ಶ್ರೀ ಬನಶಂಕರಿದೇವಿ ಜಾತ್ರೋತ್ಸವ ನಿಷೇಧ; ಸತತ ಎರಡನೇ ವರ್ಷ ಜಾತ್ರೆ ರದ್ದು

ಜಾತ್ರೆ ರದ್ದುಗೊಳಿಸಿರುವ ಮತ್ತು ಸಾರ್ವಜನಿಕ ಪ್ರವೇಶ ನಿರ್ಬಂಧಿಸಿರುವ ಸೂಚನಾ ಫಲಕಗಳನ್ನು ಹಾಕಲಾಗಿದೆ.

Team Udayavani, Jan 14, 2022, 4:01 PM IST

ಶ್ರೀ ಬನಶಂಕರಿದೇವಿ ಜಾತ್ರೋತ್ಸವ ನಿಷೇಧ

ಬಾದಾಮಿ: ಉತ್ತರ ಕರ್ನಾಟಕದ ಸುಪ್ರಸಿದ್ಧ ಕೋಟ್ಯಂತರ ಭಕ್ತರ ಆರಾಧ್ಯದೇವಿ ಸುಕ್ಷೇತ್ರ ಶ್ರೀ ಬನಶಂಕರಿದೇವಿ ಜಾತ್ರೆಯನ್ನು ಕೋವಿಡ್‌ ಹಿನ್ನೆಲೆ ಜಿಲ್ಲಾಡಳಿತ ರದ್ದುಪಡಿಸಿ ಆದೇಶ ಹೊರಡಿಸಿದ ಹಿನ್ನೆಲೆ ಜಾತ್ರೆಗೆ ಆಗಮಿಸುವ ಭಕ್ತರಿಗೆ ನಿರಾಸೆಯಾಗಿದೆ. ಪ್ರತಿ ವರ್ಷ ಬನದ ಹುಣ್ಣಿಮೆ ದಿನ ನಡೆಯುವ ಲಕ್ಷಾಂತರ ಜನ ಭಕ್ತರು ಸೇರುವ ಜಾತ್ರೆಯನ್ನು ಮಹಾಮಾರಿ ಕೊರೊನಾ ವೈರಸ್‌ ಉಲ್ಬಣವಾಗುತ್ತಿರುವ ಕಾರಣ ಜಿಲ್ಲಾಡಳಿತ ನಿಷೇಧಿಸಿ ಆದೇಶ ಹೊರಡಿಸಿದೆ.

ಸತತ ಎರಡನೇ ವರ್ಷ ಜಾತ್ರೆ ರದ್ದಾಗುತ್ತಿದ್ದು, ವಿಶೇಷ ಕೊರೊನಾ ವೈರಸ್‌ ಮುಂದುವರೆದ ಭಾಗವಾದ ಒಮಿಕ್ರಾನ್‌ ಹರಡುವುದನ್ನು ನಿಯಂತ್ರಣಕ್ಕಾಗಿ ಜಾರಿಗೆ ಬಂದಿರುವ ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿರುವುದು ಜನರ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು, ಆದರೆ ಸುಮಾರು ನಿರಂತರ ಒಂದು ತಿಂಗಳ ಕಾಲ ಜರುಗುತ್ತಿದ್ದ ಶತಮಾನದ ಇತಿಹಾಸ ಕಂಡ ಹಾಗೂ ಪರಂಪರೆಯುಳ್ಳ ಜಾತ್ರೆ ರದ್ದಾಗಿರುವುದು ಲಕ್ಷಾಂತರ ಜನರ ಪಾಲಿಗೆ ಸಾಕಷ್ಟು ನಿರಾಸೆ ಮತ್ತು ನೋವುಂಟು ಮಾಡಿದೆ.

ಈ ಸಂದರ್ಭದಲ್ಲಿ ಅನಿವಾರ್ಯವಾಗಿದೆ. ಆದರೆ ಕಳೆದ ವರ್ಷದ ಆಚರಣೆಯಂತೆ ಅತ್ಯಂತ ಸರಳವಾಗಿ ಮತ್ತು ನಿತ್ಯದ ಪೂಜಾ ಕೈಂಕರ್ಯಗಳು ಜರುಗುವುದರೊಂದಿಗೆ ಮಹಾ ರಥೋತ್ಸವ ನೆರವೇರಲಿದೆ ಎಂದು ದೇವಸ್ಥಾನದ ಟ್ರಸ್ಟ್‌ ಕಮಿಟಿ ಪ್ರಕಟಣೆ ತಿಳಿಸಿದೆ. ಈಗಾಗಲೇ ನಾಟಕ ಕಂಪನಿಗಳು, ಗೃಹ ಬಳಕೆ ಅಂಗಡಿಗಳು, ಆಟಿಕೆ ಅಂಗಡಿಗಳು, ಮಿಠಾಯಿ ಅಂಗಡಿಗಳು, ಬೀದಿ ಬದಿ ವ್ಯಾಪಾರಸ್ಥರು ಸಣ್ಣ ಪುಟ್ಟ ಅಂಗಡಿಗಳು ತಲೆ ಎತ್ತಬೇಕಾಗಿತ್ತು. ಒಂದು ತಿಂಗಳ ಕಾಲ ವ್ಯಾಪಾರ ವಹಿವಾಟು ಮಾಡಿಕೊಂಡು ಒಂದು ವರ್ಷದ ಗಂಜಿ ಮಾಡಿಕೊಳ್ಳುತ್ತಿದ್ದರು ಅದು ಈ ಬಾರಿ ಕೊರೊನಾ ಹೊಡೆತಕ್ಕೆ ಮತ್ತೆ ಇಲ್ಲದಂತಾಯಿತು. ಕಲಾವಿದರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

ಜಾತ್ರೆ ಸಮೀಪಿಸುತ್ತಿದ್ದಂತೆ ತಾಲೂಕು ಆಡಳಿತ ಕಠಿಣ ನಿಲುವು ತೆಗೆದುಕೊಂಡಿದೆ. ದೇವಸ್ಥಾನ ಸಂಪರ್ಕಿಸುವ ಬಾದಾಮಿ ಗದಗ, ಶಿವಪುರ ಶಿವಯೋಗಮಂದಿರದಿಂದ ಬರುವ ಎಲ್ಲ ಮಾರ್ಗಗಳಲ್ಲಿ ಬಾರಿಕೇಡ್‌ ಅಳವಡಿಸಿ ಅಲ್ಲಲ್ಲಿ ಯಾರೂ ದೇವಸ್ಥಾನಕ್ಕೆ ತೆರಳದಂತೆ ಪೊಲೀಸ್‌ ಸಿಬ್ಬಂದಿ ನಿಯೋಜಿಸಲಾಗಿದೆ. ಜಾತ್ರೆ ರದ್ದುಗೊಳಿಸಿರುವ ಮತ್ತು ಸಾರ್ವಜನಿಕ ಪ್ರವೇಶ ನಿರ್ಬಂಧಿಸಿರುವ ಸೂಚನಾ ಫಲಕಗಳನ್ನು ಹಾಕಲಾಗಿದೆ.

ಇದಕ್ಕೆ ಪೂರಕವೆಂಬಂತೆ ಉಪವಿಭಾಗಾಧಿ ಕಾರಿ ಎಂ.ಗಂಗಪ್ಪ, ತಹಶೀಲ್ದಾರ್‌ ಸುಹಾಸ್‌ ಇಂಗಳೆ ಸಿಪಿಐ ರಮೇಶ ಹಾನಾಪುರ, ಪಿಎಸ್‌ಐ ನೇತ್ರಾವತಿ ಪಾಟೀಲ ಸರ್ಕಾರದ ಆದೇಶ ಪಾಲಿಸುತ್ತಿದ್ದಾರೆ. ಇನ್ನು ದೇವಸ್ಥಾನದ ಆಡಳಿತ ಮಂಡಳಿ ಬೆಳಗಿನ ಜಾವ ಬನಶಂಕರಿದೇವಿಗೆ ಜಾತ್ರಾ ಮಹೋತ್ಸವದ ಮತ್ತು ನಿತ್ಯದ ಪೂಜಾ ಕೈಂಕರ್ಯಗಳು ಎಂದಿನಂತೆ ನಡೆಸಿ ಗರ್ಭಗುಡಿ ಬಾಗಿಲು ಬಂದ್‌ ಮಾಡಲಾಗುತ್ತಿದೆ. ದೇವಸ್ಥಾನದಲ್ಲಿ ಪ್ರಾಂಗಣದಲ್ಲಿ ಭಕ್ತರು ಬರದಂತೆ ಪೊಲೀಸ್‌
ಬಂದೋಬಸ್ತ್ ಏರ್ಪಡಿಸಲಾಗಿದೆ.

ಉತ್ತರ ಕರ್ನಾಟಕದಲ್ಲಿ ಅತಿ ದೊಡ್ಡ ಜಾತ್ರೆ ಎಂದೆನಿಸಿಕೊಂಡಿರುವ ಶ್ರೀ ಬನಶಂಕರಿದೇವಿ ಜಾತ್ರೆಯನ್ನು ಕೋವಿಡ್‌ ನಿಯಮನುಸಾರ ಪೂಜಾರ ಮನೆತನದವರಿಗೆ ಪೂಜಾ ಕೈಂಕರ್ಯಕ್ಕೆ ಅವಕಾಶ ನೀಡಲಾಗಿದೆ. ಆದರೆ ಭಕ್ತರ ದರ್ಶನಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ.
ಸುಹಾಸ್‌ ಇಂಗಳೆ, ತಹಶೀಲ್ದಾರ್‌ ಬಾದಾಮಿ.

ಕಲಾವಿದರಿಗೆ ಪ್ರತಿ ವರ್ಷ ಬನಶಂಕರಿದೇವಿ ಜಾತ್ರೆಯಲ್ಲಿ ಒಂದು ತಿಂಗಳು ದುಡಿದು ಒಂದು ವರ್ಷದ ಗಂಜಿ ಮಾಡುತ್ತಿದ್ದೇವು. ಆದರೆ ಕೊರೊನಾ ಕಾರಣ ಜಾತ್ರೆ ರದ್ದಾಗಿರುವುದರಿಂದ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಶೇ.50 ಅವಕಾಶ ಕಲ್ಪಿಸಿ, ಜಾತ್ರೆ ಪ್ರದರ್ಶನಕ್ಕೆ ಅವಕಾಶ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಸರಕಾರ ಮತ್ತು ಜಿಲ್ಲಾಡಳಿತ ನಿಯಮ ಸಡಿಲಿಕೆ ಮಾಡಿ ಜಾತ್ರೆಯಲ್ಲಿ ನಾಟಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿ ಕೊಡಬೇಕಿದೆ.
ಜ್ಯೋತಿ ಗುಳೇದಗುಡ್ಡ, ನಾಟಕ ಕಲಾವಿದೆ ಗುಳೇದಗುಡ್ಡ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.