ಶ್ರೀನಗರ: ಪೊಲೀಸ್ ಅಧಿಕಾರಿಗೆ ಗುಂಡು
Team Udayavani, Oct 29, 2023, 9:53 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಡೌನ್ಟೌನ್ನಲ್ಲಿ ಪೊಲೀಸ್ ಅಧಿಕಾರಿಯನ್ನು ಉಗ್ರರು ಗುಂಡಿಕ್ಕಿ ಗಾಯಗೊಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡೌನ್ಟೌನ್ನ ಈದ್ಗಾ ಮೈದಾನದಲ್ಲಿ ಸ್ಥಳೀಯ ಯುವಕರೊಂದಿಗೆ ಇನ್ಸ್ಪೆಕ್ಟರ್ ಮನ್ಸೂರ್ ಅಹ್ಮದ್ ವಾನಿ ಕ್ರಿಕೆಟ್ ಆಡುತ್ತಿದ್ದರು.
ಈ ವೇಳೆ ಅಲ್ಲಿಗೆ ಆಗಮಿಸಿದ ಉಗ್ರರು, ವಾನಿ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಗಾಯಗೊಂಡ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಸದ್ಯ ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಬಂದೂಕು ಬಳಸಿ ಗುಂಡು ಹಾರಿಸಿಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ಉಗ್ರರ ಬಂಧನಕ್ಕಾಗಿ ನಾಕಾಬಂದಿ ಹಾಕಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
Ban; ಎಂಡಿಎಚ್, ಎವರೆಸ್ಟ್ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?