೋಕನ್ ಇಂಗ್ಲಿಷ್‌ ತರಗತಿಯನ್ನು ಸೇರಿಸಲಾಗಿದ್ದು 1ರಿಂದ 10ನೇ ತರಗತಿವರೆಗಿನ ಎಲ್ಲ ವಿದ್ಯಾರ್ಥಿಗಳಿಗೆ ವಾರಕ್ಕೆ ಒಂದು ದಿನ 40 ನಿಮಿಷಗಳ ತರಗತಿ ನಡೆಸಲು ಯೋಜಿಸಿದೆ. ಈ ವಿಶೇಷ ತರಗತಿಗೆ ಬೇಕಾಗುವ ನ್ಪೋಕನ್‌ ಇಂಗ್ಲಿಷ್‌ ಕೈಪಿಡಿಯನ್ನು ಸರ್ಕಾರಿ ಪ್ರಾಥಮಿಕ ಶಾಲಾ ಆಂಗ್ಲ ಭಾಷಾ ಸಂಪನ್ಮೂಲ ಶಿಕ್ಷಕರ ತಂಡ ದಿಂದ ತಯಾರಿಸಿಕೊಳ್ಳಲು ಸೂಚನೆ ನೀಡಿದೆ.

ಪ್ರಸ್ತುತ ವಿಶೇಷವಾಗಿ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಲ್ಲಿ ಇಂಗ್ಲಿಷ್‌ ಕಲಿಕೆ ಸವಾಲಾಗಿರುವ ಪ್ರಯುಕ್ತ ಪಿಯುಸಿ ವಿಜ್ಞಾನ ವ್ಯಾಸಂಗದ ನಂತರದ ಜೆಇಇ, ಎನ್‌ಇಇಟಿ, ಸಿಇಟಿನಂಥ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರುಸುವುದು ಸವಾಲಾಗಿದೆ. ವಿದ್ಯಾರ್ಥಿಗಳು ಇಂಗ್ಲಿಷ್‌ನಲ್ಲಿ ಮಾತನಾಡಲು ಕಲಿಯುವಂತೆ ಸಹಾಯಕವಾಗಬಲ್ಲ ರೀತಿಯಲ್ಲಿ ನ್ಪೋಕನ್‌ ಇಂಗ್ಲಿಷ್‌ ಕೈಪಿಡಿ ತಯಾರಿಸಬೇಕು.

ಇದರಲ್ಲಿ ವಿದ್ಯಾರ್ಥಿಗಳು Conversation, dialogues, script, role play, story telling, situation explanation, experience sharing ನಂಥ ಚಟುವಟಿಕೆಗಳನ್ನು ಅಳವಡಿಸಬೇಕು. ಬೋಧನಾವಧಿಗೆ ತಲಾ ಒಂದು ಇಂಗ್ಲಿಷ್‌ ಚಟುವಟಿಕೆ ರಚಿಸಿ ಕಡ್ಡಾಯವಾಗಿ ವಾರದಲ್ಲಿ ಒಂದು ಅವಧಿ (ಪ್ರತಿ ಶನಿವಾರದ ಮೂರನೇ ಅವಧಿ ಆಂಗ್ಲ ಭಾಷೆ ಹೊರತುಪಡಿಸಿ) ಇತರ ಭಾಷೆಯಲ್ಲಿ ಮಾತನಾಡದಂತೆ ನಿರ್ಣಯಿಸಿಕೊಂಡು ಸಂಪೂರ್ಣ ಅವಧಿ ವಿದ್ಯಾರ್ಥಿಗಳೊಂದಿಗೆ ಆಂಗ್ಲ ಭಾಷೆಯಲ್ಲಿ ಮಾತನಾಡುತ್ತ ಸ್ಪೋಕನ್ ಇಂಗ್ಲಿಷ್‌ ತರಗತಿ ನಡೆಸಬೇಕು.

ಶಾಲೆಯ ಇಂಗ್ಲಿಷ್‌ ಭಾಷಾ ಶಿಕ್ಷಕರಿಂದಲೇ ಈ ತರಬೇತಿ ನಡೆಸಬೇಕು. ಅಗತ್ಯ ಮತ್ತು ಅವಕಾಶಗಳು ಇದ್ದಲ್ಲಿ ಬಾಹ್ಯವಾಗಿಯೂ ನುರಿತ ಸಂಪನ್ಮೂಲ ವ್ಯಕ್ತಿಗಳನ್ನು ಬಳಸಿಕೊಳ್ಳಬಹುದೆಂದು ಇಲಾಖೆ ಸೂಚಿಸಿದೆ.

ಮೀನಾ ಕ್ಲಬ್‌ಗಳ ಮೂಲಕ ವಿದ್ಯಾರ್ಥಿಗಳ ತಂಡ ರಚಿಸಿ, ಶಾಲೆಯ ಸಂದರ್ಶನಾರ್ಥಿಗಳಿಗೆ ಶಾಲೆಯ ಕುರಿತು ಸಮಗ್ರವಾಗಿ ಆಂಗ್ಲ ಭಾಷೆಯಲ್ಲಿ ಪರಿಚಯಿಸುವುದನ್ನು ಕಲಿಸಬೇಕು. ಎಲ್‌ಕೆಜಿಯಿಂದ ನಲಿ-ಕಲಿ ತರಗತಿಗಳಿಗೆ ವಿವಿಧ ರೀತಿಯ ಚಾರ್ಟ್‌ಗಳನ್ನು ಫ್ಲೆಕ್ಸ್‌ನಲ್ಲಿ ರಚಿಸಿ ತಿಳಿವಳಿಕೆ ನೀಡಬೇಕು. ಉದಾಹರಣೆಗೆ ಮಾನವ ಶರೀರದ ಭಾಗಗಳು, ಹಣ್ಣುಗಳು, ತರಕಾರಿಗಳು, ಬಣ್ಣಗಳು, ವಾಹನಗಳು, ಇತರೆ ಚಿತ್ರ ಹಾಗೂ ಭಾಗಗಳನ್ನು ಗುರುತಿಸಿ, ಹೆಸರು ದಾಖಲಿಸದೆ ಖಾಲಿ ಬಿಟ್ಟು ಸೂಕ್ತ ಆಂಗ್ಲ, ಹಿಂದಿ ಪದಗಳನ್ನು ಆಯ್ದು ಆ ಖಾಲಿ ಜಾಗದಲ್ಲಿ ಜೋಡಿಸಲು ತಿಳಿಸುವ ಚಟುವಟಿಕೆ ನಿರ್ವಹಿಸಬೇಕು. ಇದರಿಂದ ವಿದ್ಯಾರ್ಥಿಗಳಿಗೆ ಆಂಗ್ಲ ಹಾಗೂ ಹಿಂದಿ ಭಾಷಾ ಪದಗಳ ಬಳಕೆಯು ಸುಲಲಿತವಾಗುತ್ತದೆ ಎಂದು ಇಲಾಖೆ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ನಿರ್ದೇಶನ ನೀಡಲಾಗಿದೆ.

ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ ಇಂಗ್ಲಿಷ್‌ ಪರಿಚಯಾತ್ಮಕ ಭಾಷೆಯಾಗಿ ಒಂದನೇ ತರಗತಿಯಿಂದಲೇ ವಿಷಯವಿದೆ. ಆದರೆ, ಸರ್ಕಾರಿ ಶಾಲಾ ಮಕ್ಕಳು ಸಹ ಕಾನ್ವೆಂಟ್‌ ಮಕ್ಕಳಂತೆ ಸುಲಲಿತವಾಗಿ ಇಂಗ್ಲಿಷ್‌ ಮಾತನಾಡುವುದನ್ನು ರೂಢಿ ಮಾಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಹೊಸ ಪ್ರಯೋಗಕ್ಕೆ ಮುಂದಾಗಿದ್ದು ಇದು ಮಕ್ಕಳ ಮೇಲೆ ಎಷ್ಟರ ಮಟ್ಟಿಗೆ ಉತ್ತಮ ಪರಿಣಾಮ ಬೀರುತ್ತದೆ ಎಂಬುದು ಕುತೂಹಲ ಕೆರಳಿಸಿದೆ.

  • ಕಾನ್ವೆಂಟ್‌ ಮಕ್ಕಳಂತೆ ಸುಲಲಿತ ಇಂಗ್ಲಿಷ್‌ ಸಂವಹನಕ್ಕೆ ಯೋಜನೆ
  • ವಾರಕ್ಕೊಂದು ತರಗತಿ ಸಂಪೂರ್ಣ ಇಂಗ್ಲಿಷ್‌ಮಯ

ಇದೇ ವರ್ಷ ಮೊದಲ ಬಾರಿಗೆ ಇಲಾಖೆ ಸ್ಪೋಕನ್ ಇಂಗ್ಲಿಷ್‌ ತರಗತಿಯನ್ನು ವಿಶೇಷ ಕಾರ್ಯಕ್ರಮಗಳ ಪಟ್ಟಿಯಲ್ಲಿ ಸೇರಿಸಿದ್ದು ಇದು ಭಾಷಾ ಕಲಿಕೆಗೆ ಪ್ರೋತ್ಸಾಹದಾಯಕ ಹಾಗೂ ಪರ್ಯಾಯ ಮಾರ್ಗವಾಗ ಲಿದೆ. ಶಿಕ್ಷಕರು ವಿಶೇಷ ಆಸಕ್ತಿ ವಹಿಸಿದರೆ ಮಕ್ಕಳಿಗೆ ಆಂಗ್ಲ ಭಾಷೆಯಲ್ಲಿ ಮಾತನಾಡುವುದು ಸುಲಲಿತವಾಗಲಿದೆ. -ಎಚ್‌.ಕೆ. ಲಿಂಗರಾಜ್‌, ಪ್ರಾಚಾರ್ಯರು, ಡಯಟ್‌, ದಾವಣಗೆರೆ

●ಎಚ್‌.ಕೆ.ನಟರಾಜ

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.