ಅಪರಾಧ ತಡೆಗೆ ಪೊಲೀಸರ ಹರ ಸಾಹಸ : ಜಿಲ್ಲಾ ವರಿಷ್ಠಾಧಿಕಾರಿ ಶ್ರೀನಿವಾಸಗೌಡ


Team Udayavani, Sep 3, 2020, 1:02 PM IST

ಅಪರಾಧ ತಡೆಗೆ ಪೊಲೀಸರ ಹರ ಸಾಹಸ : ಜಿಲ್ಲಾ ವರಿಷ್ಠಾಧಿಕಾರಿ ಶ್ರೀನಿವಾಸಗೌಡ

ಹಾಸನ: ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಪೊಲೀಸ್‌ ಇಲಾಖೆ ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸಿ ತಕ್ಷಣ ಸ್ಪಂದಿಸುವುದೂ ಸೇರಿದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸಜ್ಜಾಗಿದೆ ಎಂದು ಜಿಲ್ಲಾ ಪೊಲೀಸ್‌ ಮುಖ್ಯಾಧಿಕಾರಿ ಶ್ರೀನಿವಾಸಗೌಡ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಯಾವುದೇ ಸ್ಥಳದಲ್ಲಾದರೂ ಗಲಾಟೆಗಳು ನಡೆದರೆ, ಅನುಮಾನಸ್ಪದ ವ್ಯಕ್ತಿಗಳು ಕಾಣಿಸಿದರೇ ಸಾರ್ವಜನಿಕರು ಪೊಲೀಸ್‌ ಕಂಟ್ರೋಲ್‌ ರೂಂಗೆ ಕರೆ ಮಾಡಿ ಮಾಹಿತಿ ನೀಡಿದರೆ ಸಾಕು ಪೊಲೀಸ್‌ ಸಿಬ್ಬಂದಿ ತಕ್ಷಣವೇ ಕಾರ್ಯಪ್ರವೃತ್ತರಾಗುತ್ತಾರೆ.

ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದವರ ಹೆಸರನ್ನು ಹಾಗೂ ಮೊಬೈಲ್‌ ಸಂಖ್ಯೆಯನ್ನು ಗೌಪ್ಯವಾಗಿ ಇರಿಸಲಾಗುವುದು ಎಂದರು.

ಕಂಟ್ರೋಲ್‌ ರೂಂಗೆ ಮಾಹಿತಿ ನೀಡಿ: ಜಿಲ್ಲೆಯಲ್ಲಿ, ವಿಶೇಷವಾಗಿ ಚನ್ನರಾಯ ಪಟ್ಟಣದಲ್ಲಿ ನಡೆದ ಅಪರಾಧ ಪ್ರಕರಣಗಳು, ಹಾಸನದಲ್ಲಿ ನಡೆಯುತ್ತಿರುವ ಪುಂಡಾಟಿಕೆ ಪ್ರಕರಣಗಳ ಹಿನ್ನೆಲೆಯಲ್ಲಿ ಸಾರ್ವಜನಿಕರ ಸಹಕಾರ ಕೋರಿರುವ ಎಸ್ಪಿ ಶ್ರೀನಿವಾಸಗೌಡ ಅವರು, ಸಾರ್ವಜನಿಕರು ಹೆದರದೇ ಪೊಲೀಸ್‌ ಕಂಟ್ರೋಲ್‌ ರೂಂಗೆ ಮಾಹಿತಿ ನೀಡಿದರೇ ಪೊಲೀಸರು ಅಪರಾಧ ಪ್ರಕರಣಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದರು.

ಕರಪತ್ರ ಹಂಚುವ ಕ್ರಮ: ಡಕಾಯಿತರು, ದರೋಡೆಕೋರರು ಇತ್ತೀಚಿನ ದಿನಗಳಲ್ಲಿ ಸುಳಿವು ಬಿಡದಂತೆ ಎಚ್ಚರಿಕೆಯಿಂದ ದುಷ್ಕೃತ್ಯಗಳನ್ನು ಎಸಗುತ್ತಿದ್ದಾರೆ. ಮೊಬೈಲ್‌ ಗಳನ್ನೂ ಕೂಡ ಬಳಸದೇ ದುಷ್ಕೃತ್ಯ ನಡೆಸುತ್ತಿದ್ದಾರೆ. ಪೊಲೀಸ್‌ ಗುಪ್ತದಳವು ಮಾಹಿತಿ ಸಂಗ್ರಹಿಸಿಯೇ ಆರೋಪಿಗಳನ್ನು ಪತ್ತೆ ಹಚ್ಚಬೇಕಾದ ಸವಾಲು ಎದುರಿಸುತ್ತಿದೆ. ಒಂಟಿ ಮನೆ ಹಾಗೂ ತೋಟದ ಮನೆಯಲ್ಲಿ ಒಬ್ಬರು, ಇಬ್ಬರು ಇರುವ ಕಡೆ ಹೆಚ್ಚು ಮನೆಗಳ್ಳತನ ಹಾಗೂ ಇತರೆ ದುಷ್ಕೃತ್ಯಗಳು ಹೆಚ್ಚು ನಡೆಯುತ್ತಿರುವುದರಿಂದ ಸಾರ್ವಜನಿಕ ರಲ್ಲಿ ಜಾಗೃತಿ ಮೂಡಿಸಲು ಪೊಲೀಸ್‌ ಇಲಾಖೆಯಿಂದ ಕರಪತ್ರ ಹಂಚುವ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಅನುಮಾನ ಬಂದ್ರೆ ಪೊಲೀಸ್‌ಗೆ ತಿಳಿಸಿ: ಒಂಟಿಮನೆ, ತೋಟದ ಮನೆಗಳಿಗೆ ಯಾರಾದರೂ ಅಪರಿಚಿತರು ಬಂದರೇ ಯಾವುದೇ ಕಾರಣಕ್ಕೂ ಮನೆ ಬಾಗಿಲು ತೆಗೆಯಬಾರದು. ಅನುಮಾನ ಬಂದ ಕೂಡಲೇ ಪೊಲೀಸ್‌ ಕಂಟ್ರೋಲ್‌ಗೆ ಕರೆ ಮಾಡಬೇಕು. ಇನ್ನು ಬೀದಿಗಳಲ್ಲಿ ಅನುಮಾನವಾಗಿ ಸುತ್ತಾಡುವವರ ಬಗ್ಗೆ ಅಲ್ಲಿನ ನಿವಾಸಿಗಳು ತಕ್ಷಣದಲ್ಲಿ ಪೊಲೀಸ್‌ಗೆ ಮಾಹಿತಿ ಕೊಡಬೇಕು.

ಹೊಸದಾಗಿ ಮನೆ ಬಾಡಿಗೆಗೆ, ಕೆಲಸಕ್ಕೆ ಮತ್ತು ತೋಟದ ಕೆಲಸಕ್ಕೆ ಬಂದು ಕೆಲಸದ ಸಮಯದಲ್ಲೆ ಪರಿಚಿತರಾದವರ ಬಗ್ಗೆ, ಕೆಲಸ ಇಲ್ಲದಿದ್ದಾಗಲೂ ಮನೆಗೆ ಬಂದರೇ ಎಚ್ಚರದಿಂದ ಇರಬೇಕು. ಮನೆ ಬಾಗಿಲನ್ನು ತೆಗೆಯದೇ ಮನೆ ಒಳಗಿನಿಂದಲೇ ಮಾತ ನಾಡಿ ಕಳುಸಬೇಕು. ಅನುಮಾನ ಬಂದರೇ ಪೊಲೀಸರಿಗೆ ತಿಳಿಸಬೇಕು ಎಂದು ಮನವಿ ಮಾಡಿದರು.

ಸಾರ್ವಜನಿಕರು ಸದಾ ಎಚ್ಚರದಿಂದಿರಬೇಕು:
ಮದ್ಯಪಾನ ಮಾಡಿ ಗಲಾಟೆ ಮಾಡುವವರ ಬಗ್ಗೆ ಸಾರ್ವಜನಿಕರು ದೂರವಾಣಿ ಮೂಲಕ ಕರೆ ಮಾಡಿ ಮಾಹಿತಿ ನೀಡಿದರೂ ತಕ್ಷಣ ಪೊಲೀಸರು ಕ್ರಮ ಕೈಗೊಳ್ಳುವರು. ಮಾಹಿತಿ ನೀಡಿದವರ ವಿವರವನ್ನು ಯಾವ ಕಾರಣಕ್ಕೂ ಬಹಿರಂಗಪಡಿಸುವುದಿಲ್ಲ.

ಹೋಟೆಲ್‌, ಬಾರ್‌ ಅಂಡ್‌ ರೆಸ್ಟೋರೆಂಟ್‌ ಹಾಗೂ ಡಾಬಾ ಮತ್ತಿತರೆ ಕಡೆಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯುತ್ತಿದ್ದರೆ ಮಾಲೀಕರೇ ಪೊಲೀಸರಿಗೆ ಮಾಹಿತಿ ನೀಡಬೇಕು. ಇಲ್ಲದಿದ್ದರೆ ಮಾಲೀಕರ ಮೇಲೂ ಪ್ರಕರಣ ದಾಖಲಿಸಲಾಗುವುದು ಮತ್ತು ಪರವಾನಿಗೆ ರದ್ದು ಮಾಡಲಾಗುವುದು . ಕೋವಿಡ್ ನಂತರದ ತಮ್ಮ ಪರಿಸರಕ್ಕೆ ಹೊಸದಾಗಿ ಬಂದಿರುವವರ ಬಗ್ಗೆ ಸಾರ್ವಜನಿಕರು ಎಚ್ಚರದಿಂದ ಇರಬೇಕು ಎಂದು ಎಸ್ಪಿ ಶ್ರೀನಿವಾಸ ಗೌಡ ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.