ಸಬ್‌ ರಿಜಿಸ್ಟ್ರಾರ್‌ ಕಚೇರಿ ಮತ್ತೆ ಕಾರ್ಯಾರಂಭ

ರಿಯಲ್‌ ಎಸ್ಟೇಟ್‌ ಸೇರಿದಂತೆ ನೋಂದಣಿ ಕಾರ್ಯಗಳಿಗೆ ಚಾಲನೆ

Team Udayavani, Jun 8, 2021, 2:18 AM IST

ಸಬ್‌ ರಿಜಿಸ್ಟ್ರಾರ್‌ ಕಚೇರಿ ಮತ್ತೆ ಕಾರ್ಯಾರಂಭ

ಮಂಗಳೂರು/ಉಡುಪಿ: ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಒಂದು ತಿಂಗಳಿನಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸ್ಥಗಿತಗೊಂಡಿದ್ದ ನೋಂದಣಿ ಕಚೇರಿ ಗಳು ಸೋಮವಾರ ಮತ್ತೆ ಪ್ರಾರಂಭ ಗೊಂಡಿದ್ದು, ನೋಂದಣಿ ಕಾರ್ಯಕ್ಕೆ ಚಾಲನೆ ಸಿಕ್ಕಿದೆ.

ಕೊರೊನಾ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೋಂದಣಿ ಕಚೇರಿಗಳನ್ನು ಮೇ 7ರಿಂದ ಮುಚ್ಚಲಾಗಿತ್ತು. ಇದೀಗ ಕೊರೊನಾ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ತೆರೆಯಲು ರಾಜ್ಯ ಸರಕಾರ ಅನುಮತಿಸಿದೆ.

ದ.ಕ. ಜಿಲ್ಲೆಯಲ್ಲಿ 9 ಹಾಗೂ ಉಡುಪಿ ಜಿಲ್ಲೆಯಲ್ಲಿ 6 ಉಪನೋಂದಣಿ ಕಚೇರಿಗಳು ಕಾರ್ಯಾಚರಿಸುತ್ತಿವೆ. ಜಿಲ್ಲಾ ನೋಂದಣಿ ಕಚೇರಿಗಳು ಹಾಗೂ ಮಂಗಳೂರು, ಮೂಲ್ಕಿ, ಮೂಡುಬಿದಿರೆ, ಬಂಟ್ವಾಳ, ಬೆಳ್ತಂಗಡಿ, ವಿಟ್ಲ, ಪುತ್ತೂರು, ಸುಳ್ಯ ಹಾಗೂ ಉಡುಪಿ, ಕುಂದಾಪುರ, ಬ್ರಹ್ಮಾವರ, ಬೈಂದೂರು, ಶಂಕರನಾರಾಯಣ, ಕಾರ್ಕಳದಲ್ಲಿ ಉಪನೊಂàದಣಿ ಕಚೇರಿಗಳಿವೆ.

ಆಸ್ತಿ ಖರೀದಿ ಹಾಗೂ ಮಾರಾಟಕ್ಕೆ ಸಂಬಂಧಿಸಿ ನೋಂದಣಿಗೆ ದಿನ ನಿಗದಿಗೊಳಿಸಿ ಉಪನೋಂದಣಿ ಕಚೇರಿಯಿಂದ ಟೋಕನ್‌ ಪಡೆಯಬೇಕಾಗುತ್ತದೆ. ಅದರಂತೆ ಕೆಲವು ಮಂದಿ ಟೋಕನ್‌ ಪಡೆದುಕೊಂಡಿದ್ದರು. ಆದರೆ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕಚೇರಿ ಕಲಾಪ ಸ್ಥಗಿತಗೊಂಡ ಕಾರಣ ನೋಂದಣಿ ಕಾರ್ಯ ನಡೆದಿರಲಿಲ್ಲ. ಇದೀಗ ಅವರೆಲ್ಲರೂ ಹೊಸದಾಗಿ ದಿನ ನಿಗದಿಗೊಳಿಸಿ ಮತ್ತೆ ಟೋಕನ್‌ ಪಡೆಯಬೇಕಾಗುತ್ತದೆ.

ಉಪ ನೋಂದಣಾಧಿಕಾರಿ ಕಚೇರಿಗಳನ್ನು ಮುಚ್ಚಿದ್ದರಿಂದ ಕರಾವಳಿ ಜಿಲ್ಲೆಯ ಆರ್ಥಿಕತೆಯ ಮೇಲೂ ಪರಿಣಾಮ ಬೀರಿತ್ತು. ಆಸ್ತಿ, ಫ್ಲಾಟ್‌, ಅಂಗಡಿ ಕಟ್ಟಡಗಳ ಖರೀದಿ ಮತ್ತು ಮಾರಾಟ ಸೇರಿದಂತೆ ರಿಯಲ್‌ ಎಸ್ಟೇಟ್‌ ಉದ್ಯಮಕ್ಕೂ ಹಿನ್ನಡೆಯಾಗಿತ್ತು.
ಅದುದರಿಂದ ಕೆಲವು ಮಾರ್ಗಸೂಚಿಗಳನ್ನು ಅಳವಡಿಸಿ ಶೇ. 50ರಷ್ಟು ಕಚೇರಿ ನಿರ್ವಹಣೆ ಸೂತ್ರದಲ್ಲಿ ಸಬ್‌ ರಿಜಿಸ್ಟ್ರಾರ್‌ ಕಚೇರಿ ತೆರೆಯಲು ಅನುಮತಿ ನೀಡಬೇಕೆಂಬ ಬೇಡಿಕೆ ರಿಯಲ್‌ಎಸ್ಟೇಟ್‌ ಕ್ಷೇತ್ರದಿಂದ ವ್ಯಕ್ತವಾಗಿತ್ತು.

ನೋಂದಣಿ ಮತ್ತು ಮುದ್ರಾಂಕ ಇಲಾಖೆ ಸರಕಾರಕ್ಕೆ ಅತೀ ಹೆಚ್ಚು ಆದಾಯ ತರುವ ಇಲಾಖೆಗಳಲ್ಲೊಂದಾಗಿದೆ. ಲಾಕ್‌ಡೌನ್‌ ಪೂರ್ವದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಪ್ರತಿದಿನ ಸರಾಸರಿ ಸುಮಾರು 1.5 ಕೋಟಿ ರೂ. ಸರಕಾರದ ಬೊಕ್ಕಸಕ್ಕೆ ಆದಾಯ ಬರುತ್ತಿತ್ತು. 2021-22ನೇ ಸಾಲಿನ ಬಜೆಟ್‌ನಲ್ಲಿ ಈ ಇಲಾಖೆಗೆ 12,665 ಕೋಟಿ ರೂ. ರಾಜಸ್ವ ಸಂಗ್ರಹಣೆ ಗುರಿ ನಿಗದಿಪಡಿಸಲಾಗಿದೆ. ರಾಜ್ಯದಲ್ಲಿ ಒಟ್ಟು 254 ಸಬ್‌ ರಿಜಿಸ್ಟ್ರಾರ್‌ ಕಚೇರಿ ಇದ್ದು, 20-21ನೇ ಸಾಲಿನಲ್ಲಿ 10,480 ಕೋಟಿ ರೂ. ಆದಾಯ ಸಂಗ್ರಹವಾಗಿದೆ.

ನೋಂದಣಿ ಪ್ರಾರಂಭ
ನೋಂದಣಿ ಕಚೇರಿಗಳ ಆರಂಭಕ್ಕೆ ರವಿವಾರ ಸರಕಾರ ಆದೇಶ ಮಾಡಿದ್ದು ಸೋಮವಾರ ದಿಂದ ನೋಂದಣಿ ಕಾರ್ಯ ಆರಂಭಗೊಂಡಿದೆ. ನೋಂದಣಿಗೆ ಬಾಕಿ ಇದ್ದವರು ಕಚೇರಿಗೆ ನೇರವಾಗಿ ಬಂದು ನೋಂದಣಿ ಮಾಡಿಸಿಕೊಳ್ಳಬಹುದು.
– ರವೀಂದ್ರ ಎಲ್‌. ಪೂಜಾರ್‌, ಬಿ.ಎಸ್‌. ಶ್ರೀಧರ್‌ ಜಿಲ್ಲಾ ನೋಂದಣಿ ಅಧಿಕಾರಿಗಳು, ದ.ಕ. ಮತ್ತು ಉಡುಪಿ

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.