Theft: 1 ಲಕ್ಷ ರೂಪಾಯಿ ಮೌಲ್ಯದ ತುಂಬಿಸಿಟ್ಟ ಅಡಿಕೆ ಕಳವು
ಬಜಪೆ ಕೊಂಪದವಿನಲ್ಲಿ ನಡೆದ ಕೃತ್ಯ
Team Udayavani, Sep 13, 2023, 1:01 AM IST
ಬಜಪೆ: ಕೊಂಪದವು ನೆಲ್ಲಿಗುಡ್ಡೆ ನಿವಾಸಿ ಗೋವಿಂದ ಗೌಡ ಅವರ ಮನೆಯೊಳಗೆ 4 ಗೋಣಿ ಚೀಲದಲ್ಲಿ ಸುಲಿದಿಟ್ಟ ಸುಮಾರು 1 ಲಕ್ಷ ರೂ. ಮೌಲ್ಯದ 200 ಕೆ.ಜಿ. ಅಡಿಕೆಯನ್ನು ಸೆ. 8ರ ರಾತ್ರಿ ಕಳವು ಮಾಡಿರುವುದಾಗಿ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ. 5ರಂದು ಅಡಿಕೆ ಸುಲಿದು ತಲಾ 50 ಕೆಜಿಯಂತೆ 4 ಗೋಣಿ ಚೀಲಗಳಲ್ಲಿ ತುಂಬಿಸಿ ಮಾರಾಟ ಮಾಡುವ ಉದ್ದೇಶದಿಂದ ಕೊಠಡಿಯೊಳಗೆ ಇಟ್ಟಿದ್ದರು. ಜತೆಗೆ ಸುಲಿಯದ 5 ಗೋಣಿ ಚೀಲ ಅಡಿಕೆಯೂ ಇತ್ತು. ಸೆ. 9ರಂದು ಬೆಳಗ್ಗೆ ಎದ್ದು ನೋಡಿದಾಗ ಕಳವಾಗಿರುವುದು ಕಂಡು ಬಂದಿತು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಅನುಮಾನಾಸ್ಪದವಾಗಿ ವ್ಯಕ್ತಿಗಳು ಅಡಿಕೆಗಳನ್ನು ಮಾರಾಟ ಮಾಡಲು ಬಂದರೆ ಮಾಹಿತಿ ನೀಡುವಂತೆ ಬಜಪೆ ಪೊಲೀಸ್ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Hampankatta: ಪಾರ್ಕಿಂಗ್ ಸಮಸ್ಯೆಗೆ ‘ಮಲ್ಟಿ ಲೆವೆಲ್’ ಉತ್ತರ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.