ಸ್ವಾತಂತ್ರ್ಯದ ಕಿಚ್ಚು ಹತ್ತಿಸಿದ್ದ ಸುಬ್ಬರಾಯನ ಕೆರೆ

ಸ್ವಾತಂತ್ರ್ಯ ಹೋರಾಟಗಾರರ ಕರ್ಮಭೂಮಿ ಮೈಸೂರಿನ ಸುಬ್ಬರಾಯನ ಕೆರೆ ಮೈದಾನ

Team Udayavani, Aug 15, 2021, 6:00 PM IST

ಸ್ವಾತಂತ್ರ್ಯದ ಕಿಚ್ಚು ಹತ್ತಿಸಿದ್ದ ಸುಬ್ಬರಾಯನ ಕೆರೆ

ಮೈಸೂರು: ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ರೂಪಿಸಲು, ರಾಷ್ಟ್ರೀಯ ವಿಷಯಗಳನ್ನು ಚರ್ಚಿಸಲು,
ಜನರನ್ನು ಒಗ್ಗೂಡಿಸಲು ಮೈಸೂರಿನ ಸುಬ್ಬರಾಯನ ಕೆರೆ ಸ್ಫೂರ್ತಿಯ ಸೆಲೆಯಾಗಿತ್ತು. ಈ ಕೆರೆ ಮೈದಾನವು ಹೋರಾಟಗಾರರಿಗೆ ಅಚ್ಚು
ಮೆಚ್ಚಿನ ತಾಣವಾಗಿತ್ತು.

1942ರಿಂದ ಆರಂಭವಾದ ಕ್ವಿಟ್‌ ಇಂಡಿಯಾ ಚಳವಳಿಯಿಂದ ಸ್ವಾತಂತ್ರ್ಯ ಬಂದ 1947 ಆಗಸ್ಟ್‌ 14ರವರೆಗೆ ನಿರಂತರವಾಗಿ ನಡೆದ
ಸ್ವಾತಂತ್ರ್ಯ ಹೋರಾಟಕ್ಕೆ ಮೈಸೂರು ಭಾಗದಿಂದ ಹುಟ್ಟಿಕೊಂಡ ಸಾವಿರಕ್ಕೂ ಹೆಚ್ಚು ಹೋರಾಟಗಾರರಿಗೆ ನಗರದ ಹೃದಯ ಭಾಗದಲ್ಲಿರುವ
ಸುಬ್ಬರಾಯನಕೆರೆ ಆವರಣ ಕರ್ಮಭೂಮಿಯಾಗಿತ್ತು.

ಸ್ವಾತಂತ್ರ್ಯ ಪೂರ್ವದಲ್ಲಿದ್ದಾಗಿನಿಂದಲೂ ಇದ್ದ ಮಹಾರಾಜ, ಮರಿ ಮಲ್ಲಪ್ಪ, ಶಾರದಾ ವಿಲಾಸ ಹಾಗೂ ಬನುಮಯ್ಯ ಶಾಲಾ-ಕಾಲೇಜು
ಗಳ ವಿದ್ಯಾರ್ಥಿಗಳನ್ನು ಸಂಘಟಿಸಿ ಅವರಲ್ಲಿ ದೇಶಭಕ್ತಿಯ ಕಿಚ್ಚುಹೆಚ್ಚಿಸಿ ಹೋರಾಟಕ್ಕೆ ಧುಮುಕುವಂತೆ ಹಾಗೂ ಹೋರಾಟದ ರೂಪುರೇಷಗಳ
ಬಗ್ಗೆ ಚರ್ಚೆ ಸೇರಿದಂತೆ ಹೋರಾಟಕ್ಕೆ ಸಂಬಂಧಿಸಿದ ಎಲ್ಲಾ ಘಟನೆಗಳಿಗೂ ಸುಬ್ಬರಾಯನಕೆರೆ ಆವರಣ ಸಾಕ್ಷಿಯಾಗಿದೆ.

ಇದನ್ನೂ ಓದಿ:ಶಸ್ತ್ರಧಾರಿ ಸೈನಿಕರ ಜೊತೆ ‘ಅಪ್ಪು’ |’ಸಲಾಂ ಸೋಲ್ಜರ್, ದೇಶಕ್ಕೆ ನೀನೆ ಪವರ್’ ಎಂದ ‘ಜೇಮ್ಸ್’

ಎಚ್‌.ವೈ. ಶಾರದಾ ಪ್ರಸಾದ್‌, ಎಂ.ವೆಂಕಟಪ್ಪ, ಮೈಸೂರು ಗಫ‌ರ್‌ ಖಾನ್‌, ಎಲ್‌.ವೈ.ರಾಜಗೋಪಾಲ್‌, ಚಿತ್ರ ಕಲಾವಿದ ಎಂ.ಇ.ಗುರು
ತಿಪ್ಪೇಸ್ವಾಮಿ ಸೇರಿದಂತೆ ಅನೇಕ ನಾಯಕರುಗಳ ಪರಿಶ್ರಮದಿಂದ ಮೈಸೂರು ನಗರದಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ವಾತಂತ್ರ್ಯ
ಕ್ಕಾಗಿ ನಡೆದ ವಿವಿಧ ಹೋರಾಟ ಮತ್ತು ಸತ್ಯಾಗ್ರಹಗಳಲ್ಲಿ ಭಾಗವಹಿಸಿದ್ದರು. ಎಲ್ಲ ಹೋರಾಟ ಮತ್ತು ಸತ್ಯಾಗ್ರಹಗಳು ಸುಬ್ಬರಾಯನ ಕರೆ
ಆವರಣದಲ್ಲಿಯೇ ನಡೆದಿರುವುದು ವಿಶೇಷ.

ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನ: ಭಾರತ ಸ್ವಾತಂತ್ರ್ಯಕ್ಕಾಗಿ ಮೈಸೂರಿನಲ್ಲಿ ನಡೆದ ಹೋರಾಟಗಳಿಗೆ ನಿದರ್ಶನವಾಗಿದ್ದ ಹಾಗೂ
ಹೋರಾಟಗಾರರಿಗೆ ಕರ್ಮಭೂಮಿಯಾಗಿದ್ದ ಸುಬ್ಬರಾಯನ ಕೆರೆಗೆ ಸ್ವಾತಂತ್ರ್ಯ ನಂತರ ಮೈಸೂರು ಮುನ್ಸಿಪಾಲ್‌ ಸ್ವಾತಂತ್ರ್ಯ ಹೋರಟ
ಗಾರರ ಉದ್ಯಾನ ಎಂದು ಹೆಸರಿಡಲಾಯಿತು. ಜೊತೆಗೆ ಮಹಾತ್ಮ ಗಾಂಧೀಜಿ ಅವರ ತಂಡ ದಂಡಿ ಯಾತ್ರೆ ಕೈಗೊಂಡ ನೆನಪಿಗಾಗಿ ದಂಡಿ
ಯಾತ್ರೆ ಸ್ಮಾರಕವನ್ನೂ ನಿರ್ಮಿಸಲಾಗಿದೆ. ಜೊತೆಗೆ ಗ್ರಂಥಾಲಯ ನಿರ್ಮಾಣ ಮಾಡಿ, ಓದುಗರಿಗೆ ಅನುಕೂಲ ಕಲ್ಪಿಸಲಾಗಿದೆ.
ಸುಬ್ಬರಾಯನ ಕೆರೆ ಅಲ್ಲದೆ ನಗರದ ಟೌನ್‌ಹಾಲ್‌ ಮೈದಾನ, ಕಾಡಾ ಕಚೇರಿಯ ದಕ್ಷಿಣ ಭಾಗದಲ್ಲಿದ್ದ ಖಾಲಿ ಪ್ರದೇಶ, ರೇಷ್ಮೆ ಕಾರ್ಖಾನೆ ವೃತ್ತ ಹಾಗೂ ಮಹಾರಾಜ ಕಾಲೇಜು ವಿದ್ಯಾರ್ಥಿ ನಿಲಯಗಳು ಸ್ವಾತಂತ್ರ್ಯ ಹೋರಾಟವನ್ನು ನೆನಪಿಸುವ ಪ್ರಮುಖಸ್ಥಳಗಳಾಗಿವೆ.

ಕಟ್ಟ ಕಡೆಯ ಭಾಷಣ,
ಹೋರಾಟದ ಸಭೆ
1947ರ ಆಗಸ್ಟ್‌ 14ರಂದು ಸಾಯಂ ಕಾಲ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಮೈಸೂರು ರಾಜ್ಯದ ಮೊದಲ ಮುಖ್ಯಮಂತ್ರಿಯಾಗಿದ್ದ ಕ್ಯಾಸಂಬಳ್ಳಿ ಚಂಗಲರಾಯ ರೆಡ್ಡಿ ಅವರು ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವಂತೆ ಸುಬ್ಬರಾಯನ ಕೆರೆಯಲ್ಲಿ ಅದ್ಭುತ ಭಾಷಣ ಮಾಡಿದ್ದರು. ಇದೇ ಕಟ್ಟ ಕಡೆಯ ಹೋರಾಟದ ಸಭೆ ಮತ್ತುಭಾಷಣವಾಗಿತ್ತು ಎಂದು ಇತಿಹಾಸ ತಜ್ಞರು ಸ್ಮರಿಸುತ್ತಾರೆ.

-ಸತೀಶ್‌ ದೇಪುರ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.