ಸುಬ್ರಹ್ಮಣ್ಯ: ಸಾಕು ನಾಯಿಯನ್ನು ಹೊತ್ತೊಯ್ದ ಚಿರತೆ
Team Udayavani, Mar 13, 2023, 10:29 AM IST
ಸುಬ್ರಹ್ಮಣ್ಯ: ಸಾಕು ನಾಯಿಯನ್ನು ಚಿರತೆಯೊಂದು ತಡರಾತ್ರಿ ದಾಳಿ ನಡೆಸಿ ಹೊತ್ತೊಯ್ದ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಕೈಕಂಬ ಎಂಬಲ್ಲಿ ನಡೆದಿದೆ.
ಸುಬ್ರಹ್ಮಣ್ಯ ಗ್ರಾಮದ ಕೈಕಂಬ ಬಳಿಯ ವೆಂಕಟಪುರ ಲೀಲಾವತಿ ದೇವರಾಜ್ ಅವರ ಮನೆಯ ಸಾಕು ನಾಯಿಯನ್ನು ತಡರಾತ್ರಿ ಚಿರತೆ ದಾಳಿ ನಡೆಸಿ ಹೊತ್ತೊಯ್ದಿದೆ.
ಮನೆಯ ಎರಡು ಸಾಕು ನಾಯಿಗಳು ಮನೆಯ ಗೇಟ್ ಬಳಿಯಿದ್ದ ವೇಳೆ ಚಿರತೆ ದಾಳಿ ನಡೆಸಿ ಒಂದು ನಾಯಿಯನ್ನು ಹೊತ್ತೊಯ್ದಿದೆ. ನಾಯಿಯ ಕೂಗಾಟ ಕೇಳಿ ಕೆಲಸದಾಳು ಎಚ್ಚರಗೊಂಡಿದ್ದು, ಕೆಲಸದಾಳುವಿನ ಎದುರಲ್ಲೇ ಚಿರತೆ ನಾಯಿ ಮೇಲೆ ದಾಳಿ ನಡೆಸಿರುವುದು ಮನೆಯಲ್ಲಿ ಅಳವಡಿಸಲಾದ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ.
ಚಿರತೆ ಹಾವಳಿ ಇರುವುದರಿಂದ ದ್ವಿಚಕ್ರ ವಾಹನ ಸವಾರರು ಜಾಗೃತೆ ವಹಿಸುವಂತೆ ತಿಳಿಸಲಾಗಿದೆ. ಅಲ್ಲದೇ ಸ್ಥಳೀಯರಲ್ಲಿ ಆತಂಕ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ