
ರಾಜ್ಯ ಸರಕಾರದ ಕಮಿಷನ್ ಶೇ.80ಕ್ಕೆ: ಟ್ವೀಟ್ ಮೂಲಕ ಕುಟುಕಿದ ಕಾಂಗ್ರೆಸ್
Team Udayavani, Feb 1, 2023, 9:35 PM IST

ಬೆಂಗಳೂರು: ಅಧಿಕಾರಾವಧಿ ಮುಗಿಯುವ ಹಂತಕ್ಕೆ ಬರುತ್ತಿರುವಂತೆಯೇ ಬಿಜೆಪಿ ಕರ್ನಾಟಕ ಸರಕಾರದ ಕಮಿಷನ್ ದರ ಶೇ.40ರಿಂದ ಶೇ. 80 ಆಗಿದೆಯೇ ಬಸವರಾಜ ಬೊಮ್ಮಾಯಿ ಅವರೇ? ಮತ್ತೆ ಅಧಿಕಾರ ಸಿಗದು, ಈಗಲೇ ಸಾಧ್ಯವಾದಷ್ಟು ಲೂಟಿ ಮಾಡುವ ತುರಾತುರಿಯೇ ಎಂದು ಪ್ರಶ್ನಿಸಿ ಕಾಂಗ್ರೆಸ್ ಟ್ವೀಟ್ ಮೂಲಕ ಬಿಜೆಪಿಯನ್ನು ಕುಟುಕಿದೆ.
ಕಾಮಗಾರಿ ನಡೆದು ಮೂರೇ ತಿಂಗಳಲ್ಲಿ ಕಿತ್ತು ಹೋಗಿರುವ ಕಳಸ ತಾಲೂಕಿನ ಕಾಂಕ್ರೀಟ್ ರಸ್ತೆ ಕಮಿಷನ್ ದರ ಏರಿಕೆಯ ಕತೆ ಹೇಳುತ್ತಿದೆ. ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿರುವುದು ಬೆಳಗಾವಿಯಲ್ಲೋ ಅಥವಾ ಉತ್ತರ ಪ್ರದೇಶದಲ್ಲೋ ? ಬಿಜೆಪಿಯದ್ದು ಹಿಂದಿ ಪ್ರೇಮವೋ, ಅಥವಾ ಹೈಕಮಾಂಡಿನ ಹಿಂದಿ ಹೇರಿಕೆಯೋ, ಕನ್ನಡದ ಕಗ್ಗೊಲೆ ಮಾಡಿ ಶತಾಯ ಗತಾಯ ಕರ್ನಾಟಕವನ್ನು ಹಿಂದಿ ರಾಜ್ಯ ಮಾಡುವುದು ಬಿಜೆಪಿಯ ಗುಪ್ತ ಅಜೆಂಡಾದಲ್ಲೊಂದು ಎಂದು ಕಾಂಗ್ರೆಸ್ ಗುರುತರ ಆರೋಪ ಮಾಡಿದೆ.
ಧಾರವಾಡದ ಕೃಷಿ ವಿವಿಯ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ರೈತರ ಪ್ರತಿಭಟನೆ ಎದುರಿಸಿದ್ದಾರೆ. ಡಬಲ್ ಎಂಜಿನ್ ಸರಕಾರ ಎನ್ನುವ ಬಿಜೆಪಿ ಇದುವರೆಗೂ ಬೆಳೆ ಹಾನಿ ಪರಿಹಾರ ನೀಡದೆ ರೈತರನ್ನು ವಂಚಿಸಿದೆ. ವಿಫಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಇದು ಆರಂಭವಷ್ಟೇ. ಇನ್ನು ಮುಂದೆ ನೀವು ಹೋದಲ್ಲೆಲ್ಲ ಜನಾಕ್ರೋಶ ಎದುರಿಸುವುದು ನಿಶ್ಚಿತ. ರೈತ ವಿರೋಧಿ ಬಿಜೆಪಿ ಎಂದು ಟೀಕಿಸಿದೆ.
ಹೈಕೋರ್ಟ್ ಛೀಮಾರಿ:
ಉತ್ಸವಗಳಿಗೆ ಕೋಟಿ ಕೋಟಿ ರೂ. ಖರ್ಚು ಮಾಡುವ ಸರಕಾರ ಮಕ್ಕಳಿಗೆ ಶೂ, ಸಮವಸ್ತ್ರ ನೀಡುವುದಿಲ್ಲ ಎಂದು ಹೈಕೋರ್ಟ್ ಛೀಮಾರಿ ಹಾಕಿರುವುದನ್ನು ತನ್ನ ಟ್ವೀಟ್ ಖಾತೆಯಲ್ಲಿ ಉಲ್ಲೇಖೀಸಿರುವ ಕಾಂಗ್ರೆಸ್,
ಶಾಲೆ ಗೋಡೆಗಳಿಗೆ ಕೇಸರಿ ಬಣ್ಣ ಹೊಡೆಯಲು ಇರುವ ಹಣ ಮಕ್ಕಳಿಗೆ ಶೂ, ಸಾಕ್ಸ್ ನೀಡಲು ಇಲ್ಲವೇ ಬಸವರಾಜ ಬೊಮ್ಮಾಯಿ ಅವರೇ? ಒಂದೂ ಜನಪರ ಯೋಜನೆ ರೂಪಿಸಲಿಲ್ಲ, ನಮ್ಮ ಸರಕಾರದ ಜನಪರ ಯೋಜನೆಗಳನ್ನೂ ಉಳಿಸಲಿಲ್ಲ. ಬಿಜೆಪಿಯ ಸಾಧನೆಯಾದರೂ ಏನು ಎಂದು ಕಾಂಗ್ರೆಸ್ ಗಂಭೀರವಾಗಿ ಪ್ರಶ್ನಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಚುನಾವಣಾ ಅಕ್ರಮ ಆರೋಪ: ಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ

ಶಿಕ್ಷಕರ ವರ್ಗಾವಣೆ ಚೆಂಡು ಚುನಾವಣ ಆಯೋಗದ ಅಂಗಣಕ್ಕೆ
MUST WATCH
ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ದೊಡ್ಡಣಗುಡ್ಡೆ ‘ಭವಾನಿ ರೆಸಿಡೆನ್ಸಿ’ ವಸತಿ ಸಮುಚ್ಚಯ ಮಾ. 31ರಂದು ಉದ್ಘಾಟನೆ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!