ಕಡಿಯಾಳಿ ದೇಗುಲಕ್ಕೆ ಚಿತ್ತೈಯಿಸಿದ ಶೃಂಗೇರಿ ಶ್ರೀಗಳು


Team Udayavani, Mar 4, 2023, 11:57 AM IST

4-kadiyali

ಉಡುಪಿ: ಲೌಕಿಕವಾಗಿಯೂ ಅನೇಕ ಪರೀಕ್ಷೆಗಳ ಅನಂತರ ಫಲ ದೊರಕುವಾಗ ದೇವರ ಅನುಗ್ರಹಕ್ಕೂ ಸಮಯ ಬೇಕಾಗುತ್ತದೆ. ಆರಾಧನೆಯ ಫಲ ಕೂಡಲೇ ದೊರಕದಿರಬಹುದು. ತೋರಿಕೆಯ ಪೂಜೆಯ ಬದಲು ಅಂತರ್ಯಾಮಿಯಾದ ಭಗವಂತನಿಗೆ ಗೊತ್ತಾಗುವಂತೆ ನಿರ್ಮಲ ಮನಸ್ಸಿನಿಂದ ಪೂಜೆ ಮಾಡಬೇಕು. ಈ ಮೂಲಕ ಭಗವಂತನ ಅನುಗ್ರಹಕ್ಕೆ ನಾವು ಪಾತ್ರರಾಗಬೇಕು ಎಂದು ಶ್ರೀಶೃಂಗೇರಿ ದಕ್ಷಿಣಾಮ್ನಾಯ ಪೀಠದ ಜಗದ್ಗುರು ಶ್ರೀವಿಧುಶೇಖರಭಾರತೀ ಸ್ವಾಮೀಜಿಯವರು ಹೇಳಿದರು.

ಸ್ವಾಮೀಜಿಯವರು ಕಡಿಯಾಳಿ ಶ್ರೀಮಹಿಷಮರ್ದಿನೀ ದೇವಸ್ಥಾನಕ್ಕೆ ಪ್ರಥಮ ಬಾರಿಗೆ ಶುಕ್ರವಾರ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಆಶೀರ್ವಚನ ನೀಡಿದರು.

ನಮ್ಮ ತ್ರಿಕರಣಪೂರ್ವಕ ಆರಾಧನೆಯು ದೇವರಿಗೆ ತಿಳಿದರೆ ಸಾಕು. ನಾವು ಮಾಡುವ ಆರಾಧನೆ ಜನರಿಗೆ ತಿಳಿಯದಿದ್ದರೂ ತೊಂದರೆ ಇಲ್ಲ. ದೇವರಿಗಂತೂ ತಿಳಿಯಲೇಬೇಕು. ಭಗವಂತನಿಗೆ ಅದು ತಿಳಿಯಬೇಕಾದರೆ ಅಂತಃಕರಣಪೂರ್ವಕ ಆರಾಧನೆ ಮುಖ್ಯ ಎಂದು ಸ್ವಾಮೀಜಿಯವರು ಕರೆ ನೀಡಿದರು.

ಮನುಷ್ಯ ಯಾವುದನ್ನು ಮಾಡಬೇಕು ಮತ್ತು ಯಾವುದನ್ನು ಮಾಡಬಾರದು ಎಂಬ ಬಗ್ಗೆ ವೇದಶಾಸ್ತ್ರಗಳು ತಿಳಿಸಿವೆ. ಇದನ್ನೇ ಪುಣ್ಯ ಮತ್ತು ಪಾಪಗಳೆಂದು ಕರೆಯುತ್ತೇವೆ. ವೇದಶಾಸ್ತ್ರಗಳು ತಿಳಿಸಿದಂತೆ ನಾವು ನಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ನಾವು ಚೆನ್ನಾಗಿರಬೇಕಾದರೆ ದೇವಸ್ಥಾನವೂ ಚೆನ್ನಾಗಿರಬೇಕು. ಪೂಜೆ, ಉತ್ಸವಾದಿಗಳು ಕಾಲಕಾಲದಲ್ಲಿ ನಡೆಯುತ್ತಿರಬೇಕು. ದೇವಸ್ಥಾನವನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿಪಡಿಸಿದ್ದೀರಿ. ದೇವತೆಗಳ ಪ್ರಾರ್ಥನೆಯಂತೆ ಜಗತ್ತಿನ ಕ್ಷೇಮಕ್ಕಾಗಿ ಮಹಿಷಾಸುರನನ್ನು ಸಂಹರಿಸಿದ ದೇವಿರೂಪವಿಲ್ಲಿ ಪೂಜೆಗೊಳ್ಳುತ್ತಿದೆ ಎಂದು ಸ್ವಾಮೀಜಿ ತಿಳಿಸಿದರು.

ಶೃಂಗೇರಿಯಲ್ಲಿ ಶಾರದೆಯನ್ನು ಪ್ರತಿಷ್ಠಾಪಿಸಿದ ಶ್ರೀಶಂಕರಾಚಾರ್ಯರು ನಾಲ್ಕು ದಿಕ್ಕುಗಳಲ್ಲಿ ರಕ್ಷಣೆಗಾಗಿ ದೇವಿ ಸನ್ನಿಧಾನವನ್ನು ಪ್ರತಿಷ್ಠಾಪಿಸಿದರು. ಅದರಲ್ಲಿ ಒಂದು ದುರ್ಗಾಂಬಾ ದೇವಾಲಯ. ಅರ್ಜುನನೂ ಮಹಾಭಾರತ ಯುದ್ಧದ ಮುನ್ನ ಕೃಷ್ಣನ ಸಲಹೆಯಂತೆ ದುರ್ಗಾಂಬೆಯ ತಪಸ್ಸು ಮಾಡಿ ಅನುಗ್ರಹ ಸಂಪಾದಿಸಿದ್ದ ಎಂದರು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ. ಕಟ್ಟೆ ರವಿರಾಜ ಆಚಾರ್ಯ ಅವರು ಗೌರವ ಸಲ್ಲಿಸಿ ಸ್ವಾಗತಿಸಿದರು. ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ರಾಘವೇಂದ್ರ ಕಿಣಿ ಕಾರ್ಯಕ್ರಮ ನಿರ್ವಹಿಸಿ,  ಶಾಸಕ ಕೆ.ರಘುಪತಿ ಭಟ್, ನಗರಸಭೆ ಸದಸ್ಯೆ ಗೀತಾ ಶೇಟ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಾಗೇಶ್ ಹೆಗ್ಡೆ, ಪ್ರಧಾನ ಅರ್ಚಕ ರತ್ನಾಕರ ಉಪಾಧ್ಯ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ರಮೇಶ್ ಶೇರಿಗಾರ್, ಮಂಜುನಾಥ್ ಹೆಬ್ಬಾರ್, ಶ್ರೀಮತಿ ಸಂಧ್ಯಾ ಪ್ರಭು, ಕಿಶೋರ್ ಸಾಲಿಯಾನ್, ಅರ್ಚಕರು, ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.

ಕಡಿಯಾಳಿ ದೇವಿಗೆ ಸ್ವಾಮೀಜಿಯವರು ಬೆಳ್ಳಿ ಕಾಲುದೀಪವನ್ನು ಸಮರ್ಪಿಸಿದರು. ಶುಕ್ರವಾರದ ದೇವಿಯ ಅಲಂಕಾರಕ್ಕಾಗಿ ಸೀರೆಯನ್ನು ಹಿಂದಿನ ದಿನ ಕಳುಹಿಸಿದ್ದರು. ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಭಕ್ತರು ಸೇರಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಟಾಪ್ ನ್ಯೂಸ್

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.