ರಾಜ್ಯ ಸರಕಾರದ ಕಮಿಷನ್ ಶೇ.80ಕ್ಕೆ: ಟ್ವೀಟ್ ಮೂಲಕ ಕುಟುಕಿದ ಕಾಂಗ್ರೆಸ್
Team Udayavani, Feb 1, 2023, 9:35 PM IST
ಬೆಂಗಳೂರು: ಅಧಿಕಾರಾವಧಿ ಮುಗಿಯುವ ಹಂತಕ್ಕೆ ಬರುತ್ತಿರುವಂತೆಯೇ ಬಿಜೆಪಿ ಕರ್ನಾಟಕ ಸರಕಾರದ ಕಮಿಷನ್ ದರ ಶೇ.40ರಿಂದ ಶೇ. 80 ಆಗಿದೆಯೇ ಬಸವರಾಜ ಬೊಮ್ಮಾಯಿ ಅವರೇ? ಮತ್ತೆ ಅಧಿಕಾರ ಸಿಗದು, ಈಗಲೇ ಸಾಧ್ಯವಾದಷ್ಟು ಲೂಟಿ ಮಾಡುವ ತುರಾತುರಿಯೇ ಎಂದು ಪ್ರಶ್ನಿಸಿ ಕಾಂಗ್ರೆಸ್ ಟ್ವೀಟ್ ಮೂಲಕ ಬಿಜೆಪಿಯನ್ನು ಕುಟುಕಿದೆ.
ಕಾಮಗಾರಿ ನಡೆದು ಮೂರೇ ತಿಂಗಳಲ್ಲಿ ಕಿತ್ತು ಹೋಗಿರುವ ಕಳಸ ತಾಲೂಕಿನ ಕಾಂಕ್ರೀಟ್ ರಸ್ತೆ ಕಮಿಷನ್ ದರ ಏರಿಕೆಯ ಕತೆ ಹೇಳುತ್ತಿದೆ. ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿರುವುದು ಬೆಳಗಾವಿಯಲ್ಲೋ ಅಥವಾ ಉತ್ತರ ಪ್ರದೇಶದಲ್ಲೋ ? ಬಿಜೆಪಿಯದ್ದು ಹಿಂದಿ ಪ್ರೇಮವೋ, ಅಥವಾ ಹೈಕಮಾಂಡಿನ ಹಿಂದಿ ಹೇರಿಕೆಯೋ, ಕನ್ನಡದ ಕಗ್ಗೊಲೆ ಮಾಡಿ ಶತಾಯ ಗತಾಯ ಕರ್ನಾಟಕವನ್ನು ಹಿಂದಿ ರಾಜ್ಯ ಮಾಡುವುದು ಬಿಜೆಪಿಯ ಗುಪ್ತ ಅಜೆಂಡಾದಲ್ಲೊಂದು ಎಂದು ಕಾಂಗ್ರೆಸ್ ಗುರುತರ ಆರೋಪ ಮಾಡಿದೆ.
ಧಾರವಾಡದ ಕೃಷಿ ವಿವಿಯ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ರೈತರ ಪ್ರತಿಭಟನೆ ಎದುರಿಸಿದ್ದಾರೆ. ಡಬಲ್ ಎಂಜಿನ್ ಸರಕಾರ ಎನ್ನುವ ಬಿಜೆಪಿ ಇದುವರೆಗೂ ಬೆಳೆ ಹಾನಿ ಪರಿಹಾರ ನೀಡದೆ ರೈತರನ್ನು ವಂಚಿಸಿದೆ. ವಿಫಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಇದು ಆರಂಭವಷ್ಟೇ. ಇನ್ನು ಮುಂದೆ ನೀವು ಹೋದಲ್ಲೆಲ್ಲ ಜನಾಕ್ರೋಶ ಎದುರಿಸುವುದು ನಿಶ್ಚಿತ. ರೈತ ವಿರೋಧಿ ಬಿಜೆಪಿ ಎಂದು ಟೀಕಿಸಿದೆ.
ಹೈಕೋರ್ಟ್ ಛೀಮಾರಿ:
ಉತ್ಸವಗಳಿಗೆ ಕೋಟಿ ಕೋಟಿ ರೂ. ಖರ್ಚು ಮಾಡುವ ಸರಕಾರ ಮಕ್ಕಳಿಗೆ ಶೂ, ಸಮವಸ್ತ್ರ ನೀಡುವುದಿಲ್ಲ ಎಂದು ಹೈಕೋರ್ಟ್ ಛೀಮಾರಿ ಹಾಕಿರುವುದನ್ನು ತನ್ನ ಟ್ವೀಟ್ ಖಾತೆಯಲ್ಲಿ ಉಲ್ಲೇಖೀಸಿರುವ ಕಾಂಗ್ರೆಸ್,
ಶಾಲೆ ಗೋಡೆಗಳಿಗೆ ಕೇಸರಿ ಬಣ್ಣ ಹೊಡೆಯಲು ಇರುವ ಹಣ ಮಕ್ಕಳಿಗೆ ಶೂ, ಸಾಕ್ಸ್ ನೀಡಲು ಇಲ್ಲವೇ ಬಸವರಾಜ ಬೊಮ್ಮಾಯಿ ಅವರೇ? ಒಂದೂ ಜನಪರ ಯೋಜನೆ ರೂಪಿಸಲಿಲ್ಲ, ನಮ್ಮ ಸರಕಾರದ ಜನಪರ ಯೋಜನೆಗಳನ್ನೂ ಉಳಿಸಲಿಲ್ಲ. ಬಿಜೆಪಿಯ ಸಾಧನೆಯಾದರೂ ಏನು ಎಂದು ಕಾಂಗ್ರೆಸ್ ಗಂಭೀರವಾಗಿ ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ