ವಿಜೃಂಭಣೆಯಿಂದ ನೆರವೇರಿದ ಶ್ರೀ ಬುತ್ತಿ ಬಸವೇಶ್ವರ ಜಾತ್ರಾಮಹೋತ್ಸವ
Team Udayavani, Feb 16, 2022, 9:12 PM IST
ಕುಷ್ಟಗಿ: ಈ ಭಾಗದ ಆರಾಧ್ಯ ದೈವ ಇಲ್ಲಿನ ಶ್ರೀ ಅನ್ನದಾನೇಶ್ವರ ಶಾಖಾಮಠದ ಭಾರತ ಹುಣ್ಣಿಮೆಯ ಶ್ರೀ ಬುತ್ತಿ ಬಸವೇಶ್ವರ ಜಾತ್ರಾಮಹೋತ್ಸವ ಪ್ರಯುಕ್ತ ಬುಧವಾರ ಸಂಜೆ ಗೋದೂಳಿ ಸಮಯದಲ್ಲಿ ಮಹಾ ರಥೋತ್ಸವ ಭಕ್ತರ ಜಯಘೋಷಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.
ಬೆಳಗ್ಗೆ ಶ್ರೀ ಬುತ್ತಿ ಬಸವೇಶ್ವರ ಮೂರ್ತಿಗೆ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ನಂತರ ಇಲ್ಲಿನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಿಂದ ನಂದೀಶ್ವರ ಮೂರ್ತಿ ಹಾಗೂ ರಥದ ಕಳಶದೊಂದಿಗೆ ಸಕಲ ವಾದ್ಯಗಳ ಸಮೇತ ಮೆರವಣಿಗೆ ನಡೆಯಿತು. ಮದ್ಯಾಹ್ನ ದೇವಸ್ಥಾನ ಆವರಣದಲ್ಲಿ ಮಹಾ ದಾಸೋಹದ ನೆರವೇರಿತು.
ಸಂಜೆ ಕೊರಡಕೇರಾ ಗ್ರಾಮದ ವೇದ ಮೂರ್ತಿ ಶಿವಾನಂದಯ್ಯ ಗುರುವಿನ್, ವೇದ ಮೂರ್ತಿ ಬಸಯ್ಯ ಗುರುವಿನ್ ಹಾಗೂ ಹಾಲುಮತ ಭಕ್ತರಿಂದ ತೇರಿನ ಹಗ್ಗವನ್ನು ಮೆರವಣಿಗೆಯಲ್ಲಿ ದೇವಸ್ಥಾನ ಆವರಣದ ರಥದವರೆಗೆ ತರಲಾಯಿತು.
ಹಾಲಕೆರೆ ಸಂಸ್ಥಾನಮಠದ ಶ್ರೀ ಮುಪ್ಪಿನ ಬಸವಲಿಂಗ ಸ್ವಾಮೀಜಿ, ಮದ್ದಾನಿ ಹಿರೇಮಠದ ಕರಿಬಸವ ಶಿವಾಚಾರ್ಯ ಸ್ವಾಮೀಜಿ, ನಂದವಾಡಗಿಯ ಶ್ರೀ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಕೊಟ್ಟುರು ದೇಶಿಕರು, ಶ್ರಿ ಸಿದ್ದಲಿಂಗ ಸ್ವಾಮೀಜಿ,ಪರ್ವತ ದೇವರು, ವಿಜಯ ಪ್ರಭು ದೇವರು, ನಾಗನಾಥ ದೇವರು, ವಾಗೀಶ ದೇವರು, ಸಮ್ಮುಖದಲ್ಲಿ ಮಹಾರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಕುಷ್ಟಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳು ರಥದ ಮಿಣಿ ಹಿಡಿದು ಪಾದಗಟ್ಟೆಯವರೆಗೂ ಹರ್ಷೋದ್ಘಾರದೊಂದಿಗೆ ಎಳೆದರು, ನಂತರ ದೈವದ ಪಾದಗಟ್ಟೆಯಿಂದ ರಥ ಪುನಃ ದೇವಸ್ಥಾನಕ್ಕೆ ತರಲಾಯಿತು. ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತಾದಿಗಳು ಸಾಗಿದ ರಥಕ್ಕೆ ಉತ್ತತ್ತಿ ಎಸೆದು ಭಕ್ತಿ ಸೇವೆ ಸಲ್ಲಿಸಿ ಧನ್ಯತಾಭಾವ ಮೆರೆದರು. ಮಹಾರಥ ಪಾದಗಟ್ಟೆ ತಲುಪಿ ಪುನಃ ರಥದ ಮನೆಗೆ ಆಗಮಿಸುತ್ತಿದ್ದಂತೆ ಚಿತ್ತಾಕರ್ಷಕ ಬಾಣ ಬಿರುಸು ಪ್ರದರ್ಶನ ಗಮನಾರ್ಹವೆನಿಸಿತು.
ಇದನ್ನೂ ಓದಿ : ಕಾಮಗಾರಿಗೆ ಸಿಗಂದೂರು ವನ್ಯಜೀವಿ ಸಂರಕ್ಷಿತ ಪ್ರದೇಶದಿಂದ ಮಣ್ಣು ; ಸ್ಥಳೀಯರ ಆಕ್ಷೇಪ
ಜಿಲ್ಲಾ ಬಿಜೆಪಿ ಅಧ್ಯಕ್ಷ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ದೇವೇಂದ್ರಪ್ಪ ಬಳೂಟಗಿ, ಪುರಸಭೆ ಅಧ್ಯಕ್ಷ ಗಂಗಾಧರ ಸ್ವಾಮಿ ಹಿರೇಮಠ, ದೊಡ್ಡಬಸವ ಬಯ್ಯಾಪೂರ, ಪುರಸಭೆ ಸದಸ್ಯರಾದ ರಾಜೇಶ ಪತ್ತಾರ, ಕಲ್ಲೇಶ ತಾಳದ, ಬಸವರಾಜ ಬುಡಕುಂಟಿ, ಮಹಾಂತೇಶ ಕಲ್ಲಭಾವಿ, ಗೀತಾ ಕೋಳೂರು, ಗೀತಾ ತುರಕಾಣಿ, ಮಹಾಂತಯ್ಯ ಅರಳಿಲಿಮಠ, ಸಿ.ಎಂ.ಹಿರೇಮಠ ಮತ್ತೀತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ
Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ
Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ
Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು
Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್
Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ
Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು