ಕಿತ್ತೂರು ಉತ್ಸವಕ್ಕೆ ಸಿಗಲಿ ರಾಜ್ಯಮಟ್ಟದ ಮಾನ್ಯತೆ


Team Udayavani, Oct 23, 2021, 11:25 AM IST

ಕಿತ್ತೂರು ಉತ್ಸವಕ್ಕೆ ಸಿಗಲಿ ರಾಜ್ಯಮಟ್ಟದ ಮಾನ್ಯತೆ

ಬೆಳಗಾವಿ: ಸತತವಾಗಿ ಕಾಡುತ್ತಲೇ ಇರುವ ಕೊರೊನಾ ಹಾವಳಿ ನಡುವೆ ಐತಿಹಾಸಿಕ ಕಿತ್ತೂರು ಉತ್ಸವಕ್ಕೆ ಇಡೀ ಕಿತ್ತೂರು ಸಂಸ್ಥಾನ ಸಜ್ಜಾಗಿದ್ದು, ಜಿಲ್ಲಾಡಳಿತ ಕೊರೊನಾ ಮಾರ್ಗಸೂಚಿ ಅನ್ವಯ ಎರಡು ದಿನಗಳ ಉತ್ಸವದ ಅರ್ಥಪೂರ್ಣ ಆಚರಣೆಗೆ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಉತ್ಸವದ ಈ ಬಾರಿಯ ವಿಶೇಷ ಆಕರ್ಷಣೆ ಎಂದರೆ ಬಹಳ ವರ್ಷಗಳ ನಂತರ ಮುಖ್ಯಮಂತ್ರಿಗಳು ಉತ್ಸವದ ಉದ್ಘಾಟನೆಗೆ ಬರುತ್ತಿದ್ದಾರೆ.

ಉತ್ಸವಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬ ಮೂಢ ನಂಬಿಕೆ ಮಾತುಗಳಿಗೆ ಕಿವಿಗೊಡದೆ ಸಿಎಂ ಬಸವರಾಜ ಬೊಮ್ಮಾಯಿ ಉತ್ಸವದ ಉದ್ಘಾಟನೆಗೆ ಬರುತ್ತೇನೆಂದು ಹೇಳಿರುವುದು ವಿಶೇಷ. 2012ರಲ್ಲಿ ಜಗದೀಶ ಶೆಟ್ಟರ ಉತ್ಸವ ಉದ್ಘಾಟನೆ ಮಾಡಿದ ಕೊನೆಯ ಮುಖ್ಯಮಂತ್ರಿ. ಕಿತ್ತೂರು ಉತ್ಸವಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬ ಭಯದಿಂದ ಹಿಂದಿನ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ, ಯಡಿಯೂರಪ್ಪ, ಸಿದ್ದರಾಮಯ್ಯ ಬಂದಿರಲಿಲ್ಲ.

ಹೀಗಾಗಿ ಸಹಜವಾಗಿಯೇ ಈಗಿನ ಸಿಎಂ ಬಸವರಾಜ ಬೊಮ್ಮಾಯಿ ಆಗಮನದ ಬಗ್ಗೆ ಅನುಮಾನಗಳಿದ್ದವು. ಆದರೆ ಬೊಮ್ಮಾಯಿ ಅವರೇ ಉತ್ಸವಕ್ಕೆ ಬರುವುದಾಗಿ ಹೇಳುವ ಮೂಲಕ ಎಲ್ಲ ಅನುಮಾನಗಳಿಗೆ ತೆರೆ ಎಳೆದಿದ್ದಾರೆ. ಮುಖ್ಯಮಂತ್ರಿಗಳಿಗೆ ಜಿಲ್ಲಾಡಳಿತದ ಜತೆ ಕಿತ್ತೂರಿನ ಜನತೆ ಸಹ ಅದ್ಧೂರಿ ಸ್ವಾಗತ ನೀಡಲು ಸಜ್ಜಾಗಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ 3 ದಿನಗಳ ಬದಲಾಗಿ ಎರಡು ದಿನಗಳಿಗೆ ಉತ್ಸವ ಸೀಮಿತವಾಗಿರುವುದರಿಂದ ಈ ಎರಡು ದಿನಗಳನ್ನೇ ಅರ್ಥ ಪೂರ್ಣ ಹಾಗೂ ಅವಿಸ್ಮರಣೀಯವಾ ಗಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕಿತ್ತೂರಿಗೆ ಅಲಂಕಾರದ ಮೂಲಕ ಹೊಸ ರೂಪ ನೀಡಲಾಗಿದೆ. ಮುಖ್ಯಮಂತ್ರಿಗಳಿಗೆ ಸವಾಲು: ಈ ಬಾರಿಯ ಕಿತ್ತೂರು ಉತ್ಸವ ಎರಡು ಅಂಶಗಳಿಂದ ಹೆಚ್ಚು ಗಮನ ಸೆಳೆದಿದೆ. ಈ ಎರಡೂ ಅಂಶಗಳು ಮುಖ್ಯಮಂತ್ರಿಗಳ ಭಾಷಣದ ಮೇಲೆ ಅವಲಂಬಿತ ಎಂಬುದು ಇಲ್ಲಿ ಗಮನಿಸಬೇಕಾದ ಸಂಗತಿ. ಒಂದು ಕಲ್ಯಾಣ ಕರ್ನಾಟಕ ಮಾದರಿಯಲ್ಲಿ ಮುಂಬೈ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕ ಎಂದು ಮರುನಾಮಕರಣ ಹಾಗೂ ಇನ್ನೊಂದು ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಮುಖ್ಯಮಂತ್ರಿಗಳು ಘೋಷಣೆ ಮಾಡಬೇಕು ಎಂಬ ಬೇಡಿಕೆ.

ಈ ಎರಡೂ ಅಂಶಗಳು ಮುಖ್ಯಮಂತ್ರಿಗಳಿಗೆ ಒಂದು ರೀತಿಯ ಸವಾಲು ಇದ್ದಂತೆ. ಕಿತ್ತೂರು ಕರ್ನಾಟಕ ಮರುನಾಮಕರಣ ಸಂಪುಟ ಸಭೆಯಲ್ಲಿ ತೀರ್ಮಾನವಾಗಬೇಕೆಂದು ಈಗಾಗಲೇ ಹೇಳಿರುವ ಸಿಎಂ, ಉತ್ಸವದಲ್ಲಿ ಇದರ ಬಗ್ಗೆ ಯಾವ ರೀತಿ ಪ್ರಸ್ತಾಪ ಮಾಡುತ್ತಾರೆ. ಭರವಸೆ ಯಾವ ರೀತಿ ಇರುತ್ತದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಒಂದು ವೇಳೆ ಕಿತ್ತೂರು ಕರ್ನಾಟಕ ಮರುನಾಮಕರಣ ವಿಷಯದಲ್ಲಿ ಮುಖ್ಯಮಂತ್ರಿಗಳು ದೃಢ ನಿರ್ಧಾರ ತಾಳಿ ಖಚಿತ ಭರವಸೆ ಕೊಟ್ಟಿದ್ದೇ ಆದರೆ ಈ ಬಾರಿಯ ಕಿತ್ತೂರು ಉತ್ಸವ ಈ ಹಿಂದಿನ ಉತ್ಸವಗಳಿಗಿಂತ ಹೆಚ್ಚು ಬೆಳಗಲಿದೆ.

ಇದನ್ನೂ ಓದಿ:- ಉಪ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವ ಶೂನ್ಯ : ಬಿ.ವೈ.ವಿಜಯೇಂದ್ರ

ಚನ್ನಮ್ಮನ ಅರಮನೆ ಆವರಣದಲ್ಲಿ ಹೊಸ ಬೆಳಕು ಕಾಣಲಿದೆ. ಇನ್ನು 1996ರಲ್ಲಿ ಆಗಿನ ಮುಖ್ಯಮಂತ್ರಿಯಾಗಿದ್ದ ಜನತಾದಳದ ಜೆ.ಎಚ್‌.ಪಟೇಲ್‌ ಅವರು ಜನರ ಒತ್ತಾಸೆಗೆ ಸ್ಪಂದಿಸಿ ಕಿತ್ತೂರು ಉತ್ಸವವನ್ನು ಸರ್ಕಾರದ ಉತ್ಸವವನ್ನಾಗಿ ಘೋಷಣೆ ಮಾಡಿದ್ದರು. ಆದರೆ ಇದು ಈಗಲೂ ಕಿತ್ತೂರಿಗೆ ಮಾತ್ರ ಸೀಮಿತವಾಗಿರುವ ಉತ್ಸವವಾಗಿದೆ ಎಂಬ ಕೊರಗು ಜನರಲ್ಲಿದೆ. ಅದನ್ನು ದೂರ ಮಾಡಿ ರಾಜ್ಯಮಟ್ಟದ ಉತ್ಸವವನ್ನಾಗಿ ಮಾಡುವ ಜವಾಬ್ದಾರಿ ಈಗಿನ ಸಿಎಂ ಮೇಲಿದೆ. ಬೊಮ್ಮಾಯಿ ಸಹ ಜನತಾ ಪರಿವಾರದಿಂದಲೇ ಬಂದವರು ಎಂಬುದು ಗಮನಿಸಬೇಕಾದ ಸಂಗತಿ.

ಈಗ ಕೇವಲ ಜಿಲ್ಲಾಮಟ್ಟದ ಉತ್ಸವಕ್ಕೆ ಸೀಮಿತವಾಗಿರುವುದರಿಂದ ಅನುದಾನ ಬಹಳ ಕಡಿಮೆ ಪ್ರಮಾಣದಲ್ಲಿ ಬರುತ್ತಿದೆ. ಹೀಗಾಗಿ ಪ್ರತಿ ವರ್ಷ ಹೆಚ್ಚಿನ ಅನುದಾನಕ್ಕೆ ಸರ್ಕಾರದ ಮುಂದೆ ಗೋಗರೆಯಬೇಕಾದ ಸ್ಥಿತಿ ಇದೆ. ಒಂದು ವೇಳೆ ರಾಜ್ಯಮಟ್ಟದ ಉತ್ಸವವನ್ನಾಗಿ ಮಾಡಿದರೆ ಆಗ 3ರಿಂದ 5 ಕೋಟಿ ಅನುದಾನ ಬರುತ್ತದೆ. ಉತ್ಸವವನ್ನು ಇನ್ನೂ ಅದ್ಧೂರಿಯಾಗಿ ಮಾಡಬಹುದು ಎಂಬುದು ಉತ್ಸವ ಸಮಿತಿ ಸದಸ್ಯರ ಅಭಿಪ್ರಾಯ.

“ಕಿತ್ತೂರು ಉತ್ಸವವನ್ನು ರಾಜ್ಯ ಮಟ್ಟದ ಉತ್ಸವವನ್ನಾಗಿ ಮಾಡ ಬೇಕೆಂದು ಈಗಾಗಲೇ ಸಿಎಂಗೆ ಮನವ ರಿಕೆ ಮಾಡಿಕೊಡಲಾಗಿದೆ. ಸಾಧ್ಯವಾದರೆ ಈ ಉತ್ಸವದಲ್ಲಿ ನಮ್ಮ ಬೇಡಿಕೆ ಈಡೇರುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು. ನಮ್ಮ ಬೇಡಿಕೆಗೆ ಸ್ಪಂದನೆ ಸಿಗುವ ವಿಶ್ವಾಸ ಇದೆ.” „ ಮಹಾಂತೇಶ ದೊಡ್ಡಗೌಡರ, ಕಿತ್ತೂರು ಶಾಸಕ.

 ●ಕೇಶವ ಆದಿ

ಟಾಪ್ ನ್ಯೂಸ್

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.