ಭರದಿಂದ ಸಾಗಿದೆ ಹಿಂಗಾರು ಬಿತ್ತನೆ


Team Udayavani, Nov 19, 2021, 10:19 AM IST

3agriculture

ಆಳಂದ: ಪ್ರಸಕ್ತ ಸಾಲಿನಲ್ಲಿ ಅತಿಯಾದ ಮಳೆ ಆಗಿದ್ದಕ್ಕಾಗಿ ಬೆಳೆ ಕೈಗೆ ಬಾರದಂತಾಗಿದ್ದು, ಈಗ ಹಿಂಗಾರು ಹಂಗಾಮಿಗೆ ಕಾಯ್ದಿಟ್ಟ ಜಮೀನಿನಲ್ಲಿ ತಾಲೂಕಿನಾದ್ಯಂತ ಬಿತ್ತನೆ ಕಾರ್ಯ ಭರದಿಂದ ಸಾಗಿದೆ.

ಹಿಂಗಾರು ಹಂಗಾಮಿನಲ್ಲಿ ಪ್ರಮುಖವಾಗಿ ಖುಷ್ಕಿ ಪ್ರದೇಶದಲ್ಲಿ ಜೋಳ, ಕಡಲೆ, ಕುಸಬೆ ಸೇರಿದಂತೆ ಇನ್ನಿತರ ಬಿತ್ತನೆ ಕಾರ್ಯವನ್ನು ಕೆಲವು ರೈತರು ಕೈಗೊಂಡಿದ್ದಾರೆ. ಹಿಂಗಾರಿನ ನೀರಾವರಿ ಬೆಳೆ ಶೇಂಗಾ, ಕಡಲೆ, ಕುಸಬೆ, ಗೋಧಿ ಬಿತ್ತನೆಗೆ ರೈತರು ಮುಂದಾಗಿದ್ದಾರೆ.

ಈ ಬಾರಿಯಾದರೂ ಹಿಂಗಾರಿನ ಬೆಳೆ ಉತ್ತಮವಾಗಿ ಬೆಳೆದು, ಫಸಲು ಕೈಸೇರಲಿ ಎನ್ನುವ ಆಶಾಭಾವನೆಯೊಂದಿಗೆ ಕೃಷಿಕರು ಕಸರತ್ತು ಆರಂಭಿಸಿದ್ದಾರೆ. ಈಗಾಗಲೇ ಕೃಷಿ ಇಲಾಖೆ ಅಂದಾಜಿನಂತೆ ಅತಿಯಾದ ಮಳೆ ಹಾಗೂ ಆರಂಭದಲ್ಲಿ ಮಳೆ ಕೊರತೆಯಿಂದ ಸುಮಾರು 43 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿನ ತೊಗರಿ, ಉದ್ದು, ಹೆಸರು ಸೋಯಾಬಿನ್‌, ಕಬ್ಬು ಸೇರಿದಂತೆ ತೋಟಗಾರಿಕೆಯ ಬಾಳೆ, ಪಪ್ಪಾಯಿ, ಹಣ್ಣು, ತರಕಾರಿ ಬೆಳೆಗಳು ಹಾನಿಗೀಡಾಗಿವೆ.

ಹಾನಿಯಾದ ಬೆಳೆಗಳಿಗೆ ಪರಿಹಾರದ ನಿರೀಕ್ಷೆಯಲ್ಲಿರುವ ರೈತರು, ಹಿಂಗಾರು ಬಿತ್ತನೆಗೆ ಬೀಜ, ಗೊಬ್ಬರ ಖರೀದಿಸಲು, ಕೂಲಿಯಾಳಿಗೆ ಕೂಲಿ ನೀಡಲು ಹಾಗೂ ಕುಟುಂಬ ನಿರ್ವಹಣೆಗಾಗಿ ರೈತರು ಸರ್ಕಾರಿ, ಸಾಹುಕಾರಿ, ಖಾಸಗಿ ಬ್ಯಾಂಕ್‌ಗಳಲ್ಲಿ ಸಾಲಕ್ಕಾಗಿ ಮೊರೆ ಹೋಗಿದ್ದಾರೆ. ಫಲವತ್ತಾಗಿ ತೊಗರಿ ಬೆಳೆ ಬರುವ ನಿರೀಕ್ಷೆಯಲ್ಲಿದ್ದ ರೈತರಿಗೀಗ ಮೋಡ ಕವಿದ ವಾತಾವರಣ, ಮಳೆ ಈ ನಿರೀಕ್ಷೆಯನ್ನು ಹುಸಿ ಮಾಡುವಂತೆ ಕಾಣತೊಡಗಿದೆ.

ಇದನ್ನೂ ಓದಿ:ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪಿಸಿವಿ ಲಸಿಕೆ ವಿತರಣೆ

ಇದರಿಂದ ರೈತರು ಆತಂಕಕ್ಕೊಳಗಾಗಿದ್ದಾರೆ. ಅಲ್ಲದೇ ಶೇ. 40ರಷ್ಟು ರೈತರು ಕಳೆದ ಸಾಲಿನಲ್ಲಿ ಉತ್ಪಾದನೆಯಾದ ತೊಗರಿಗೆ ನಿರೀಕ್ಷಿತ ಬೆಲೆ ದೊರಕಿಲ್ಲವೆಂದು ತಮ್ಮ ಮನೆಯಲ್ಲೇ ಇಟ್ಟುಕೊಂಡಿದ್ದಾರೆ. ಜತೆಗೆ ಜೊತೆಗೆ ಈ ಬಾರಿ ಬೆಳೆದ ಸೋಯಾಬಿನ್‌ ಧಾನ್ಯಕ್ಕೂ ಸಮರ್ಪಕ ಬೆಲೆ ದೊರಕಿಲ್ಲ. ಈಗ ವಿಧಿಯಿಲ್ಲದೇ ಹಿಂಗಾರು ಹಂಗಾಮಿನಲ್ಲಿ ಬಿತ್ತನೆ ಕಾರ್ಯಕ್ಕೆ ಮುಂದಾಗಿದ್ದಾರೆ. ಅಲ್ಲದೇ ಕೃಷಿ ಚಟುವಟಿಕೆ ವೆಚ್ಚ ದುಬಾರಿಯಾದ ಹಿನ್ನೆಲೆಯಲ್ಲಿ ಎತ್ತುಗಳಿಗೆ ವಿದಾಯ ಹೇಳಿರುವ ರೈತರು ಟ್ರ್ಯಾಕ್ಟರ್‌ಗಳ ಮೂಲಕ ಬಿತ್ತನೆ ಹಾಗೂ ರಾಶಿಗೆ ಮುಂದಾಗಿದ್ದಾರೆ.

ಆಳಂದ ತಾಲೂಕಿನ ಐದು ಹೋಬಳಿ ಕೇಂದ್ರದಲ್ಲಿ ಒಟ್ಟು ಹಿಂಗಾರು 70913 ಹೆಕ್ಟೇರ್‌ ಗುರಿಯ ಪೈಕಿ 62156 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಇದುವರೆಗೂ ಶೇ. 88ರಷ್ಟು ಪ್ರಮುಖವಾಗಿ ಜೋಳ, ಮೆಕ್ಕೆಜೋಳ, ಗೋಧಿ, ಕಡಲೆ, ಸೂರ್ಯಕಾಂತಿ, ಕುಸಬೆ, ಶೇಂಗಾ ಬಿತ್ತನೆಯಾಗಿದೆ. ಖಜೂರಿ ವಲಯದಲ್ಲಿ 14521 ಹೆಕ್ಟೇರ್‌ ಪೈಕಿ 12823 ಹೆಕ್ಟೇರ್‌, ಆಳಂದ 13976 ಹೆಕ್ಟೇರ್‌ ಪೈಕಿ 12216 ಹೆಕ್ಟೇರ್‌, ನಿಂಬರ್ಗಾ 14218 ಹೆಕ್ಟೇರ್‌ ಪೈಕಿ 12381 ಹೆಕ್ಟೇರ್‌, ನರೋಣಾ 14506 ಹೆಕ್ಟೇರ್‌ ಪೈಕಿ 12733 ಹೆಕ್ಟೇರ್‌, ಮಾದನಹಿಪ್ಪರಗಾ ವಲಯ 13692 ಹೆಕ್ಟೇರ್‌ ಪೈಕಿ 12003 ಹೆಕ್ಟೇರ್‌ ಬಿತ್ತನೆ ಆಗಿದೆ. ಇನ್ನು ಶೇ. 12ರಷ್ಟು ಬಿತ್ತನೆ ನಡೆಯಲಿದೆ. -ಶರಣಗೌಡ ಪಾಟೀಲ, ಸಹಾಯಕ ಕೃಷಿ ನಿರ್ದೇಶಕ

ಸದ್ಯ ಕೃಷಿ ಆದಾಯವಿಲ್ಲ. ತೊಗರಿ ಗೊಡ್ಡು ಬಿದ್ದು, ನೀರತ್ತಿ ಹೋಗಿದೆ. ಮುಂದಿನ ವರ್ಷಕ್ಕೆ ಮತ್ತೆ ಸಾಲಮಾಡಬೇಕು. ಹೀಗಾಗಿ ಸಾಲದಲ್ಲೇ ಮುಳುಗುವಂತೆ ಆಗಿದೆ. ಕಾರ್ಮಿಕರ ಕೂಲಿ ಹೆಚ್ಚಾಗಿದೆ. ಉದ್ಯೋಗ ಖಾತ್ರಿ ಕೂಲಿ ಹೆಚ್ಚಿದೆ. ಆದರೆ ರೈತರಿಗೆ ಈ ಕೂಲಿ ಕೊಡಲು ಆಗಲ್ಲ. ಬೆಳೆದ ಬೆಳೆಗೆ ಬೆಲೆ ಸಿಕ್ಕರೆ ಹೆಚ್ಚಿನ ಕೂಲಿ ಕೊಡಬಹುದು. ಕೇಂದ್ರದ ಕೃಷಿ ಕಾನೂನು ಒಳ್ಳೆಯದೇ ಆಗಿದೆ. ಪೂರ್ಣ ಓದಿದ್ದೇನೆ. ಆದರೆ ಕಾಂಗ್ರೆಸ್ಸಿಗರು ವಿನಾಹ ಕಾರಣ ವಿರೋ ಧಿಸುತ್ತಿದ್ದಾರೆ. ಅಡತಗಳಲ್ಲಿ ಹೇಗೆ ಧಾನ್ಯ ಬಿಸಾಡುತ್ತಾರೆ, ಕಡಿತ ಮಾಡುತ್ತಾರೆ ಎನ್ನುವುದನ್ನು ತೋರಿಸುತ್ತೇನೆ. ಹೊಲಗಳಿಗೆ ರಸ್ತೆ ಸಮಸ್ಯೆ ಆಗುತ್ತಿದೆ. ನನ್ನ ಬಾಳೆ ಬೆಳೆ ಹಾನಿಯಾಗಿದೆ. ಕಡಿಮೆ ಬೆಲೆಗೆ ಮಾರುತ್ತಿದ್ದೇನೆ. ಕಬ್ಬು ಪೂರೈಕೆಯಲ್ಲೂ ಗೊಂದಲವಿದೆ. ಕಟಾವಿಗೆ ಹಣಕೊಡಬೇಕು. -ಬಸವರಾಜ ಸಾಣಕ್‌, ರೈತ, ನಿಂಬಾಳ

-ಮಹಾದೇವ ವಡಗಾಂವ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.