SSLC ಪರೀಕ್ಷಾ ಅಕ್ರಮ: ಇಬ್ಬರು ಶಿಕ್ಷಕರ ಅಮಾನತು
Team Udayavani, Mar 25, 2024, 10:21 PM IST
ಬೆಂಗಳೂರು/ವಿಜಯಪುರ: ಸೋಮವಾರ ಆರಂಭವಾದ ಎಸೆಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿದ ಆರೋಪದಲ್ಲಿ ಇಬ್ಬರು ಹಾಗೂ ನಿಷ್ಕಾಳಜಿ ತೋರಿದ ಆರೋಪದಲ್ಲಿ ಓರ್ವ ಸಹಿತ ಮೂವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಉಳಿದಂತೆ ಪರೀಕ್ಷೆ ಸುಗಮವಾಗಿ ನಡೆದಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್ಇಎಬಿ) ಹೇಳಿದೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಏವೂರ ಸರಕಾರಿ ಹಿರಯ ಪ್ರಾಥಮಿಕ ಶಾಲೆ ಶಿಕ್ಷಕ ಸಾಹೇಬಗೌಡ ಉಕ್ಕಾಲಿ ಹಾಗೂ ಝಂಡದಕೇರಾ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಹಣಮಂತ್ರಾಯ ಅವರು ವಿದ್ಯಾರ್ಥಿಗಳು ಪರೀಕ್ಷಾ ಅಕ್ರಮ ಎಸಗಲು ಸಹಕರಿಸಿದ ಆರೋಪ ಹೊತ್ತಿದ್ದು, ವೆಬ್ ಕಾಸ್ಟಿಂಗ್ನಲ್ಲಿ ಪರಿಶೀಲಿಸಿದ ಅಧಿಕಾರಿಗಳು ಅವರಿಬ್ಬರನ್ನು ಅಮಾನುತು ಮಾಡಿದ್ದಾರೆ.
ವಿಜಯಪುರದಲ್ಲಿ ಪರೀಕ್ಷಾ ಅಕ್ರಮದಲ್ಲಿ ತೊಡಗಿದ್ದ ವಿದ್ಯಾರ್ಥಿಯೊಬ್ಬನನ್ನು ಡಿಬಾರ್ ಮಾಡಲಾಗಿದೆ.
ಕರ್ತವ್ಯ ಲೋಪ; ಶಿಕ್ಷಕ ಅಮಾನತು
ಸೋಮವಾರ ಇಂಡಿ ಪಟ್ಟಣದ ಸಾಯಿ ಪಬ್ಲಿಕ್ ಶಾಲೆಯಲ್ಲಿ ನಡೆದ ಎಸೆಸೆಲ್ಸಿ ಕನ್ನಡ ಪರೀಕ್ಷೆಯಲ್ಲಿ ಕರ್ತವ್ಯದಲ್ಲಿ ನಿಷ್ಕಾಳಜಿ ತೋರಿದ ಆರೋಪದಲ್ಲಿ ತಾಲೂಕಿನ ಚೋರಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ರಾಜಶೇಖರ ಬಂಡಿ ಅವರನ್ನು ಅಮಾನತು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ