ಉಡುಪಿ ಜಿಲ್ಲೆಯಲ್ಲಿ ವಾಣಿಜ್ಯ ಚಟುವಟಿಕೆ ಶುರು

ಜಿಲ್ಲಾಡಳಿತ ನಿಯಮದಂತೆ ಅಂಗಡಿಗಳಲ್ಲಿ ವಹಿವಾಟು ;ಸಹಜ ಸ್ಥಿತಿಗೆ ಮರಳುತ್ತಿರುವ ಜನಜೀವನ

Team Udayavani, May 5, 2020, 6:11 AM IST

ಜಿಲ್ಲೆಯಲ್ಲಿ ವಾಣಿಜ್ಯ ಚಟುವಟಿಕೆ ಶುರು

ಉಡುಪಿ: ರಾಜ್ಯ ಸರಕಾರ ಹಸುರು ವಲಯ ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಸಡಿಲಿಕೆ ಮಾಡಿರುವುದರಿಂದಾಗಿ ಉಡುಪಿ ಜಿಲ್ಲೆಯಲ್ಲಿ ವಾಣಿಜ್ಯ ಚಟುವಟಿಕೆಗಳು ಶೇ.70ರಷ್ಟು ಆರಂಭಗೊಂಡಿವೆ.ಅದರಂತೆ ಹೆಚ್ಚುವರಿಯಾಗಿ ಎಲೆಕ್ಟ್ರಾನಿಕ್ಸ್‌, ಚಿನ್ನದಂಗಡಿ, ಬಟ್ಟೆ ಮಳಿಗೆಗಳು, ಮದ್ಯದ ಅಂಗಡಿಗಳು ತೆರೆದುಕೊಂಡಿದ್ದವು. ಜಿಲ್ಲಾಡಳಿತ ನಿಯಮದಂತೆ ಅಂಗಡಿಗಳು ಕಾರ್ಯಾಚರಿಸಿವೆ.

ವ್ಯಾಪಾರ ಕಡಿಮೆ
ಚಿನ್ನದ ಅಂಗಡಿ, ಬಟ್ಟೆಬರೆಗಳು, ಚಪ್ಪಲಿ ಅಂಗಡಿಗಳು ತೆರೆದುಕೊಂಡಿತ್ತಾದರೂ ವ್ಯಾಪಾರ ಕಡಿಮೆಯಿತ್ತು. ನಿಗದಿತ ಅವಧಿಯ ವ್ಯಾಪಾರವಾದ್ದರಿಂದ ಜನರು ಅಗತ್ಯ ವಸ್ತುಗಳತ್ತಲೇ ಧಾವಿಸುತ್ತಿದ್ದರು. ಪೂರ್ಣ ಪ್ರಮಾಣದಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಿದರಷ್ಟೇ ವಹಿವಾಟು ಚೇತರಿಕೆ ಕಾಣಲು ಸಾಧ್ಯ ಎನ್ನುತ್ತಾರೆ ವ್ಯಾಪಾರಿಗಳು.

ಟ್ರಾಫಿಕ್‌, ಬ್ಲಾಕ್‌
ನಗರದಲ್ಲಿ ಜನಸಂದಣಿ ಹೆಚ್ಚಿತ್ತು. ಬಹುತೇಕ ಅಂಗಡಿ, ಕಚೇರಿಗಳು ತೆರೆದಿದ್ದವು. ಕಲ್ಸಂಕ, ಕೆ.ಎಂ.ಮಾರ್ಗ ಸಹಿತ ಎಲ್ಲ ರಸ್ತೆಗಳಲ್ಲಿಯೂ ವಾಹನ ದಟ್ಟನೆಯಿಂದಾಗಿ ಟ್ರಾಫಿಕ್‌ ದಟ್ಟನೆ ಉಂಟಾಯಿತು. ಕಾರುಗಳು, ರಿಕ್ಷಾ, ದ್ವಿಚಕ್ರ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆಗೆ ಇಳಿದಿದ್ದವು. ಬಸ್‌ಗಳ ಸಂಚಾರ, ಮಾಲ್‌ಗ‌ಳು, ಸೆಲೂನ್‌ಗಳು, ಬ್ಯೂಟಿ ಪಾರ್ಲರ್‌ಗಳು, ಹೊಟೇಲ್‌ಗ‌ಳು ಬಂದ್‌ ಆಗಿದ್ದವು.

ಕುಂದಾಪುರ
ಜಿಲ್ಲಾಡಳಿತ ನಿಯಮದಂತೆ ಅಂಗಡಿಗಳು ತೆರೆದಿದ್ದವು. ಶೋರೂಂ ಒಳಗೆ ಕೇವಲ 10 ಮಂದಿ ಗ್ರಾಹಕರನ್ನಷ್ಟೇ ಬಿಟ್ಟು, ಹೊರಗಡೆ ಸಾಮಾಜಿಕ ಅಂತರ ಕಾಪಾಡಿ ಸರದಿಯಲ್ಲಿ ಗ್ರಾಹಕರು ನಿಂತಿದ್ದರು. ಜನರ ಓಡಾಟ ಲಾಕ್‌ಡೌನ್‌ಗಿಂತ ಹಿಂದಿನ ಮಾದರಿಯಲ್ಲೇ ಇತ್ತು.

ಬ್ರಹ್ಮಾವರ
ಬ್ರಹ್ಮಾವರ: ಮಧ್ಯಾಹ್ನ ವರೆಗೆ ಉತ್ತಮ ವಹಿವಾಟು ನಡೆದಿದೆ. ಅಂಗಡಿಗಳಲ್ಲಿ ಜನ ಹೆಚ್ಚಿದ್ದರು. ಬ್ಯಾಂಕ್‌, ಸಹಕಾರಿ ಸಂಘಗಳಲ್ಲೂ ಜನ ಹೆಚ್ಚಿದ್ದರು. ಖಾಸಗಿ ಕಚೇರಿಗಳು ತೆರೆದಿದ್ದವು. ಕುಂಜಾಲು ಜಂಕ್ಷನ್‌ನ ಸರ್ಕಲ್‌ನಿಂದ ತಾಲೂಕು ಕಚೇರಿ, ರಥಬೀದಿಯಲ್ಲಿ ಟ್ರಾಫಿಕ್‌ ಜಾಮ್‌ ಸಮಸ್ಯೆ ತಲೆದೋರಿತ್ತು.

ಕೋಟ
ಕೋಟ: ಗ್ರಾಮಾಂತರ ಪ್ರದೇಶದ ಹೆಚ್ಚಿನ ಜನ ಪೇಟೆಗೆ ಬಂದಿದ್ದರು. ವಾಹನ ಸಂಚಾರ ಏರಿಕೆಯಾಗಿತ್ತು. ವಸ್ತುಗಳ ಖರೀದಿಯಲ್ಲಿ ಮೈಮರೆತ ಜನರು ಸಾಮಾಜಿಕ ಅಂತರ, ಮಾಸ್ಕ್ ಗಳ ಬಳಕೆ ಮರೆತಂತೆ ಕಂಡು ಬಂತು.

ಅಜೆಕಾರು
ಅಜೆಕಾರು: ಹೆಚ್ಚಿನ ಸಂಖ್ಯೆಯಲ್ಲಿ ಜನ ಸಾಮಗ್ರಿಗಳ ಖರೀದಿ ಮಾಡಿದರು. ಖಾಸಗಿ ವಾಹನ, ಆಟೋ ಓಡಾಟ ಇತ್ತು. ಜನ ವಿವಿಧ ಕೆಲಸಗಳಲ್ಲಿ ತೊಡಗಿಸಿ ಕೊಂಡಿದ್ದರು. ಜಿಲ್ಲಾ ಗಡಿ ಭಾಗದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದರೂ ಅಜೆಕಾರು, ಅಂಡಾರು, ಶಿರ್ಲಾಲ್‌ ಗ್ರಾಮಗಳಿಗೆ ಮಂಗಳೂರು, ಪುತ್ತೂರು, ಮಡಿಕೇರಿ, ಮುಂಬಯಿಯಿಂದ ಪೊಲೀಸರ ಗಮನಕ್ಕೆ ಬಾರದೆ ಜನ ಬರುತ್ತಿರುವುದು ಸ್ಥಳೀಯರ ನೆಮ್ಮದಿ ಕೆಡುವಂತೆ ಮಾಡಿದೆ.

ಮಲ್ಪೆ
ಮಲ್ಪೆ: ಬಿಕೋ ಎನ್ನುತ್ತಿದ್ದ ಮಲ್ಪೆ ನಗರದ ಕೆಲವು ರಸ್ತೆಗಳಲ್ಲಿ ಸೋಮವಾರ ವಾಹನ ಮತ್ತು ಜನ ಸಂಚಾರ ಕಂಡು ಬಂತು. ಮೀನು ಮಾರಾಟ, ದಿನಸಿ ಅಂಗಡಿಗಳು ಎಂದಿನಂತೆ ಕಾರ್ಯಾಚರಣೆ ನಡೆಸಿವೆ. ವಿವಿಧ ಅಂಗಡಿಗಳು ತೆರೆದುಕೊಂಡಿದ್ದವು.

ಪ್ರಯೋಜನ
ಜಿಲ್ಲೆಯಲ್ಲಿ ಲಾಕ್‌ಡೌನ್‌ ಸಡಿಲಿಕೆ ಯನ್ನು ಹೆಚ್ಚುವರಿ ಯಾಗಿ ವಿಸ್ತರಿಸಿರು ವುದರಿಂದಾಗಿ ಜನರಿಗೆ ಸಹಕಾರವಾಗಿದೆ. ಈ ಹಿಂದೆ 11 ಗಂಟೆಯವರೆಗೆ ಬಹಳಷ್ಟು ರಶ್‌ ಆಗುತ್ತಿತ್ತು. ಸಡಿಲಿಕೆಯಿಂದ ಆ ಪ್ರಮಾಣ ತಕ್ಕ ಮಟ್ಟಿಗೆ ಕಡಿಮೆಯಾಗಿದೆ.
-ಗಣೇಶ್‌ ಶೆಟ್ಟಿ, ಕೀಳಿಂಜೆ

ಸಮಯ ಸಾಲದು
ಸಮಯ ಸಡಿಲಿಕೆ ಮತ್ತಷ್ಟು ವಿಸ್ತರಣೆ ಆಗಬೇಕು. ಈಗಿನ ಸಮಯಾವಕಾಶ ಸಾಲದು. ಚಟು ವಟಿಕೆಗಳನ್ನು ನಡೆಸಲು ಕಷ್ಟವಾಗುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಎಲ್ಲ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಬೇಕು.
-ರಾಘವೇಂದ್ರ ಪೈ, ಬನ್ನಂಜೆ

ಕ್ಷೌರದಂಗಡಿ ಇರಲಿ
ಮದ್ಯದಂಗಡಿ ಗಳಿಗೆ ಅನುಮತಿ ಕಲ್ಪಿಸಿದಂತೆ ಕ್ಷೌರದಂಗಡಿ ಗಳಿಗೂ ಅನುಮತಿ ನೀಡಬೇಕಿತ್ತು. ಇದಕ್ಕೆ ಬೇಕಿರುವಂತಹ ನಿಯಮಾವಳಿಗಳನ್ನು ಜಿಲ್ಲಾಡಳಿತ ಆದಷ್ಟು ಬೇಗನೆ ಸಿದ್ಧಪಡಿಸಿದರೆ ಒಳ್ಳೆಯದಿತ್ತು.
-ಜನಾರ್ದನ ಕೆಂಬಾವಿ, ಉಡುಪಿ

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.