ಮತ್ತೆ ಸೀಲ್‌ಡೌನ್‌ನತ್ತ ರಾಜ್ಯ? ಜನರಿಂದಲೇ ಸ್ವಯಂಪ್ರೇರಿತ ನಿರ್ಬಂಧ


Team Udayavani, Jun 22, 2020, 6:40 AM IST

ಮತ್ತೆ ಸೀಲ್‌ಡೌನ್‌ನತ್ತ ರಾಜ್ಯ? ಜನರಿಂದಲೇ ಸ್ವಯಂಪ್ರೇರಿತ ನಿರ್ಬಂಧ

ಬೆಂಗಳೂರು: ನಿತ್ಯ ಬೆಳಕಿಗೆ ಬರುತ್ತಿರುವ ಸೋಂಕು ಮತ್ತು ಸೋಂಕು ಪೀಡಿತರ ಸಾವು ಜನರಲ್ಲಿ ಆತಂಕ ಸೃಷ್ಟಿಸುತ್ತಿದೆ. ಇದರಿಂದ ರಾಜ್ಯವು ಮತ್ತೆ “ಅನಧಿಕೃತ ಸೀಲ್‌ಡೌನ್‌’ ನತ್ತ ಮುಖ ಮಾಡುತ್ತಿದೆ!

ಕೋವಿಡ್-19 ಹೆಚ್ಚು ದಾಖಲಾಗುತ್ತಿ ರುವ ಪ್ರದೇಶಗಳಲ್ಲಿ ಜನರೇ ಸ್ವಯಂ ಪ್ರೇರಿತವಾಗಿ ಸೀಲ್‌ಡೌನ್‌ ಮಾಡುತ್ತಿ ದ್ದಾರೆ. ಮನೆಗಳಿಂದ ಹೊರಬೀಳುವು ದನ್ನು ಕಡಿಮೆ ಮಾಡುತ್ತಿದ್ದಾರೆ. ಹೊರಗಿನವರು ಬಾರದಂತೆ ಕಾವಲು ಕಾಯುತ್ತಿದ್ದಾರೆ. ಬೆಂಗಳೂರು, ಕನಕ ಪುರ ಸೇರಿದಂತೆ ಹಲವು ಕಡೆಗಳಲ್ಲಿ ಇಂಥ ಬೆಳವಣಿಗೆ ಕಂಡುಬರುತ್ತಿದೆ.

ಇದುವರೆಗೆ ಜನ ಸುದೀರ್ಘ‌ ಲಾಕ್‌ಡೌನ್‌ ಕಂಡಿದ್ದರು. ಅದು ತೆರವಾದ ಬೆನ್ನಲ್ಲೇ ದಾಖಲಾಗುತ್ತಿರುವ ಸೋಂಕು ಮತ್ತು ಸಾವಿನ ಪ್ರಕರಣಗಳ ಭಾರೀ ಹೆಚ್ಚಳ ಬೆಚ್ಚಿಬೀಳಿಸುತ್ತಿದೆ. ಲಾಕ್‌ಡೌನ್‌ ಅವಧಿಯಲ್ಲೇ ವಾತಾವರಣ ಉತ್ತಮ ವಾಗಿತ್ತು ಎಂಬ ಅಭಿಪ್ರಾಯ ಸಾರ್ವ ಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ. ಒಂದು ವೇಳೆ ಸೋಂಕಿನ ಸರಣಿ ಇದೇ ವೇಗದಲ್ಲಿ ಸಾಗಿದರೆ ರಾಜ್ಯ ಮತ್ತೆ ಸೀಲ್‌ಡೌನ್‌ನತ್ತ ಮುಖ ಮಾಡಿದರೂ ಅಚ್ಚರಿ ಇಲ್ಲ.

9 ಸಾವಿರ ದಾಟಿದ ಸೋಂಕುಪೀಡಿತರು
ರಾಜ್ಯದಲ್ಲಿ ಕೋವಿಡ್-19 ಸೋಂಕುಪೀಡಿತರ ಸಂಖ್ಯೆ 9 ಸಾವಿರ ದಾಟಿದೆ. ರವಿವಾರ ಮತ್ತೆ 453 ಪ್ರಕರಣಗಳು ಪತ್ತೆಯಾಗಿದ್ದು, ಐವರು ಮೃತಪಟ್ಟಿದ್ದಾರೆ. ಸದ್ಯ 3,391 ಸಕ್ರಿಯ ಪ್ರಕರಣಗಳಿದ್ದು, 5,618 ಮಂದಿ ಗುಣಮುಖರಾಗಿದ್ದಾರೆ. ಅತ್ಯಂತ ಆಘಾತಕಾರಿ ಅಂಶವೆಂದರೆ, ರಾಜಧಾನಿ ಬೆಂಗಳೂರಿನಲ್ಲೇ ರವಿವಾರವೇ 196 ಪ್ರಕರಣಗಳು ಕಾಣಿಸಿಕೊಂಡಿವೆ.

ನಿತ್ಯ 300 ಪ್ರಕರಣ; 4 ಸಾವು!
ದೇಶಾದ್ಯಂತ ಜೂನ್‌ 8ರಿಂದ ಲಾಕ್‌ಡೌನ್‌ ತೆರವಾದರೆ ರಾಜ್ಯವು ಮೇ 18ರಿಂದಲೇ ನಿರ್ಬಂಧಗಳಿಂದ ತೆರವಾಗಿದೆ. ಆ ಬಳಿಕ ಸೋಂಕುಪೀಡಿತರ ಸಂಖ್ಯೆ ಕೈಮೀರುತ್ತಿದೆ. ರವಿವಾರ 453 ಪ್ರಕರಣಗಳು ದೃಢಪಟ್ಟಿದ್ದು, ಜೂ.1ರಿಂದ ಇದುವರೆಗೆ ಅಂದರೆ ಕೇವಲ 20 ದಿನಗಳ ಅಂತರದಲ್ಲಿ ರಾಜ್ಯದಲ್ಲಿ ಪ್ರತೀ ದಿನ ಸರಾಸರಿ 300 ಪ್ರಕರಣಗಳು ದಾಖಲಾಗಿದ್ದು, ನಿತ್ಯ 4ರಿಂದ 5 ಜನರು ಸಾವನ್ನಪ್ಪಿದ್ದಾರೆ.

15 ಸಾವಿರ ಹೆಚ್ಚಳ
ಹೊಸದಿಲ್ಲಿ: ದೇಶದ ಮಟ್ಟದಲ್ಲಿ ಶನಿವಾರ ಬೆಳಗ್ಗೆಯಿಂದ ರವಿವಾರ ಬೆಳಗ್ಗೆ 8 ಗಂಟೆಯ ವರೆಗೆ ಸೋಂಕುಪೀಡಿತರ ಸಂಖ್ಯೆ 15 ಸಾವಿರ ದಷ್ಟು ಹೆಚ್ಚಳವಾಗಿದೆ. ಇತ್ತೀಚೆಗೆ ದಿನವೂ 10 ಸಾವಿರಕ್ಕಿಂತ ಹೆಚ್ಚು ಪ್ರಕರಣಗಳು ಕಾಣಿಸಿಕೊಳ್ಳುತ್ತಿರುವುದು ತೀರಾ ಆತಂಕ ಉಂಟು ಮಾಡಿದೆ.

ಈ ಮೊದಲು ಸೋಂಕುಪೀಡಿತ ಪ್ರಕರಣಗಳಲ್ಲಿ ಶೇ. 90ರಷ್ಟು ಹೊರಗಿನಿಂದ ಬಂದವರೇ ಆಗಿದ್ದರು. ಆದರೆ ಕಳೆದ ಒಂದು ವಾರದಿಂದ ಈ ವಲಸಿಗರಲ್ಲಿ ಸೋಂಕಿನ ಪ್ರಮಾಣ ಶೇ. 25ರಿಂದ 30ಕ್ಕೆ ಇಳಿಕೆಯಾಗಿದ್ದು, ಸ್ಥಳೀಯರಲ್ಲಿ ಸೋಂಕು ವ್ಯಾಪಿಸಿದೆ. ಜತೆಗೆ ಸೋಂಕುಪೀಡಿತರ ಸಂಖ್ಯೆ ದ್ವಿಗುಣಗೊಳ್ಳುತ್ತಿದೆ.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.