Adi Dravida ಮನೆಯಲ್ಲೊಬ್ಬ ಪದವೀಧರ ಸೃಷ್ಟಿಸುವ ಸಂಕಲ್ಪ ಮಾಡಿ: ಸಚಿವ ಡಾ. ಜಿ. ಪರಮೇಶ್ವರ್‌

ರಾಜ್ಯ ಆದಿದ್ರಾವಿಡ ಸಮಾವೇಶ

Team Udayavani, Dec 24, 2023, 11:08 PM IST

Adi Dravida ಮನೆಯಲ್ಲೊಬ್ಬ ಪದವೀಧರ ಸೃಷ್ಟಿಸುವ ಸಂಕಲ್ಪ ಮಾಡಿ: ಸಚಿವ ಡಾ. ಜಿ. ಪರಮೇಶ್ವರ್‌

ಮಂಗಳೂರು: ಒಂದು ಹೊತ್ತು ಊಟ ಬಿಟ್ಟರೂ ಪರವಾಗಿಲ್ಲ, ಮನೆ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು. ಪ್ರತಿ ಮನೆಯಲ್ಲಿ ಒಬ್ಬರು ಪದವೀಧರ ಇರಬೇಕು ಎನ್ನುವ ಸಂಕಲ್ಪ ಮಾಡಬೇಕು ಎಂದು ಗೃಹಸಚಿವ ಡಾ| ಜಿ. ಪರಮೇಶ್ವರ್‌ ಹೇಳಿದರು.

ರಾಜ್ಯ ಆದಿದ್ರಾವಿಡ ಸಮಾಜ ಸೇವಾಸಂಘದ ವತಿಯಿಂದ ನಗರದಲ್ಲಿ ರವಿವಾರ ನಡೆದ ರಾಜ್ಯ ಆದಿದ್ರಾವಿಡ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಾನೂ ಆದಿ ದ್ರಾವಿಡ
ನಾನೂ ಆದಿ ದ್ರಾವಿಡ ಸಮುದಾಯಕ್ಕೆ ಸೇರಿದವನು. ಇಷ್ಟು ದಿನ ನಾವು ಘಟ್ಟದ ಮೇಲೆ – ನೀವು ಘಟ್ಟದ ಕೆಳಗೆ ಪ್ರತ್ಯೇಕವಾಗಿದ್ದೆವು. ನೀವು ಅಲ್ಲಿಗೆ ಬಂದಿಲ್ಲ – ನಾವು ಇಲ್ಲಿಗೆ ಬಂದಿಲ್ಲ. ಆದರೆ ಇಂದು ನಮ್ಮ ಸಂಬಂಧ ಗಟ್ಟಿಯಾಗಿದೆ. ರಾಜ್ಯದಲ್ಲಿರುವುದು ನಿಮ್ಮ ಸಮುದಾಯಕ್ಕೆ ಸೇರಿದ ಗೃಹ ಸಚಿವ. ಇನ್ಮುಂದೆ ನಿಮ್ಮ ಸಮಸ್ಯೆಯೇ ನನ್ನ ಸಮಸ್ಯೆ ಎಂದರು.

ವಿ.ಸಭೆಯಲ್ಲಿ ಧ್ವನಿ: ಕಾಮತ್‌
ಸಮಾವೇಶ ಉದ್ಘಾಟಿಸಿದ ಶಾಸಕ ಡಿ. ವೇದವ್ಯಾಸ ಕಾಮತ್‌ ಮಾತನಾಡಿ, ಆದಿ ದ್ರಾವಿಡ ಸಮುದಾಯದವರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ವಿಧಾನಸಭೆಯಲ್ಲಿ ಧ್ವನಿಯಾಗುವೆ ಎಂದರು.

ಸಂಘದ ರಾಜ್ಯಾಧ್ಯಕ್ಷ ಶಿವಾನಂದ ಬಳ್ಳಾಲ್ ಬಾಗ್‌ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಭಾಗೀರಥಿ ಮುರುಳ್ಯ, ಹರೀಶ್‌ ಪೂಂಜ, ವಿಧಾನ ಪರಿಷತ್‌ ಸದಸ್ಯರಾದ ಹರೀಶ್‌ ಕುಮಾರ್‌, ಮಂಜುನಾಥ ಭಂಡಾರಿ, ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು, ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ವಿಪಕ್ಷ ನಾಯಕ ಪ್ರವೀಣ್‌ ಚಂದ್ರ ಆಳ್ವ, ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕ ಜೆ.ಆರ್‌.ಲೋಬೋ, ವಿಧಾನ ಪರಿಷತ್‌ ಮಾಜಿ ಸದಸ್ಯ ಐವನ್‌ ಡಿ’ಸೋಜಾ, ಕಾಂಗ್ರೆಸ್‌ ಮುಖಂಡರಾದ ಮಿಥುನ್‌ ರೈ, ಯು.ಟಿ. ಇಫ್ತಿಕರ್‌ ಅಲಿ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯ ಸಂಘಟನ ಸಂಚಾಲಕ ಪ್ರೇಮನಾಥ ಬಳ್ಳಾಲ್‌ಬಾಗ್‌ ಸ್ವಾಗತಿಸಿದರು. ಉಸ್ತುವಾರಿ ಗಣೇಶ್‌ ಪ್ರಸಾದ್‌ ಪ್ರಸ್ತಾವಿಸಿದರು. ರೋಹಿತ್‌ ಉಳ್ಳಾಲ್ ನಿರೂಪಿಸಿದರು.

ನಿಗಮ ಮಂಡಳಿಗೆ ಅಧ್ಯಕ್ಷಗಿರಿ
ಸಮುದಾಯದ ಪ್ರಮುಖ ಬೇಡಿಕೆಯಾಗಿರುವ ತೋಡಾರು ಮೂಲ ಕ್ಷೇತ್ರದ ಜೀರ್ಣೋದ್ಧಾರಕ್ಕೆ ಸಂಬಂಧಿಸಿ ಬೇಕಾದ ಅನುದಾನನ್ನು ಸಿಎಂ ಮನವೊಲಿಸಿ ಮುಂದಿನ ಬಜೆಟ್‌ನಲ್ಲಿ ಸರಕಾರದಿಂದ ಕೊಡಿಸುವುದಕ್ಕೆ ಪ್ರಯತ್ನ ಮಾಡುತ್ತೇನೆ. ಯಾವುದಾದರೂ ನಿಗಮ ಮಂಡಳಿಗೆ ಆದಿದ್ರಾವಿಡ ಸಮುದಾಯದ ಒಬ್ಬರನ್ನು ಅಧ್ಯಕ್ಷರನ್ನಾಗಿ ಮಾಡಲಾಗುವುದು. ಜಾತಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಇರುವ ಸಮಸ್ಯೆಯನ್ನು ಸರಿಪಡಿಸಲಾಗುವುದು. ವಸತಿ ಯೋಜನೆಗೆ ಸರಕಾರಿ ಜಾಗವನ್ನು ಮೀಸಲಾಗಿಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಪರಮೇಶ್ವರ್‌ ತಿಳಿಸಿದರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.