ಬೀದಿದೀಪ ಅಳವಡಿಸುವಂತೆ ಆಗ್ರಹಿಸಿ ದೊಂದಿ ಬೆಳಕಿನ ಪ್ರತಿಭಟನೆ
Team Udayavani, Nov 2, 2021, 10:49 PM IST
ಉಡುಪಿ: ಕಡಿಯಾಳಿ- ಪರ್ಕಳ ರಾ.ಹೆ. 169ರ ಮಾರ್ಗದಲ್ಲಿ ಇದುವರೆಗೆ ಬೀದಿದೀಪಗಳನ್ನು ಅಳವಡಿಸಿದೆ ಇರುವುದನ್ನು ಖಂಡಿಸಿ ಜಿಲ್ಲಾ ನಾಗರಿಕರ ಸಮಿತಿ ವತಿಯಿಂದ ಮಂಗಳವಾರ ಎಂಜಿಎಂ ಕಾಲೇಜಿನ ವಿದ್ಯಾರ್ಥಿನಿ ನಿಲಯದ ಮುಂಭಾಗದ ರಾ.ಹೆ. ಮಾರ್ಗದಲ್ಲಿ ದೊಂದಿ ಬೆಳಕಿನ ಪ್ರತಿಭಟನೆ ನಡೆಸಿದರು.
ಜಿಲ್ಲಾ ನಾಗರಿಕರ ಸಮಿತಿ ಅಧ್ಯಕ್ಷ ನಿತ್ಯಾನಂದ ಒಳಕಾಡು ಮಾತನಾಡಿ, ರಸ್ತೆ ಕಾಮಗಾರಿ ಪೂರ್ಣಗೊಂಡ ವರ್ಷ ಸಮೀಪಿಸುತ್ತಿದೆ. ಇದುವರೆಗೆ ಬೀದಿ ದೀಪ ಅಳವಡಿಸುವ ಕಾರ್ಯ ಪ್ರಾರಂಭವಾಗಿಲ್ಲ. ಇದರಿಂದಾಗಿ ರಾತ್ರಿ ಹಾಗೂ ಮುಂಜಾನೆ ಈ ಮಾರ್ಗವಾಗಿ ಸಂಚರಿಸುವ ಪಾದಚಾರಿಗಳು ಅಪಘಾತಕ್ಕೆ ತುತ್ತಾಗುತ್ತಿದ್ದಾರೆ. ಜತೆಗೆ ಮಾರ್ಗ ಬದಿಯಲ್ಲಿ ಆಳೆತ್ತರಕ್ಕೆ ಗಿಡಗಂಟಿಗಳು ಬೆಳೆದು ನಿಂತಿವೆ. ಜಿಲ್ಲಾಡಳಿತ ಹಾಗೂ ಹೆದ್ದಾರಿ ಪ್ರಾಧಿಕಾರ ಇಲಾಖೆ ಶೀಘ್ರದಲ್ಲಿ ಬೀದಿ ದೀಪಗಳನ್ನು ಅಳವಡಿಸಿ, ರಸ್ತೆ ಬದಿಯ ಹುಲ್ಲು ತೆರವುಗೊಳಿಸುವಂತೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಲಖೀಂಪುರ ಕಿಸಾನ್ ಸ್ಮತಿ ದಿವಸ ಆಚರಿಸುವಂತೆ ಸಮಾಜವಾದಿ ಪಕ್ಷ ಕರೆ
ಜಿಲ್ಲಾ ನಾಗರಿಕರ ಸಮಿತಿ ತಾರನಾಥ ಮೇಸ್ತ, ಎಂಜಿಎಂ ಕಾಲೇಜಿನ ರಿಕ್ಷಾ ನಿಲ್ದಾಣ ಚಾಲಕರು, ಗುರುರಾಜ್ ಆಚಾರ್ಯ, ಕೆ. ಬಾಲಗಂಗಾಧರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ