ರಾಮುಲು ಮುನಿಸು: ಸುಧಾಕರ್ಗೆ ಬ್ರೇಕ್ ಹಾಕಿದ ಸಿಎಂ
Team Udayavani, Apr 4, 2020, 10:02 AM IST
ಬೆಂಗಳೂರು: ಕೋವಿಡ್ 19 ಹರಡುವುದನ್ನು ತಡೆಗಟ್ಟಲು ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದು ಕಡ್ಡಾಯ. ಆದರೆ ಕೋವಿಡ್ 19 ನಿಯಂತ್ರಣದ ವಿಷಯದಲ್ಲಿ ಇಬ್ಬರು ಸಚಿವರು ವೈಮನಸ್ಸಿನಿಂದ ಅಂತರ ಕಾಯ್ದು ಕೊಳ್ಳುತ್ತಿರುವುದು ಮುಖ್ಯಮಂತ್ರಿಗೆ ತಲೆ ನೋವಾಗಿ ಪರಿಣಮಿಸಿದೆ!
ಆರೋಗ್ಯ ಸಚಿವ ಬಿ.ಶ್ರೀ ರಾಮುಲು ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್ ನಡುವಿನ ಶೀತಲ ಸಮರದ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಇಬ್ಬರು ಸಚಿವರ ಮುಸುಕಿನ ಗುದ್ದಾಟಕ್ಕೆ ನಿಯಂತ್ರಣ ಹಾಕುವಂತೆ ಸೂಚನೆ ನೀಡಿದರು. ಇದರ ಪರಿಣಾಮ ಇಬ್ಬರೂ ಸಚಿವರನ್ನು ದೂರ ಇಟ್ಟು ಕೋವಿಡ್ 19 ಕುರಿತ ಆರೋಗ್ಯ ಮಾಹಿತಿ ಒದಗಿಸಲು ಶಿಕ್ಷಣ ಸಚಿವ ಸುರೇಶ್ ಕುಮಾರ್ಗೆ ಜವಾಬ್ದಾರಿ ವಹಿಸಿದ್ದಾರೆ.
ಶ್ರೀ ರಾಮುಲು ಮತ್ತು ಡಾ| ಸುಧಾಕರ್ ಅವರಿಗೆ ತಮ್ಮ ಇಲಾಖೆಗಳಿಗೆ ಸಂಬಂಧಿಸಿದ ವಿಷಯಗಳ ಕಡೆಗೆ ಗಮನ ಹರಿಸಲು ಸೂಚಿಸಿದ್ದು, ಆ ಮೂಲಕ ಇಬ್ಬರೂ ಸಚಿವರು ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ಮಾಡಲು ಅವಕಾಶ ಕಲ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್