ಸುಬ್ರಹ್ಮಣ್ಯ ನಿರಂತರ ಮಳೆ; ಕುಮಾರಧಾರಾ ನೀರಿನ ಮಟ್ಟ ಏರಿಕೆ
Team Udayavani, Jul 6, 2020, 5:50 AM IST
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಸುತ್ತ ಮುತ್ತಲಿನ ಪ್ರದೇಶದಲ್ಲಿ ರವಿವಾರವೂ ಮಳೆಯಾಗಿದ್ದು, ಕುಮಾರಧಾರಾ ನದಿ ನೀರಿನ ಹರಿವು ಹೆಚ್ಚಳಗೊಂಡಿದೆ.
ಕುಮಾರ ಪರ್ವತ ಹಾಗೂ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿದ ಪರಿಣಾಮ ನದಿ ನೀರಿನ ಮಟ್ಟ ಹೆಚ್ಚಳವಾಗಿದ್ದು, ಸುಬ್ರಹ್ಮಣ್ಯ ಸುತ್ತಮುತ್ತಲಿನ ಪರಿಸರದಲ್ಲೂ ಭಾರೀ ಮಳೆಯಾಗಿದೆ.
ಸಣ್ಣ ಪುಟ್ಟ ನದಿ, ತೊರೆಗಳು ನಿರಂತರ ಮಳೆಯಿಂದಾಗಿ ತುಂಬಿ ಹರಿಯುತ್ತಿವೆ. ಅಲ್ಲದೆ ಕೆಲವೊಂದು ತಗ್ಗು ಪ್ರದೇಶ ಹಾಗೂ ಕೃಷಿ ತೋಟಗಳಿಗೆ ಅಲ್ಪ ಪ್ರಮಾಣದಲ್ಲಿ ನೀರು ತುಂಬಿತ್ತು. ಜನರ ಓಡಾಟ, ವಾಹನ ಸಂಚಾರಕ್ಕೆ ಸ್ವಲ್ಪ ಮಟ್ಟಿಗೆ ತೊಡಕು ಉಂಟಾಗಿದೆ. ಆದರೆ ಯಾವುದೇ ಹಾನಿ ಸಂಭವಿಸಿಲ್ಲ.
ಪುತ್ತೂರು, ಸುಳ್ಯ: ಉತ್ತಮ ಮಳೆ
ಪುತ್ತೂರು/ಸುಳ್ಯ: ಉಭಯ ತಾಲೂಕಿನ ವಿವಿಧ ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ನದಿ, ಹೊಳೆ ನೀರಿನ ಮಟ್ಟ ಹೆಚ್ಚಳಗೊಂಡಿದೆ. ಯಾವುದೇ ಹಾನಿ ಉಂಟಾದ ಬಗ್ಗೆ ವರದಿಯಾಗಿಲ್ಲ.
ಬಂಟ್ವಾಳ: ಸಾಧಾರಣ ಮಳೆ
ಬಂಟ್ವಾಳ: ಕೆಲವು ದಿನಗಳಲ್ಲಿ ಅಬ್ಬರಿಸಿದ್ದ ಮಳೆಯ ತೀವ್ರತೆ ರವಿವಾರ ಕಡಿಮೆಯಾಗಿದ್ದು, ತಾಲೂಕಿನಲ್ಲಿ ರವಿವಾರ ಸಾಧಾರಣ ಮಳೆಯಾಗಿದೆ. ಬೆಳಗ್ಗೆ ಹಾಗೂ ಸಂಜೆಯ ಕೊಂಚಮಟ್ಟಿನ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ