ಪಂಚನಬೆಟ್ಟು ಶಾಲೆ ಉಳಿಸುವಂತೆ ಪ್ರಧಾನಿಗೆ ಓಲೆ ಬರೆದ ಬಾಲೆ!


Team Udayavani, Oct 12, 2020, 3:37 PM IST

ಪಂಚನಬೆಟ್ಟು ಶಾಲೆ ಉಳಿಸುವಂತೆ ಪ್ರಧಾನಿಗೆ ಓಲೆ ಬರೆದ ಬಾಲೆ!

ಕುಂದಾಪುರ: ಊರಿಗಿರುವ ಏಕೈಕ ಪ್ರೌಢಶಾಲೆ ಯನ್ನು ಮುಚ್ಚದೆ ಉಳಿಸಿಕೊಡುವಂತೆ ಬಾಲಕಿಯೊಬ್ಬಳು ಬರೆದ ಪತ್ರಕ್ಕೆ ಪ್ರಧಾನಿ ಕಾರ್ಯಾಲಯ ಸ್ಪಂದಿಸಿದೆ.

ಹಿರಿಯಡ್ಕ ಪಂಚನಬೆಟ್ಟು ವಿದ್ಯಾವರ್ಧಕ ಅನುದಾನಿತ ಪ್ರೌಢಶಾಲೆಯನ್ನು ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ ಎಂಬ ಕಾರಣ ನೀಡಿ ಇನ್ನೊಂದು ಶಾಲೆ ಜತೆ ವಿಲೀನ ಮಾಡಲು ಶಿಕ್ಷಣ ಇಲಾಖೆ ಕಳೆದ ವರ್ಷ ಸೂಚಿಸಿತ್ತು. ಬಳಿಕ ಶಾಲಾಡಳಿತದ ಮನವಿಯ ಮೇರೆಗೆ ಒಂದು ವರ್ಷ ವಿನಾಯಿತಿ ನೀಡಿತ್ತು. ಈ ವರ್ಷವೂ ಅದೇ ಪರಿಸ್ಥಿತಿ ಇದೆ ಎಂದು ಇಲಾಖೆ ಅಲ್ಲಿದ್ದ ಶಿಕ್ಷಕರನ್ನು ಬೇರೆ ಶಾಲೆಗೆ ಕಳುಹಿಸಲು ಸೂಚಿಸಿತು. ಅದರಂತೆ 6 ಶಿಕ್ಷಕರ ಪೈಕಿ ಮೂವರು ಬೇರೆಡೆ ತೆರಳಿದ್ದಾರೆ. ಇದೀಗ ಶಾಲಾಡಳಿತದ ಮನವಿ ಮೇರೆಗೆ ಶಿಕ್ಷಣ ಇಲಾಖೆ ವಿಶೇಷ ಪ್ರಕರಣ ಎಂದು ಈ ವರ್ಷ ಕಲಿಕೆಗೆ ಅನುಮತಿ ನೀಡಿದೆ. ಈ ಮಧ್ಯೆ ಶಾಲಾ ವಿದ್ಯಾರ್ಥಿನಿ ವರ್ಷಿತಾ ಆರ್‌. ಅವರು ಪ್ರಧಾನಿ ಕಾರ್ಯಾಲಯಕ್ಕೆ ಪತ್ರ ಬರೆದು ಊರಿಗಿರುವ ಶಾಲೆಯನ್ನು ಉಳಿಸಿಕೊಡಬೇಕೆಂದು ಮನವಿ ಮಾಡಿದ್ದಾಳೆ.

ಸುತ್ತಲಿನ 15 ಕಿ.ಮೀ. ಜನರಿಗೆ ಈ ಪ್ರೌಢ ಶಾಲೆಯ ಅಗತ್ಯ ಇರುತ್ತದೆ. ಇಲ್ಲಿ ಹೈಸ್ಕೂಲು ಮುಚ್ಚಿದರೆ 8 ಕಿ.ಮೀ. ದೂರದ
ಹಿರಿಯಡ್ಕ, ಅಷ್ಟೇ ದೂರದ ಬೈಲೂರಿಗೆ ಹೋಗಬೇಕಾಗುತ್ತದೆ. ಗ್ರಾಮಾಂತರ ಪ್ರದೇಶದ ಮಕ್ಕಳ ಕಲಿಯುವ ಆಸೆಗೆ ನೀರೆರೆದು ಪೋಷಿಸಿ ಎಂದು ಮನವಿ ಮಾಡಿದ್ದಳು.

ಮನವಿಗೆ ಸ್ಪಂದಿಸಿದ ಪ್ರಧಾನಿ ಕಾರ್ಯಾಲಯ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಪರಾಮರ್ಶಿಸಿ ಉತ್ತರಿಸುವಂತೆ ಸೂಚಿಸಿದೆ.

30 ವರ್ಷಗಳ ಹಿಂದೆ ಆರಂಭವಾದ ಈ ಶಾಲೆಯಲ್ಲಿ 42 ವಿದ್ಯಾರ್ಥಿಗಳು ಕಲಿಯುತ್ತಿದ್ದರು. ಈ ಬಾರಿ ಎಸೆಸೆಲ್ಸಿ ಪರೀಕ್ಷೆ ಬರೆದು 10 ಮಂದಿ ಹೊರಹೋಗಿದ್ದಾರೆ. ಕೊರೊನಾ ಅಲ್ಲದೇ ಇದ್ದರೆ 30 ಮಕ್ಕಳ ಸೇರ್ಪಡೆಗೆ ವ್ಯವಸ್ಥೆ ಆಗಿತ್ತು. ಹಾಸ್ಟೆಲ್‌ ಸೌಲಭ್ಯವೂ ಇದೆ. ಡೊನೇಶನ್‌ ತೆಗೆದುಕೊಳ್ಳದ, ಕಾಡಂಚಿನ ಹಳ್ಳಿಯ ಕನ್ನಡ ಮಾಧ್ಯಮ ಶಾಲೆಯ ಮೇಲೆ ಅಧಿಕಾರಿಗಳು ದರ್ಪ ಪ್ರದರ್ಶನ ಮಾಡುತ್ತಿದ್ದಾರೆ ಎನ್ನುತ್ತಾರೆ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎ. ನರಸಿಂಹ ಅವರು.

ಶಾಲೆ ಉಳಿಯಲಿ
ನಾನು ಮೊನ್ನೆಯಷ್ಟೇ ಎಸೆಸೆಲ್ಸಿ ಮುಗಿಸಿದ್ದು ತಂಗಿ ಅದೇ ಶಾಲೆಯಲ್ಲಿ 9ನೇ ತರಗತಿ ಕಲಿಯುತ್ತಿದ್ದಾಳೆ. ಊರ ಮಕ್ಕಳಿಗೆ ಶಾಲೆ ಬೇಕೆಂಬ ನೆಲೆಯಲ್ಲಿ ಪತ್ರ ಬರೆದೆ. ಸ್ಪಂದನ ದೊರೆತದ್ದು ಸಂತಸ ತಂದಿದೆ. ಶಾಲೆ ಉಳಿಯಲಿ ಎನ್ನುವುದೇ ಬೇಡಿಕೆ.
– ವರ್ಷಿತಾ ಆರ್‌. ಪಂಚನಬೆಟ್ಟು, ಪ್ರಧಾನಿಗೆ ಪತ್ರ ಬರೆದ ವಿದ್ಯಾರ್ಥಿನಿ

ಮಾಹಿತಿ ಇಲ್ಲ
ಪ್ರಧಾನಿ ಕಾರ್ಯಾಲಯದಿಂದ ಪತ್ರ ಬಂದ ಕುರಿತು ಮಾಹಿತಿ ಇಲ್ಲ. ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದು ಇಲಾಖಾ ನಿಯಮದಷ್ಟು ಮಕ್ಕಳ ಸಂಖ್ಯೆ ಇಲ್ಲ. ಈ ವರ್ಷ ಅಲ್ಲಿರುವ ಶಿಕ್ಷಕರಿಗೆ ವೇತನ ಬಿಡುಗಡೆಗೆ ಸೂಚನೆ ಬಂದಿದ್ದು ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲಾಗುವುದು.
– ಮಂಜುಳಾ, ಕ್ಷೇತ್ರ ಶಿಕ್ಷಣಾಧಿಕಾರಿ, ಉಡುಪಿ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.