ಯಕ್ಷ ಕಲಾವಿದರಿಗೆ ಅಕಾಡೆಮಿ ನೆರವು
Team Udayavani, May 9, 2020, 5:58 AM IST
ಸಾಂದರ್ಭಿಕ ಚಿತ್ರ.
ಕೋಟ: ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್ಡೌನ್ ಇರುವುದರಿಂದ ಸಂಕಷ್ಟಕ್ಕೆ ಒಳಗಾಗಿರುವ ಯಕ್ಷಗಾನ ಮೇಳಗಳ ಕಲಾವಿದರ ನೆರವಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಮುಂದಾಗಿದೆ.
ಅಕಾಡೆಮಿ ಅನುದಾನದ ಜತೆಗೆ ಸಾರ್ವಜನಿಕರು, ಯಕ್ಷಗಾನ ಅಭಿಮಾನಿ ಗಳಿಂದ ದೇಣಿಗೆಯನ್ನು ಸಂಗ್ರಹಿಸಿ ಕಲಾವಿದರಿಗೆ ನೀಡಲು ಚಿಂತನೆ ನಡೆಯುತ್ತಿದೆ ಎಂದು ಅಕಾಡೆಮಿ ಅಧ್ಯಕ್ಷ ಪ್ರೊ| ಎಂ.ಎ. ಹೆಗ್ಡೆ ಸ್ಪಷ್ಟಪಡಿಸಿದ್ದಾರೆ.
ಕನ್ನಡ – ಸಂಸ್ಕೃತಿ ಇಲಾಖೆ ನೆರವು
ಅರ್ಥಿಕವಾಗಿ ಸಮಸ್ಯೆಗೊಳಗಾದ ಕಲಾವಿದರಿಗೆ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ 2 ಸಾವಿರ ರೂ. ಸಹಾಯಧನ ನೀಡುವ ಯೋಜನೆಗೆ ಅಕಾಡೆಮಿ 699 ಸದಸ್ಯರನ್ನು ಶಿಫಾರಸು ಮಾಡಿದೆ. ಶೀಘ್ರದಲ್ಲಿ ಅವರ ಖಾತೆಗಳಿಗೆ ಹಣ ಜಮೆಯಾಗಲಿದೆ. ಕೇವಲ ವೃತ್ತಿ ಕಲಾವಿದರಿಗೆ ಮಾತ್ರವಲ್ಲದೆ ಕಲೆ ಯನ್ನೇ ಆಶ್ರಯಿಸಿ ಬದುಕು ತ್ತಿರುವ ತರಬೇತುದಾರರು ಮತ್ತಿತರರಿಗೂ ಈ ಸೌಲಭ್ಯ ಸಿಗಲಿದೆ.
ಬೆಳಕು ಚೆಲ್ಲಿದ ಉದಯವಾಣಿ
ಲಾಕ್ಡೌನ್ ಕಾರಣ ಯಕ್ಷಗಾನ ಮೇಳಗಳ ಈ ವರ್ಷದ ತಿರುಗಾಟ ಸ್ಥಗಿತವಾಗಿದ್ದು, ಕಲಾವಿದರು ವೇತನವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಉದಯವಾಣಿಯ ಶುಕ್ರವಾರದ ಸಂಚಿಕೆಯಲ್ಲಿ “ಕೊರೊನಾಘಾತ: ಯಕ್ಷಗಾನ ಕಲಾವಿದರಿಗೂ ಬೇಕು ನೆರವು’ ಎಂಬ ವಿಶೇಷ ವರದಿ ಪ್ರಕಟಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ