ಇಂದು ನಾಡಿನೆಲ್ಲೆಡೆ ಸುಬ್ರಹ್ಮಣ್ಯ ಷಷ್ಠಿ
Team Udayavani, Dec 9, 2021, 5:44 AM IST
ಉಡುಪಿ/ಮಂಗಳೂರು/ಸುಬ್ರಹ್ಮಣ್ಯ: ಬುಧವಾರ ವಿವಿಧ ನಾಗ ಮತ್ತು ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ಸ್ಕಂದ ಪಂಚಮಿ ಉತ್ಸವ ನಡೆಯಿತು. ಗುರುವಾರ ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವ ಜರಗಲಿದೆ.
ದೇವಸ್ಥಾನಗಳಲ್ಲಿ ವಿಶೇಷ ಅಭಿಷೇಕಗಳು, ಸಂತರ್ಪಣೆ, ಪೂಜೆ, ಉತ್ಸವಾದಿಗಳು ನಡೆಯಲಿವೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಉತ್ಸವದ ಅಂಗವಾಗಿ ಡಿ. 9ರ ಬೆಳಗ್ಗೆ 6.58ರ ವೃಶ್ಚಿಕ ಲಗ್ನ ಸುಮೂಹುರ್ತದಲ್ಲಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರ ಬ್ರಹ್ಮರಥಾರೋಹಣ ನಡೆಯಲಿದೆ.
ಚಿಕ್ಕ ರಥದಲ್ಲಿ ಉಮಾಮಹೇಶ್ವರ ದೇವರು ಆಸೀನರಾಗಲಿದ್ದಾರೆ. ಅನಂತರ ಸುವರ್ಣ ವೃಷ್ಟಿಯಾಗಿ ಚಿಕ್ಕ ರಥೋತ್ಸವ, ಚಂಪಾಷಷ್ಠಿ ಮಹಾರಥೋತ್ಸವ ಜರಗಲಿದೆ.
ಪಾಸ್ ವ್ಯವಸ್ಥೆ
ಕುಕ್ಕೆ ಕ್ಷೇತ್ರವು ವಿದ್ಯುದ್ದೀಪಾಲಂಕಾರದಿಂದ ಶೋಭಿಸುತ್ತಿದೆ. ಈ ಹಿಂದೆ ಬ್ರಹ್ಮರಥ ಎಳೆದ ಬೆತ್ತವನ್ನು ಭಕ್ತರು ತುಂಡು ಮಾಡಿ ಪ್ರಸಾದ ರೂಪದಲ್ಲಿ ಮನೆಗಳಿಗೆ ಕೊಂಡೊಯ್ಯುತ್ತಿದ್ದರು.
ಇದನ್ನೂ ಓದಿ:ನಿರಂತರ ಅಧ್ಯಯನ ಶೀಲ : ಮರೆಯಾದ ಮೇರು ಮಿಲಿಟರಿ ಸಾಧಕ ರಾವತ್
ಅದಕ್ಕಾಗಿ ಭಾರೀ ಪೈಪೋಟಿ ನಡೆಯುತ್ತಿದ್ದ ಕಾರಣ ಮತ್ತು ಪ್ರಸ್ತುತ ಕ್ಷೇತ್ರದಲ್ಲಿ ದಾಖಲೆಯ ಸೇವೆಗಳು ನೆರವೇರುವುದರಿಂದ ಪ್ರಸಾದದಲ್ಲಿ ಉಪಯೋಗಿಸಲು ಬೆತ್ತ ಕಡಿಮೆಯಾಗಬಾರದು ಎಂಬ ಕಾರಣದಿಂದ ಆ ಬೆತ್ತವನ್ನು ಕ್ಷೇತ್ರದಲ್ಲೇ ಉಳಿಸಿಕೊಳ್ಳಲಾಗುತ್ತದೆ. ರಥ ಎಳೆಯಲು ನೂಕು ನುಗ್ಗಲು ಉಂಟಾಗುವುದನ್ನು ತಪ್ಪಿಸಲು ರಥ ಎಳೆಯುವವರಿಗೆ ಪಾಸ್ ವ್ಯವಸ್ಥೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ