ಕೆಯ್ಯೂರಿನ ಪ್ರದೀಪ್ ಕಾರ್ಯಕ್ಕೆ ಪ್ರಶಂಸೆ; ವೃದ್ಧ ದಂಪತಿಗೆ “ಮಗ’ನಾದ ವಿಶ್ವನಾಥಪುರ ಎಸ್ಐ
Team Udayavani, Jun 19, 2020, 6:48 AM IST
ಪುತ್ತೂರು: ಪುತ್ತೂರು ತಾಲೂಕು ಕೆಯ್ಯೂರಿನ ಕಣಿಯಾರು ನಿವಾಸಿ ಪ್ರಸ್ತುತ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಗಿರುವ ಪ್ರದೀಪ್ ಪೂಜಾರಿ ಅವರು ತನ್ನ ಕರ್ತವ್ಯ ವ್ಯಾಪ್ತಿಯಲ್ಲಿ ಯಾರೂ ಇಲ್ಲದ, ವಂಚನೆಗೆ ಒಳಗಾದ ವೃದ್ಧ ದಂಪತಿಯ ಜೀವನ ಕಥೆ ಆಲಿಸಿ ಅವರಿಗೆ ಜೀವನ ಪರ್ಯಂತ ಆಸರೆ ನೀಡಲು ನಿರ್ಧರಿಸಿರುವ ಮಾನವೀಯ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.
ಬಸವನಪುರ ಗ್ರಾಮದ ನಿವಾಸಿ ಗಳಾದ ನರಸಿಂಹಪ್ಪ (85) ಮತ್ತು ಗಂಗಮ್ಮ (75) ಎಂಬ ಹಿರಿಜೀವಗಳಿಗೆ ಪ್ರದೀಪ್ ನೆರವಾಗಿದ್ದಾರೆ.
ಈ ದಂಪತಿಯ ಮನೆಗೆ ಬ್ಯಾಂಕ್ ಸಿಬಂದಿ ಎಂದು ಹೇಳಿಕೊಂಡು ಬಂದಿದ್ದ ವ್ಯಕ್ತಿಯೋರ್ವ ಹಣ ನೀಡುವುದಾಗಿ ಹೇಳಿ ನಂಬಿಸಿ ಅವರ ಬ್ಯಾಂಕ್ ಖಾತೆ ವಿವರಗಳನ್ನು ಪಡೆದು, ಆಭರಣ ಮತ್ತು ನಗದು ದೋಚಿ ಪರಾರಿಯಾಗಿದ್ದ. ಬಗ್ಗೆ ದೂರು ನೀಡಲು ದಂಪತಿ ಠಾಣೆಗೆ ಬಂದಿದ್ದು, ಪ್ರದೀಪ್ ಅವರ ಕಷ್ಟವನ್ನು ಆಲಿಸಿ ವಂಚಕರನ್ನು ಪತ್ತೆಹಚ್ಚುವ ಭರವಸೆ ನೀಡಿದ್ದಾರೆ.
ಕೆಯ್ಯೂರಿನ ಪ್ರದೀಪ್ ಪೂಜಾರಿ
ಕೆಯ್ಯೂರು ಕಣಿಯಾರಿನ ಪ್ರದೀಪ್ ಪೂಜಾರಿ 10 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ. ಮೂಡು ಬಿದಿರೆ ಆಳ್ವಾಸ್ ಕಾಲೇಜಿನ ಹಳೆ ವಿದ್ಯಾರ್ಥಿ ಆಗಿರುವ ಅವರು ಅತ್ಯುತ್ತಮ ಕ್ರೀಡಾಪಟುವಾಗಿ ಗುರುತಿಸಿಕೊಂಡಿದ್ದರು.
ವೃದ್ಧ ದಂಪತಿಯ ನೋವನ್ನು ತಿಳಿದು ನೆರವಾಗು ತ್ತಿದ್ದು, ಮನೆ ಮಗನಂತೆ ಸ್ಪಂದಿಸುತ್ತೇನೆ.
– ಪ್ರದೀಪ್ ಪೂಜಾರಿ, ಎಸ್ಐ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ