ಕೋವಿಡ್‌ ಸುರಕ್ಷೆ ಪರೀಕ್ಷೆ: ಶ್ರೀಲಂಕಾದಲ್ಲಿ ಅಣಕು ಮತದಾನ


Team Udayavani, Jun 8, 2020, 3:02 PM IST

ಕೋವಿಡ್‌ ಸುರಕ್ಷೆ ಪರೀಕ್ಷೆ: ಶ್ರೀಲಂಕಾದಲ್ಲಿ ಅಣಕು ಮತದಾನ

ಕೊಲಂಬೋ: ಜುಲೈ ಕೊನೆ ಭಾಗದಿಂದ ಆಗಸ್ಟ್‌ ಮಧ್ಯಭಾಗದವರೆಗೆ ಶ್ರೀಲಂಕಾದಲ್ಲಿ ಸಂಸತ್‌ ಚುನಾವಣೆಗಳು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕೋವಿಡ್‌ ವಿರುದ್ಧ ಸುರಕ್ಷೆ ಕೈಗೊಳ್ಳಲು ಅಣಕು ಮತದಾನ ನಡೆಸಲಾಯಿತು.

ಕೋವಿಡ್‌ ವಿರುದ್ಧ ಸುರಕ್ಷೆಯನ್ನು ಹೇಗೆ ಕೈಗೊಳ್ಳಬಹುದು? ಮತದಾನ ಕೇಂದ್ರಗಳಲ್ಲಿ ಹೇಗಿರಬೇಕು? ಜನರ ನಿಯಂತ್ರಣ, ಮತ ಚಲಾವಣೆ ವಿಧಾನ ಇತ್ಯಾದಿಗಳ ಬಗ್ಗೆ ಪರಿಶೀಲಿಸಲು ಇದನ್ನು ನಡೆಸಲಾಗಿದೆ.

ಶ್ರೀಲಂಕಾದಲ್ಲಿ ಸಂಸತ್‌ ಚುನಾವಣೆ ಎ.25ರಂದು ನಡೆಯಬೇಕಿದ್ದು ಆದರೆ ಕೋವಿಡ್‌ ಪ್ರಕರಣಗಳು ಹೆಚ್ಚಾದ್ದರಿಂದ ಅದನ್ನು ಮುಂದೂಡಲಾಗಿತ್ತು. ಮಾ.20ರಂದು ಲಾಕ್‌ಡೌನ್‌ ಘೋಷಿಸಲಾಗಿದ್ದು, ಜೂ.20ರಂದು ಚುನಾವಣೆ ನಡೆಸಲು ಉದ್ದೇಶಿಸಲಾಗಿತ್ತು. ಈವರೆಗೆ ಶ್ರೀಲಂಕಾದಲ್ಲಿ 1900 ಮಂದಿಗೆ ಕೋವಿಡ್‌ ತಗುಲಿದೆ.

ಗಾಲೆ ಜಿಲ್ಲೆಯ ಆ್ಯಂಬ್ಲಿನ್‌ಗೊಂಡಾ ಎಂಬಲ್ಲಿ ಸುಮಾರು 200 ಮತದಾರರನ್ನು ಬಳಸಿ ಅಣಕು ಮತದಾನ ನಡೆಸಲಾಗಿದೆ.
ಪ್ರತಿಯೊಂದು ಮತದಾರರಿಗೆ ಮುಂಚಿತವಾಗಿ ತಿಳಿಸಿ ಮಾಸ್ಕ್ ಹಾಕಿಕೊಂಡು ಬರಲು ಮತ್ತು ಅವರೇ ಒಂದು ಪೆನ್‌ ತರಲು ಹೇಳಲಾಗಿತ್ತು. ಮತದಾನ ಕೇಂದ್ರದಲ್ಲಿ ಸಾಮಾಜಿಕ ಅಂತರ, ಕೈತೊಳೆಯಲು ವ್ಯವಸ್ಥೆ, ಸ್ಯಾನಿಟೈಸರ್‌ಗಳನ್ನು ಇಡಲಾಗಿತ್ತು.

ಜತೆಗೆ ಮಾಸ್ಕ್ ಇಲ್ಲದವರಿಗೆ ಮಾಸ್ಕ್ ಗಳನ್ನೂ ನೀಡಲಾಯಿತು. ಮತದಾನಕ್ಕೆ ಪೇಪರ್‌ಗಳನ್ನು ನೀಡುವುದು ಮತ್ತು ಸೀಲ್‌ ಹಾಕುವುದು ಇತ್ಯಾದಿ ಪ್ರಕ್ರಿಯೆಗಳು ಇರುವುದರಿಂದ ಮತಗಟ್ಟೆಯ ಅಧಿಕಾರಿಗಳೂ ಕೈಗೆ ಗ್ಲೌಸ್‌ ಮತ್ತು ಮುಖಕ್ಕೆ ಪ್ಲಾಸ್ಟಿಕ್‌ ಶೀಲ್ಡ್‌ ಇಡುವುದನ್ನು ಕಡ್ಡಾಯ ಮಾಡಲಾಗಿತ್ತು. ಮತದಾನದ ಪ್ರಕ್ರಿಯೆಗಳನ್ನು ಮುಖ್ಯ ಚುನಾವಣ ಆಯುಕ್ತ ಮಹಿಂದಾ ದೇಶಪ್ರಿಯಾ ಅವರು ಪರಿಶೀಲಿಸಿದ್ದಾರೆ. ಕೋವಿಡ್‌ ಸಂದರ್ಭ ಸುರಕ್ಷಿತ ಚುನಾವಣೆ ನಡೆಸುವುದು ಆದ್ಯತೆಯಾಗಿದ್ದು, ಅದನ್ನು ಹೇಗೆ ನಡೆಸಬಹುದು ಎಂಬುದನ್ನು ಪ್ರಾಯೋಗಿಕವಾಗಿ ಇಲ್ಲಿ ಪರಿಶೀಲಿಸಲಾಗಿದೆ ಎಂದು ಹಿರಿಯ ಚುನಾವಣಾಧಿಕಾರಿಯೊಬ್ಬರು ಹೇಳಿದ್ದಾರೆ.

ಇದೇ ವೇಳೆ ಕೋವಿಡ್‌ ಸಂದರ್ಭದಲ್ಲಿ ಚುನಾವಣೆ ನಡೆಸುವುದಕ್ಕೆ ವಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಇದರಿಂದ ಕಾಯಿಲೆ ಇನ್ನಷ್ಟು ಹರಡಬಹುದು ಎಂದು ಹೇಳಿವೆ.

ಶ್ರೀಲಂಕಾದಲ್ಲಿ ಸುಮಾರು 16 ಲಕ್ಷ ಮತದಾರರಿದ್ದಾರೆ. 225 ಮಂದಿ ಪ್ರತಿನಿಧಿಗಳಿರುವ ಸಂಸತ್ತು ಇದಾಗಿದೆ.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

ISREL

Hamas ದಾಳಿ ತಡೆಗೆ ವಿಫ‌ಲ: ಇಸ್ರೇಲ್‌ ಸೇನಾ ಗುಪ್ತಚರ ಮುಖ್ಯಸ್ಥ ರಾಜೀನಾಮೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.