ಹುಣಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ
Team Udayavani, Mar 31, 2023, 10:33 AM IST

ಹುಣಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಆರಂಭವಾಗಿದ್ದು, ತಾಲೂಕಿನಿಂದ 26 ವಿಕಲಚೇತನ ವಿದ್ಯಾರ್ಥಿಗಳು ಸೇರಿ 3852 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯುತ್ತಿದ್ದಾರೆ.
ನಗರ ಸೇರಿದಂತೆ ಪರೀಕ್ಷಾ ಸಿದ್ದತೆ ಕುರಿತು ಮಾಹಿತಿ ನೀಡಿದ ಬಿಇಓ ರೇವಣ್ಣ ತಾಲೂಕಿನ 15 ಪರೀಕ್ಷಾ ಕೇಂದ್ರಗಳಲ್ಲಿ, 1857 ಗಂಡು, 1995 ಬಾಲಕಿಯರು ಸೇರಿ ಒಟ್ಟು 3852 ವಿದ್ಯಾರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆ ಎದುರಿಸುತ್ತಿದ್ದಾರೆ.
ಎಲ್ಲಾ 15 ಕೇಂದ್ರಗಳಲ್ಲೂ ಮೊಬೈಲ್ ಸ್ವಾಧಿನಾಧಿಕಾರಿಗಳು ಇರಲಿದ್ದಾರೆ.
6 ರೂಟ್ ಗಳಲ್ಲಿ ಮಾರ್ಗಾಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ ನಿಗದಿತ ವೇಳೆಯಲ್ಲಿ ಪರೀಕ್ಷಾಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ತಲುಪಿಸಲಿದ್ದಾರೆ.
198 ಮಂದಿ ಕೊಠಡಿ ಮೇಲ್ವಿಚಾರಕರು, 15 ಸಿಟ್ಟಿಂಗ್ ಸ್ವಾಡ್ (ಸ್ಥಾನಿಕ ಜಾಗೃತ ದಳ) ನಿಯೋಜಿಸಲಾಗಿದೆ. ಎಲ್ಲಾ ಕೇಂದ್ರಗಳ ಕಾರಿಡಾರ್ ಗಳಲ್ಲಿ ಸಿ.ಸಿ.ಕ್ಯಾಮರಾ ಅಳವಡಿಸಿದ್ದು. ಇದರಿಂದ ಚಲನವಲನ ಗಮನಿಸಲು ನೆರವಾಗಲಿದೆ.
ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತ 500 ಮೀಟರ್ ಅಂತರದಲ್ಲಿರುವ ಜೆರಾಕ್ಸ್ ಸೆಂಟರ್ ಗಳನ್ನು ಮುಚ್ಚಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಹೀಗಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನಲ್ಲಿರುವ ಜೆರಾಕ್ಸ್ ಅಂಗಡಿಗಳನ್ನು ಏ.15ರ ವರೆಗೆ ಮುಚ್ಚಲು ಅಂಗಡಿ ಮಾಲಿಕರಿಗೆ ಸೂಚನೆ ನೀಡಲಾಗಿದೆ.
ಅಲ್ಲದೆ ಈ ಬಾರಿ ಗುರುಪುರದಿಂದ ಹನಗೋಡಿನ ಪರೀಕ್ಷಾ ಕೆಂದ್ರಕ್ಕೆ ತೆರಳಬೇಕಾಗಿತ್ತು. ನಿಗದಿತ ಸಮಯದಲ್ಲಿ ತಲುಪಲು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದುದ್ದನ್ನು ಮನಗಂಡು ನಲ್ಲೂರು ಪಾಲ ಮತ್ತು ಗುರುಪುರ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ಗುರುಪುರ ಪ್ರೌಢ ಶಾಲೆಯಲ್ಲಿ ಹೊಸ ಕೇಂದ್ರ ತೆರೆಯಲಾಗಿದೆ.
ನಿಗದಿತ ವೇಳೆಯಲ್ಲಿ ಪರೀಕ್ಷೆಗೆ ಹಾಜರಾಗಲು ನೆರವಾಗುವ ಸಲುವಾಗಿ ಕೆ.ಎಸ್.ಆರ್.ಟಿ.ಸಿ.ವತಿಯಿಂದ ಐದು ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಉದಯವಾಣಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

Mangaluru Airport bomb case; ಆದಿತ್ಯ ರಾವ್ ವಿರುದ್ಧ ಜೈಲು ಅಧಿಕಾರಿಗಳ ದೂರು