ಎಸ್ಸೆಸ್ಸೆಲ್ಸಿ; ಶೇ.84.95 ಫಲಿತಾಂಶ ದಾಖಲು- ಎ ಗ್ರೇಡ್ ಪಟ್ಟಿಯಲ್ಲಿ ಸ್ಥಾನ ಪಡೆದ ಧಾರವಾಡ

29,569ರಲ್ಲಿ 25,120 ವಿದ್ಯಾರ್ಥಿಗಳು ಉತ್ತೀರ್ಣ

Team Udayavani, May 20, 2022, 10:18 AM IST

2

ಧಾರವಾಡ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆ ಶೇ.84.95 ಫಲಿತಾಂಶ ದಾಖಲಿಸುವ ಮೂಲಕ “ಎ’ ಗ್ರೇಡ್‌ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ. 2019 ಮತ್ತು 2020 ನೇ ಸಾಲಿನಲ್ಲಿ ಶೇ.74 ಫಲಿತಾಂಶ ದಾಖಲಿಸಿ ಹಿನ್ನಡೆ ಅನುಭವಿಸಿದ್ದ ಜಿಲ್ಲೆಯ ಫಲಿತಾಂಶ ಈ ವರ್ಷ ಪ್ರಗತಿ ಕಂಡಿದೆ.

ಪರೀಕ್ಷೆಗೆ ಹಾಜರಾಗಿದ್ದ 29,569 ವಿದ್ಯಾರ್ಥಿಗಳ ಪೈಕಿ 25,120 ವಿದ್ಯಾರ್ಥಿಗಳು ಪಾಸಾಗಿದ್ದರೆ, 4449 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. “ಎ’ ಪ್ಲಸ್‌ ಶ್ರೇಣಿಯಲ್ಲಿ 3151, “ಎ’ ಶ್ರೇಣಿಯಲ್ಲಿ 5877, “ಬಿ’ ಶ್ರೇಣಿಯಲ್ಲಿ 5585, “ಬಿ’ ಪ್ಲಸ್‌ ಶ್ರೇಣಿಯಲ್ಲಿ 6169, “ಸಿ’ ಶ್ರೇಣಿಯಲ್ಲಿ 817, “ಸಿ’ ಪ್ಲಸ್‌ ಶ್ರೇಣಿಯಲ್ಲಿ 3521 ವಿದ್ಯಾರ್ಥಿಗಳು ಪಾಸಾಗಿದ್ದಾರೆ.

ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಗಳು ಶೇ.85.62, ಅನುದಾನಿತ ಪ್ರೌಢಶಾಲೆಗಳು ಶೇ.88.61 ಹಾಗೂ ಅನುದಾನ ರಹಿತ ಪ್ರೌಢ ಶಾಲೆಗಳದ್ದು ಶೇ.90.13 ಫಲಿತಾಂಶ ದಾಖಲಾಗಿದೆ.

ಇನ್ನುಳಿದಂತೆ ಜಿಲ್ಲೆಯ 45 ಶಾಲೆಗಳು ಶೇ.100 ಫಲಿತಾಂಶ ದಾಖಲಿಸಿದ್ದು, 5 ಶಾಲೆಗಳು ಶೇ.5 ಹಾಗೂ ನಾಲ್ಕು ಶಾಲೆಗಳು ಶೇ.4 ಫಲಿತಾಂಶ ದಾಖಲಿಸಿವೆ. ಇನ್ನುಳಿದಂತೆ ಅಣ್ಣಿಗೇರಿಯ ನಿಂಗಮ್ಮ ಅಂಗಡಿ ಪ್ರೌಢಶಾಲೆ ಹಾಗೂ ಅದರಗುಂಚಿಯ ಎಸ್‌. ಕೆ. ಪಾಟೀಲ್‌ ಪ್ರೌಢಶಾಲೆಗಳು ಶೂನ್ಯ ಫಲಿತಾಂಶ ದಾಖಲಿಸಿವೆ.

ತಾಲೂಕು ವಾರು ಫಲಿತಾಂಶ: ಜಿಲ್ಲೆಯ 7 ತಾಲೂಕುಗಳ ಪೈಕಿ ಹುಬ್ಬಳ್ಳಿ ಶಹರ ಶೇ.91.89, ಕಲಘಟಗಿ ಶೇ.88.13, ಹುಬ್ಬಳ್ಳಿ ಗ್ರಾಮೀಣ ಶೇ.86.92, ಧಾರವಾಡ ಶಹರ ಶೇ.86.90, ಧಾರವಾಡ ಗ್ರಾಮೀಣ ಶೇ.86.84, ನವಲಗುಂದ ಶೇ.85, ಕುಂದಗೋಳ ಶೇ.84.82 ಫಲಿತಾಂಶ ದಾಖಲಿಸಿವೆ. ಹುಬ್ಬಳ್ಳಿ ಶಹರ ವ್ಯಾಪ್ತಿಯ ಚೇತನ ಪಬ್ಲಿಕ್‌ ಶಾಲೆಯ ಶಿವಾನಂದ ಬಸನಗೌಡ ಪಾಟೀಲ 625ಕ್ಕೆ 625 ಅಂಕ ಪಡೆದು ಸಾಧನೆ ಮಾಡಿದ್ದಾನೆ.

ಉಳಿದಂತೆ ಎಸ್‌ಜೆಎಸ್‌ ಸಮಿತ್ಸ ಬಾಲಕಿಯರ ಪ್ರೌಢಶಾಲೆಯ ದಿವ್ಯಾ ಪರಶುರಾಮ ಸಿ, ಧಾರವಾಡ ಶಹರ ವ್ಯಾಪ್ತಿಯ ಪವನ ಆಂಗ್ಲ ಮಾಧ್ಯಮ ಶಾಲೆಯ ಅಭಿಷೇಕ ಆರ್‌.ಎ., ಕೆ.ಇ. ಬೋರ್ಡ್‌ ಆಂಗ್ಲ ಮಾಧ್ಯಮ ಶಾಲೆಯ ರಘೋತ್ತಮ ಗಿರೀಶ ನಾಡಗೌಡ್ರ, ಸಿಂಚನಾ ದಯಾನಂದ ದಾನಗೇರಿ, ಹುಬ್ಬಳ್ಳಿ ಗ್ರಾಮೀಣದ ಡಾ|ಬಿ.ಆರ್‌. ಅಂಬೇಡ್ಕರ್‌ ಬಾಲಕಿಯರ ರೆಸಿಡೆನ್ಸಿಯಲ್‌ ಶಾಲೆಯ ಚೇತನಾ ಯಲ್ಲಪ್ಪ ಮಣಕವಾಡ 625ಕ್ಕೆ 624 ಅಂಕ ಪಡೆದಿದ್ದಾರೆ.

ಹುಬ್ಬಳ್ಳಿ ಶಹರ ವ್ಯಾಪ್ತಿಯ ಕಾನ್ವೆಂಟ್‌ ಪ್ರೌಢ ಶಾಲೆಯ ಭವನ ಕಠಾರೆ, ಡಾ| ಜಿ.ವಿ. ಜೋಶಿ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಮಧುಶ್ರೀ ಎಸ್‌. ಶಿವಳ್ಳಿ, ಬೆನಕ ವಿದ್ಯಾ ಮಂದಿರ ಆಂಗ್ಲಮಾಧ್ಯಮ ಶಾಲೆಯ ಸುಚಿತ್ರಾ ಕೆ., ಧಾರವಾಡ ಶಹರ ವ್ಯಾಪ್ತಿಯ ಪ್ರಜೆಟೇಶನ್‌ ಗರ್ಲ್ಸ್‌ ಸ್ಕೂಲ್‌ನ ಸಯೀದಾ ಫರೀಫಾ ಸಿಮ್ರಾನ್‌ ಮದನಿ, ಜೆಎಸ್‌ಎಸ್‌ ಆಂಗ್ಲ ಮಾಧ್ಯಮ ಶಾಲೆಯ ನಿಖೀತಾ ಉಪ್ಪಾರ, ಕೆ.ಇ.ಬೋರ್ಡ್‌ ಆಂಗ್ಲ ಮಾಧ್ಯಮ ಶಾಲೆಯ ಭಾಗ್ಯಶ್ರೀ ಬಿರಾದಾರ, ಹುಬ್ಬಳ್ಳಿ ಗ್ರಾಮೀಣದ ನವನಗರ ರೋಟರಿ ಆಂಗ್ಲಮಾಧ್ಯಮ ಶಾಲೆಯ ಸಂಕಲ್ಪ ಎಸ್‌.ಕೆ. 625ಕ್ಕೆ 623 ಅಂಕ ಪಡೆದಿದ್ದಾರೆ.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.