KGF ನಲ್ಲಿ ಚಿನ್ನದ ಗಣಿಗಾರಿಕೆ ರಾಜ್ಯ ಹಿಂದೇಟು- ಕೇಂದ್ರದ ಅನುಮತಿಗೆ ರಾಜ್ಯ ಸರಕಾರದಿಂದ ತಡೆ
Team Udayavani, Feb 1, 2024, 10:55 PM IST
ಬೆಂಗಳೂರು: ಹಲವು ದಶಕಗಳಿಂದ ಮುಚ್ಚಿದ್ದ ಕೆಜಿಎಫ್ನಲ್ಲಿ ಮತ್ತೆ ಗಣಿಗಾರಿಕೆಗೆ ಅವಕಾಶ ನೀಡಲು ಕೇಂದ್ರ ಸರಕಾರ ಉತ್ಸುಕವಾಗಿದ್ದರೂ ರಾಜ್ಯ ಸರಕಾರ ಹಿಂದೇಟು ಹಾಕಿದೆ. ಕೇಂದ್ರ ಸರಕಾರ ಅನುಮತಿ ಕೊಟ್ಟರೂ, ರಾಜ್ಯ ಸರಕಾರ ಒಪ್ಪುತ್ತಿಲ್ಲ.
ರಾಯಚೂರಿನ ಹಟ್ಟಿ ಚಿನ್ನದ ಗಣಿಯಿಂದ ವಾರ್ಷಿಕ 2-3 ಟನ್ ಮಾತ್ರ ಚಿನ್ನ ಉತ್ಪಾದನೆ ಆಗುತ್ತಿದ್ದು, 900-1000 ಟನ್ ಚಿನ್ನವನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಚಿನ್ನದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಸಲುವಾಗಿ ಕೆಜಿಎಫ್ಗೆ ಮರುಜೀವ ನೀಡಬಹುದು ಎಂದು ಕೇಂದ್ರ ಖನಿಜ ಸಚಿವಾಲಯ ಅಭಿಪ್ರಾಯಪಟ್ಟಿತ್ತು. ಭಾರತೀಯ ಸ್ಟೇಟ್ ಬ್ಯಾಂಕ್ ಮೂಲಕ ಅಗತ್ಯ ಆರ್ಥಿಕ ನೆರವಿನ ಭರವಸೆಯನ್ನೂ ನೀಡಿತ್ತು.
ಅದರಂತೆ ಗಣಿ ಗುತ್ತಿಗೆ ಅವಧಿ ಮುಕ್ತಾಯಗೊಂಡಿದ್ದ ಭಾರತ್ ಚಿನ್ನದ ಗಣಿ ಸಂಸ್ಥೆ ಬಿಜಿಎಂಎಲ್ನಿಂದ ಆವೃತಗೊಂಡಿರುವ ಕೋಲಾರದ ಕೆಜಿಎಫ್ ಸುತ್ತಮುತ್ತಲಿನ 1,300 ಎಕ್ರೆ ಪ್ರದೇಶದಲ್ಲಿ ಲಭ್ಯವಿರುವ ಟೈಲಿಂಗ್ ಡಂಪ್ಗ್ಳಿಗೆ ಗಣಿ ಮತ್ತು ಖನಿಜ (ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯ್ದೆ-1957ರ ಕಲಂ 17ರ ಅನ್ವಯ ಕೇಂದ್ರ ಸರಕಾರದಿಂದ ಗಣಿ ಚಟುವಟಿಕೆಗಳನ್ನು ಕೈಗೊಳ್ಳಲು ಅನುಮತಿ ಕೊಡಲಾಗಿದೆ.
ಆದರೆ ಗುರುವಾರ ರಾಜ್ಯ ಸಚಿವ ಸಂಪುಟ ಸಭೆಯ ಮುಂದೆ ಬಂದಿದ್ದ ಈ ವಿಚಾರವನ್ನು ಮುಂದೂಡುವ ಮೂಲಕ ಕೇಂದ್ರದ ಅನುಮತಿಗೆ ರಾಜ್ಯ ಸರಕಾರ ತಡೆಯೊಡ್ಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ