ಕೊರಟಗೆರೆ: ಸರಕು ವಾಹನದಲ್ಲಿ ಪ್ರಾಣಿಗಳಂತೆ ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳು!


Team Udayavani, Mar 13, 2022, 5:07 PM IST

1-wqwr

ಕೊರಟಗೆರೆ: ಸರ್ಕಾರ ನೀಡುವ ಹಣವನ್ನು ದುರುಪಯೋಗ ಮಾಡಿಕೊಳ್ಳಲು ಪರೀಕ್ಷೆಗೆ ಹೋಗುವ 72 ಶಾಲಾ ಮಕ್ಕಳನ್ನು ಚಿಕ್ಕ ಸರಕು ವಾಹನಗಳಲ್ಲಿ ಪ್ರಾಣಿಗಳನ್ನು ತುಂಬುವ ಹಾಗೆ ತುಂಬಿ 16 ಕಿ.ಮೀ ಸಾಗಿಸಿರುವ ಘಟನೆ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.

ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಬೈಚಾಪುರ ಬಳಿ ಇರುವ ಮುರಾರ್ಜಿ ದೇಸಾಯಿ ವಸತಿ ಶಾಲೆಯ 72 ಪಿ.ಯು.ಸಿ ವಿದ್ಯಾರ್ಥಿಗಳು ಪ್ರಯೋಗಿಕ ಪರೀಕ್ಷೆ ಬರೆಯಲು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಬರಬೇಕಿತ್ತು, ಅವರನ್ನು ಜವಾಬ್ದಾರಿಯಿಂದ ಪ್ರಾಯಾಣಿಕ ವಾಹನದಲ್ಲಿ ಕಳುಹಿಸಬೇಕಾಗಿರುವುದು ವಸತಿ ಕಾಲೇಜಿನ ಪ್ರಾಂಶುಪಾಲರ ಜವಾಬ್ದಾರಿಯಾಗಿದೆ. ಇದಕ್ಕಾಗಿ ಸರ್ಕಾರ ಸಾಕಷ್ಟು ಅನುದಾನ ನೀಡುತ್ತದೆ, ಆದರೆ ಕೆಲವು ದಿನಗಳ ಹಿಂದೆ ವಸತಿ ಕಾಲೇಜಿನವರು ಹಣ ಉಳಿಸುವ ದೆಸೆಯಿಂದ ಕಾಲೇಜಿನ 37 ಹೆಣ್ಣು ಮಕ್ಕಳು ಹಾಗೂ 35 ಗಂಡು ಮಕ್ಕಳನ್ನು ಬೈಚಾಪುರದ ಮುರಾರ್ಜಿ ದೇಸಾಯಿ ವಸತಿ ಶಾಲೆಯಿಂದ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವರೆಗೆ 16 ಕಿ.ಮಿ. ನಷ್ಟು ದೂರವನ್ನು ಚಿಕ್ಕ ಸರಕು ವಾಹನದಲ್ಲಿ ಪ್ರಾಣಿಗಳಂತೆ ತುಂಬಿ ನಿಲ್ಲಿಸಿಕೊಂಡು ಬಂದು ಇಳಿಸಿರುತ್ತಾರೆ. ಆ ಮಕ್ಕಳು ದಿನವಿಡೀ ನಿಂತುಕೊಂಡು ಅಂದು ಭೌತ ಶಾಸ್ತ್ರ ರಸಾಯನಶಾಸ್ತ್ರ, ಜೀವಶಾಸ್ತ್ರದ ಪ್ರಯೋಗಾಲಯದಪರೀಕ್ಷೆಯಲ್ಲಿ ಭಾಗಿಯಾಗಿ ಮತ್ತೆ ಕುರಿಗಳ ಹಾಗೆ ನಿಂತು ಕೊಂಡು ಹೋಗಬೇಕು, ಇದನ್ನು ಬೆಳಿಗ್ಗೆ ಗಮನಿಸಿ ಸಂಜೆಯವರೆಗು ಕಾಯ್ದು ಪತ್ರಿಕೆಯವರು ಪ್ರಶ್ನಿಸಿದಾಗ ಆಗ ಪ್ರಾಂಶುಪಾಲರು ಬಸ್ಸಿನಲ್ಲಿ ಕರೆದುಕೊಂಡು ಬರುವಂತೆ ವಿದ್ಯಾರ್ಥಿನಿಯರೊಂದಿಗೆ ಬಂದಿರುವ ಶಿಕ್ಷಕಿಗೆ ದೂರವಾಣಿ ಕರೆ ಮಾಡುತ್ತಾರೆ.

ಈಗಾಗಲೇ ಅಂತಿಮ ಹಂತದ ಪರೀಕ್ಷೆ ಬರೆಯಲು ಸಜ್ಜಾಗಿರುವ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಈ ಸರಕು ತುಂಬಿರುವ ಚಿಕ್ಕವಾಹನಗಳಲ್ಲಿ ತಕ್ಷಣ ಬ್ರೇಕ್ ಹೊಡೆದರೆ, ಇಲ್ಲ ಆಯ ತಪ್ಪಿ ಉರುಳಿದರೆ  ಆ ಮಕ್ಕಳ ಗತಿ ಮತ್ತು ಭವಿಷ್ಯವೇನು ?  ಅವರಿಗೆ ಕಾನೂನು ರಕ್ಷಣೆ ಹೇಗೆ ಎನ್ನುವ ಪರಿಜ್ಞಾನವೂ ಪ್ರಾಂಶುಪಾಲರಿಗೆ ಇಲ್ಲವೇ ಎನ್ನುವಂತಾಗಿದೆ. ಈ ಘಟನೆ ಬಗ್ಗೆ ವಸತಿ ಶಾಲೆಯ ಪ್ರಾಂಶುಪಾಲರು ಇದರಿಂದ ತಪ್ಪಿಸಿಕೊಳ್ಳಲು ಕುಂಟು ನೆಪ ಹೇಳುತ್ತಿದ್ದಾರೆ.

ತಾಲ್ಲೂಕಿನ ಬಹುತೇಕ ವಸತಿ ಶಾಲೆಗಳು ಪಟ್ಟಣ ಮತ್ತು ಗ್ರಾಮಗಳ ಹೊರಬಾದಲ್ಲಿದೆ. ಅವರುಗಳಿಗಿಲ್ಲದ ಅವ್ಯವಸ್ಥೆ ಈ ಕಾಲೇಜಿನ ಪ್ರಾಂಶುಪಾಲರಿಗೆ ಬಂದಂತಾಗಿದೆ. ಸರ್ಕಾರವು ವಸತಿ ಶಾಲೆಗಳ ವಿದ್ಯಾಭ್ಯಾಸಕ್ಕೆ, ವಿದ್ಯಾರ್ಥಿಗಳ ಆರೋಗ್ಯ ಮತ್ತು ರಕ್ಷಣೆಗೆ ಸಾಕಷ್ಟು ಹಣವನ್ನು ನೀಡುತ್ತಿದೆ. ಆದರೆ ಬೈಚಾಪುರದ ಮುರಾರ್ಜಿ ದೇಸಾಯಿ ವಸತಿಶಾಲೆಯ ಪ್ರಾಂಶುಪಾಲರಂಥಹ ವ್ಯಕ್ತಿಗಳು ಅದರಲ್ಲಿ ಬರುವ ಹಣವನ್ನು ಈ ತರಹದ ದುರುಪಯೋಗ ಮಾಡಿಕೊಳ್ಳುತ್ತಾರೆ. ಒಂದುವೇಳೆ ಇಂತಹ ಪರಿಸ್ಥಿತಿಗಳಲ್ಲಿ ಅಪಘಾತ ಮತ್ತು ಅವಗಡಗಳಾದರೆ ಮಕ್ಕಳ ಭವಿಷ್ಯಕ್ಕೆ ಜವಾಬ್ದಾರಿ ಯಾರು ಎನ್ನುವುದು ಪ್ರಶ್ನೆಯಾಗಿದೆ. ಕ್ಷೇತ್ರದ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಈ ಘಟನೆ ಬಗ್ಗೆ ಪರಿಶೀಲಿಸಿ ತನಿಖೆ ನಡೆಸಿ ಸಂಬಂಧಪಟ್ಟವರ ವಿರುದ್ದ ಶಿಸ್ತುಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಮತ್ತೊಂದು ಕಾಲೇಜಿನ ಪ್ರಾಂಶುಪಾಲರು ಈ ರಿತಿಯ ಬೇಜವಾಬ್ದಾರಿ ಕರ್ತವ್ಯ ಲೋಪವನ್ನು ಮಾಡುತ್ತಾರೆ.

ಶಾಲಾ ಮತ್ತು ಕಾಲೇಜಿನ ವಿದ್ಯಾರ್ಥಿಗಳನ್ನು ಸರಕು ವಾಹನದಲ್ಲಿ ತುಂಬಿಕೊಂಡು ಬರುವುದು ತಪ್ಪು. ಈ ಘಟನೆಯನ್ನು ಪರಿಶೀಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸುತ್ತೇನೆ. – ಡಾ.ಜಿ. ಪರಮೇಶ್ವರ, ಶಾಸಕ

ಎಂಡಿಆರ್‌ಎಸ್ ಬೈಚಾಪುರ ಕಾಲೇಜಿನ ೩೭ ವಿದ್ಯಾರ್ಥಿನಿಯರನ್ನು ಚಿಕ್ಕ ಸರಕು ವಾಹನದಲ್ಲಿ ೧೬ ಕಿ.ಮೀ ಪ್ರಯಾಣಮಾಡಿಸಿರುವುದು ನನ್ನ ಗಮನಕ್ಕೆ ಬಂದಿದ್ದು, ವಿದ್ಯಾರ್ಥಿನಿಯರ ಸುರಕ್ಷತೆಯಿಂದ ತಪ್ಪಾಗಿದ್ದು ಈ ಸಂಬಂಧ ಸದರಿ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ.– ನಾಹಿದಾ ಜಮ್ ಜಮ್, ತಹಶೀಲ್ದಾರ್

ಈ ಸಂಬಂಧ ಪ್ರಾಂಶುಪಾಲರಿಗೆ ಕಾರಣ ಕೇಳಿ ನೋಟೀಸ್ ನೀಡಲಾಗುವುದು. ಜಿಲ್ಲೆಯ ಎಲ್ಲಾ ವಸತಿ ಶಾಲೆಯ ಪ್ರಾಂಶುಪಾಲರಿಗೆ ಇನ್ನು ಮುಂದೆ ಈರೀತಿ ನಡೆದಲ್ಲಿ ಕಾನೂನು ಕ್ರಮ ಕೈಗೊಳ್ಳುತ್ತೇನೆ. – ಪ್ರೇಮಾ ಟಿ.ಎಲ್. ಜಂಟಿ ನಿರ್ದೇಶಕಿ, ಸಮಾಜ ಕಲ್ಯಾಣ ಇಲಾಖೆ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.