ಬಿಡಿಎ ನಿವೇಶನಗಳ ಸಕ್ರಮಕ್ಕೂ ಲಾಬಿ ಶುರು


Team Udayavani, May 20, 2020, 5:34 AM IST

bda-nive

ಬೆಂಗಳೂರು: ಬಿಡಿಎ ವ್ಯಾಪ್ತಿಯ ಅಕ್ರಮ-ಸಕ್ರಮಕ್ಕೆ ರಾಜಕಾರಣಿಗಳ ಲಾಬಿ ಶುರುವಾಗಿದ್ದು, ಇದು ಸರ್ಕಾರಕ್ಕೆ ಹೊಸ ತಲೆನೋವಾಗಿ ಪರಿಣಮಿಸಿದೆ. ಆರ್ಥಿಕ ಸಂಕಷ್ಟ ಹಿನ್ನೆಲೆಯಲ್ಲಿ ಅಕ್ರಮ-ಸಕ್ರಮಕ್ಕಾಗಿ  ಕಾಯ್ದೆಗೆ ತಿದ್ದುಪಡಿ ತಂದು  ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಇದೇ ಸಂದರ್ಭ ಬಳಸಿಕೊಂಡು ತಮ್ಮ ನಿವೇಶನಗಳನ್ನೂ ಸಕ್ರಮಗೊಳಿಸಿಕೊಳ್ಳಲು ಸ್ಥಳೀಯ ರಾಜಕೀಯ ನಾಯಕರಿಂದ ಇನ್ನಿಲ್ಲದ ಕಸರತ್ತು ನಡೆದಿದ್ದು, ಈ  ಸಂಬಂಧ ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ.

ಬಿಡಿಎ ಬಡಾವಣೆಗಳಿಗಾಗಿ ಸ್ವಾಧೀನಪಡಿಸಿಕೊಂಡ ಜಮೀನುಗಳಲ್ಲಿನ ಒತ್ತುವರಿ ಪ್ರಕರಣಗಳಲ್ಲಿ ಪಕ್ಷಾತೀತವಾಗಿ ನಗರದ ಶಾಸಕರು, ಪಾಲಿಕೆ ಸದಸ್ಯರಿಗೆ ಸೇರಿವೆ. ಆ ಪೈಕಿ ದೊಡ್ಡ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಹಾಗೂ ಖಾಲಿ ನಿವೇಶನಗಳೇ ಹೆಚ್ಚಿವೆ. ಈ ಹಿನ್ನೆಲೆಯಲ್ಲಿ 50×80 ವಿಸ್ತೀರ್ಣದ ಕಟ್ಟಡಗಳಿಗಷ್ಟೇ ಸಕ್ರಮ ಸೀಮಿತಗೊಳಿಸಬಾರದು. ಅದಕ್ಕಿಂತ ಹೆಚ್ಚಿನ ವಿಸ್ತೀರ್ಣಕ್ಕೂ ವಿಸ್ತರಿಸಬೇಕು.

ದಂಡದ ರೂಪದಲ್ಲಿ ನಿಗದಿಪಡಿಸಿರುವ ಮಾರ್ಗಸೂಚಿ ದರದ ಶೇ. 40 ಮೊತ್ತ ಕಡಿಮೆ ಮಾಡಬೇಕು ಎಂಬ ಒತ್ತಡವೂ ಇದೆ. ತಮ್ಮ ನಿವೇಶನ, ಕಟ್ಟಡಗಳ ಬೇಡಿಕೆ ಇಡುವುದರ ಜತೆಗೆ ಸಾರ್ವಜನಿಕರ ಹಿತದೃಷ್ಟಿ ಎಂದು 20×30 ಹಾಗೂ  30×40 ವಿಸ್ತೀರ್ಣದಲ್ಲಿ ಮನೆ ನಿರ್ಮಿಸಿಕೊಂಡಿರುವವರಿಗೆ ವಿಧಿಸಲು ನಿರ್ಧರಿಸಿರುವ ದಂಡ ರೂಪದ ಶುಲ್ಕವನ್ನೂ ಕಡಿಮೆ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗಿದೆ.

ಪ್ರಸ್ತುತ ಬಿಡಿಎ ವ್ಯಾಪ್ತಿಯಲ್ಲಿ 20×30 ಹಾಗೂ  30×40 ನಿವೇಶನಗಳಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ವಾಸದ ಮನೆಗಳಿಗೆ ಮಾರ್ಗಸೂಚಿ ದರದ ಶೇ.10 ಹಾಗೂ ಶೇ.20 ರಷ್ಟು ದಂಡದ ರೂಪದಲ್ಲಿ ಪಡೆದು ಸಕ್ರಮಗೊಳಿಸುವುದು. 40×60 ಹಾಗೂ 50×80 ವಿಸ್ತೀರ್ಣದಲ್ಲಿ  ನಿರ್ಮಿಸಿರುವ ಕಟ್ಟಡಗಳನ್ನು ಶೇ. 40ರಷ್ಟು ಮಾರ್ಗಸೂಚಿ ದರ ಪಡೆದು ಸಕ್ರಮಗೊಳಿಸುವುದು.

ಖಾಲಿ ನಿವೇಶನನ ಹಾಗೂ 50×80 ವಿಸ್ತೀರ್ಣಕ್ಕಿಂತ ಮೇಲ್ಪಟ್ಟ ಜಾಗದಲ್ಲಿ ನಿರ್ಮಿಸಿರುವ ಕಟ್ಟಡಗಳ ಸಕ್ರಮ ಮಾಡಬಾರದು ಎಂದು  ನಿರ್ಧರಿಸಲಾಗಿದೆ. ಬಿಡಿಎ ವ್ಯಾಪ್ತಿಯಲ್ಲಿ 75 ಸಾವಿರ ನಿವೇಶನಗಳು ಈ ರೀತಿ ಅಕ್ರಮ ಎಂದು ಗುರುತಿಸಲಾಗಿದ್ದು, ಒಟ್ಟಾರೆ ಆರು ಸಾವಿರ ಎಕರೆ ಪ್ರದೇಶ ಎಂದು ಅಂದಾಜು ಮಾಡಲಾಗಿದೆ. ಈ ಅಕ್ರಮ ಸಕ್ರಮದಿಂದ 25 ಸಾವಿರ ಕೋಟಿ  ರೂ. ಆದಾಯ ರಾಜ್ಯ ಸರ್ಕಾರ ನಿರೀಕ್ಷಿಸಿದೆ.

ಬಿಬಿಎಂಪಿ ಅಕ್ರಮಕ್ಕೂ ಜೀವ: ಈ ಮಧ್ಯೆ ಬಿಡಿಎ ವ್ಯಾಪ್ತಿ  ಯಲ್ಲಿನ ಅಕ್ರಮ-ಸಕ್ರಮಕ್ಕೆ ಸರ್ಕಾರ ಮುಂದಾಗುತ್ತಿದ್ದಂತೆ ಬಿಬಿಎಂಪಿ ವ್ಯಾಪ್ತಿಯ ಅಕ್ರಮ-ಸಕ್ರಮಕ್ಕೂ ಜೀವ ಬಂದಿದ್ದು, ಪಾಲಿಕೆಯು ಆರ್ಥಿಕ ಸಂಕಷ್ಟದಲ್ಲಿದ್ದು ಅಕ್ರಮ- ಸಕ್ರಮ ಜಾರಿ ಮಾಡಿದರೆ 5ರಿಂದ 10 ಸಾವಿರ ಕೋಟಿ ರೂ. ವರಮಾನ ಸಂಗ್ರಹವಾಗಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು ಆರು ಲಕ್ಷ ಕಂದಾಯ ನಿವೇಶನ, ಕಟ್ಟಡಗಳು, ಬೈಲಾ ಉಲ್ಲಂಘನೆ ಕಟ್ಟಡಗಳು ಅಕ್ರಮ-ಸಕ್ರಮ ವ್ಯಾಪ್ತಿಗೆ  ಬರಲಿದ್ದು,

ಈ ಹಿಂದೆ ಸಂಪುಟ ಉಪ ಸಮಿತಿ ರಚನೆಯಾಗಿ ದಂಡ ಶುಲ್ಕ ಸಹ ನಿಗದಿಗೊಳಿಸಿತ್ತು. ಆದರೆ, ಪ್ರಕರಣ ನ್ಯಾಯಾಲಯ ಮೆಟ್ಟಿಲು ಹತ್ತಿದ ಕಾರಣ ಸ್ಥಗಿತಗೊಂಡಿತ್ತು. ಇದೀಗ ಸರ್ಕಾರ ಮಧ್ಯಪ್ರವೇಶಿಸಿ ನ್ಯಾಯಾಲಯದಲ್ಲಿನ  ಪ್ರಕರಣ ಶೀಘ್ರ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಬೇಕು ಎಂಬ ಒತ್ತಡ ಹಾಕಲಾಗುತ್ತಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಏನು ಕ್ರಮ ಕೈಗೊಳ್ಳಬಹುದು ಎಂಬ ಬಗ್ಗೆ ಪರಿಶೀಲಿಸುವಂತೆ ನಗರಾಭಿವೃದಿಟಛಿ ಹಾಗೂ ಕಾನೂನು ಇಲಾಖೆಗೆ  ಮುಖ್ಯಮಂತ್ರಿಯವರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಸಂಪುಟದಲ್ಲಿ ಎಪಿಎಂಸಿ, ಬಿಡಿಎ ಹಾಗೂ ನಗರ ಯೋಜನೆ ತಿದ್ದುಪಡಿ ಕಾಯ್ದೆಗೆ ಸುಗ್ರೀವಾಜ್ಞೆ ತರಲು ತೀರ್ಮಾನಿಸಲಾಗಿತ್ತು. ಎಪಿಎಂಸಿ ಕಾಯ್ದೆ ರಾಜ್ಯಪಾಲರಿಗೆ ಕಳುಹಿಸಿ ಅಂಗೀಕಾರ ಪಡೆಯಲಾಗಿದೆ. ಬಿಡಿಎ ಸೇರಿ ಉಳಿದ ಎರಡು  ಸುಗ್ರೀವಾಜ್ಞೆ ಇನ್ನೂ ಕಳುಹಿಸಿಲ್ಲ. ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ.
-ಜೆ.ಸಿ. ಮಾಧುಸ್ವಾಮಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ

* ಎಸ್‌.ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.